Get Updates
Get notified of breaking news, exclusive insights, and must-see stories!

ಕಾಡುಗಳ್ಳ ವೀರಪ್ಪನ್‌ನ ಮೀಣ್ಯಂ ದಾಳಿಗೆ 32 ವರ್ಷ: ಇಲ್ಲಿದೆ ಸಂಪೂರ್ಣ ಇತಿಹಾಸದ ವಿವರ

ಚಾಮರಾಜನಗರ, ಆಗಸ್ಟ್‌, 14: ಕಾಡುಗಳ್ಳ ವೀರಪ್ಪನ್ ನಡೆಸಿದ ಪೈಶಾಚಿಕ ಕೃತ್ಯಕ್ಕೆ ಇಂದು (ಆಗಸ್ಟ್ 14) 32 ವರ್ಷಗಳಾಗಿದ್ದರೂ ಸ್ವಾತಂತ್ರ್ಯ ದಿನದ ಮುನ್ನ ಬರುವ ಶೋಕಗೀತೆ ಇಂದಿಗೂ ಆ ಭಾಗದಲ್ಲಿ ಹಸಿರಾಗಿದೆ. ಈ ಹನೂರು ತಾಲೂಕಿನ ಮಿಣ್ಯಂ ಸಮೀಪ ಪೊಲೀಸ್ ಅಧಿಕಾರಿಗಳು ಮತ್ತು ವೀರಪ್ಪನ್ ತಂಡದ ಜೊತೆಗೆ ನಡೆದ ಗುಂಡಿನ ಚಕಮಕಿಯಲ್ಲಿ 6 ಮಂದಿ ಪೊಲೀಸರು ಹುತಾತ್ಮರಾಗಿದ್ದರು.

ವೀರಪ್ಪನ್ ಹಿಡಿದೇ ತೀರುತ್ತೇವೆ ಎಂದು ಶಪಥ ಮಾಡಿ ಕಾಡುಗಳ್ಳನ ಹುಟ್ಟಡಗಿಸಲು ತೆರಳಿದ್ದ ಎಸ್ಪಿ ಸೇರಿದಂತೆ 6 ಮಂದಿ ಪೊಲೀಸರು ಹುತಾತ್ಮರಾದ ಮಿಣ್ಯಂ ದಾಳಿ ನಡೆದು ಇಂದಿಗೆ 32 ವರ್ಷಗಳು ಕಳೆದಿವೆ. ಕಾಡುಗಳ್ಳನ ರಕ್ತಸಿಕ್ತ ಅಧ್ಯಾಯದಲ್ಲಿ ಒಂದಾದ ಹನೂರು ತಾಲೂಕಿನ ರಾಮಾಪುರ ಠಾಣಾ ವ್ಯಾಪ್ತಿಯ ಮಿಣ್ಯಂ ದಾಳಿ ಘಟನೆಯಲ್ಲಿ ಅಡಗಿ ಕುಳಿತಿದ್ದ ವೀರಪ್ಪನ್ ಏಕಾಏಕಿ ನಡುರಸ್ತೆಯಲ್ಲಿ ಪೊಲೀಸರ ಮೇಲೆ ಗುಂಡಿನ ಸುರಿಮಳೆಗೈದಿದ್ದ. ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆಯ ಮುನ್ನ ಪೊಲೀಸರಿಗೆ ಈ ಮರಣದ ಕಥೆ ಈಗಲೂ ಕಣ್ಣೀರು ತರಿಸುತ್ತದೆ.

Veerappan s Meenyam attack as 32 years today Know details

ವೀರಪ್ಪನ್ ಅಟ್ಟಹಾಸ ಎಲ್ಲೆ ಮೀರಿದ್ದ 90ರ ದಶಕದಲ್ಲಿ ಎಸ್​ಟಿಎಫ್‌​​ನಲ್ಲಿ ಕರ್ತವ್ಯ ನಿರ್ವಹಿಸಲು ಹಿಂಜರಿಯುವಂತಹ ಪರಿಸ್ಥಿತಿ ಇತ್ತು. ಆ ವೇಳೆ ಆತನನ್ನು ಹಿಡಿದೇ ತೀರುತ್ತೇವೆ ಎಂದು ಸಾಹಸತನ ತೋರಿದ್ದ ಎಸ್​​​ಪಿ ಹರಿಕೃಷ್ಣ ಹಾಗೂ ಎಸ್ಐ ಶಕೀಲ್ ಅಹ್ಮದ್ ವೀರಪ್ಪನ್​ ಮೋಸಕ್ಕೆ ಬಲಿಯಾಗಿದ್ದರು.

ಕಾಡುಗಳ್ಳನ ಮೋಸದಾಟಕ್ಕೆ ಪೊಲೀಸರು ಬಲಿ: ಎಸ್​ಟಿಎಫ್ ಪಡೆಯ ನಿರಂತರ ಕಾರ್ಯಾಚರಣೆ ವೇಳೆ ವೀರಪ್ಪನ್ ಬಂಟನಾದ ಗುರುನಾಥನ್ ಎಂಬಾತನನ್ನು ಹಿಡಿಯುವ ಅವಕಾಶ ಪೊಲೀಸರಿಗೆ ಒದಗಿ ಬಂದಿತ್ತು. ಆದರೆ ಆತ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದ. ತನ್ನ ನೆಚ್ಚಿನ ಬಂಟನನ್ನು ಕಳೆದುಕೊಂಡಿದ್ದ ವೀರಪ್ಪನ್ ಹರಿಕೃಷ್ಣ ಮತ್ತು ಶಕೀಲ್ ಅಹ್ಮದ್​​​​​ ಮೇಲೆ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದ.

ಹಠಕ್ಕೆ ಬಿದ್ದಿದ್ದ ವೀರಪ್ಪನ್​, ಕಮಲ ನಾಯ್ಕ ಎಂಬುವವನ ಮೂಲಕ ದಾಳಿ ನಡೆಸಲು ಯೋಜನೆ ರೂಪಿಸುತ್ತಾನೆ. ಕಮಲ ನಾಯ್ಕ, ವೀರಪ್ಪನ್ ಮತ್ತು ಪೊಲೀಸರಿಗೆ ಮಾಹಿತಿದಾರನಂತೆ ಕೆಲಸ ಮಾಡುತ್ತಾನೆ. ವ್ಯಾಪಾರಿಗಳ ಸೋಗಿನಲ್ಲಿ ಕಾಡುಗಳ್ಳನನ್ನು ಹಿಡಿಯಲು ಹೊರಟ ಹರಿಕೃಷ್ಣ ಮತ್ತು ಶಕೀಲ್ ಅಹ್ಮದ್ ಅವರ ಮೇಲೆ ಮಿಣ್ಯಂ ಬಳಿ ವೀರಪ್ಪನ್ ಹೊಂಚುಹಾಕಿ ಗುಂಡಿನ ದಾಳಿ ನಡೆಸುತ್ತಾನೆ. ಘಟನೆಯಲ್ಲಿ ಅಪ್ಪಚ್ಚು, ಸುಂದರ್, ಕಾಳಪ್ಪ ಸೇರಿದಂತೆ ಕಮಲನಾಯ್ಕನೂ ಮೃತಪಡುತ್ತಾನೆ. ಅಲ್ಲದೆ, ದಾಳಿಯಲ್ಲಿ ಕೆಲ ಪೊಲೀಸರು ಗಾಯಗೊಳ್ಳುತ್ತಾರೆ.

ಸ್ಮಾರಕದ ಬಳಿ ಪೊಲೀಸ್ ನಮನ: ಮೀಣ್ಯಂ ಸಮೀಪ ನಡೆದ ದಾಳಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲಾಗಿದ್ದು, ಪ್ರತಿ ವರ್ಷ ಆಗಸ್ಟ್‌ 14ರಂದು ಹುತಾತ್ಮ ಪೊಲೀಸರಿಗೆ ಪೊಲೀಸರು ಗೌರವ ವಂದನೆ ಸಲ್ಲಿಸುತ್ತಾರೆ. ಹಾಗೆಯೇ ಇಂದು ಕೂಡ ರಾಮಾಪುರ ಠಾಣೆ ಪೊಲೀಸರು ಮೀಣ್ಯಂ ಸ್ಮಾರಕದಲ್ಲಿ ಹುತಾತ್ಮರಿಗೆ ನಮಿಸಿ, ಕರಾಳ ಘಟನೆ ನೆನೆದರು‌.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+