ಕಾಡುಗಳ್ಳ ವೀರಪ್ಪನ್ನ ಮೀಣ್ಯಂ ದಾಳಿಗೆ 32 ವರ್ಷ: ಇಲ್ಲಿದೆ ಸಂಪೂರ್ಣ ಇತಿಹಾಸದ ವಿವರ
ಚಾಮರಾಜನಗರ, ಆಗಸ್ಟ್, 14: ಕಾಡುಗಳ್ಳ ವೀರಪ್ಪನ್ ನಡೆಸಿದ ಪೈಶಾಚಿಕ ಕೃತ್ಯಕ್ಕೆ ಇಂದು (ಆಗಸ್ಟ್ 14) 32 ವರ್ಷಗಳಾಗಿದ್ದರೂ ಸ್ವಾತಂತ್ರ್ಯ ದಿನದ ಮುನ್ನ ಬರುವ ಶೋಕಗೀತೆ ಇಂದಿಗೂ ಆ ಭಾಗದಲ್ಲಿ ಹಸಿರಾಗಿದೆ. ಈ ಹನೂರು ತಾಲೂಕಿನ ಮಿಣ್ಯಂ ಸಮೀಪ ಪೊಲೀಸ್ ಅಧಿಕಾರಿಗಳು ಮತ್ತು ವೀರಪ್ಪನ್ ತಂಡದ ಜೊತೆಗೆ ನಡೆದ ಗುಂಡಿನ ಚಕಮಕಿಯಲ್ಲಿ 6 ಮಂದಿ ಪೊಲೀಸರು ಹುತಾತ್ಮರಾಗಿದ್ದರು.
ವೀರಪ್ಪನ್ ಹಿಡಿದೇ ತೀರುತ್ತೇವೆ ಎಂದು ಶಪಥ ಮಾಡಿ ಕಾಡುಗಳ್ಳನ ಹುಟ್ಟಡಗಿಸಲು ತೆರಳಿದ್ದ ಎಸ್ಪಿ ಸೇರಿದಂತೆ 6 ಮಂದಿ ಪೊಲೀಸರು ಹುತಾತ್ಮರಾದ ಮಿಣ್ಯಂ ದಾಳಿ ನಡೆದು ಇಂದಿಗೆ 32 ವರ್ಷಗಳು ಕಳೆದಿವೆ. ಕಾಡುಗಳ್ಳನ ರಕ್ತಸಿಕ್ತ ಅಧ್ಯಾಯದಲ್ಲಿ ಒಂದಾದ ಹನೂರು ತಾಲೂಕಿನ ರಾಮಾಪುರ ಠಾಣಾ ವ್ಯಾಪ್ತಿಯ ಮಿಣ್ಯಂ ದಾಳಿ ಘಟನೆಯಲ್ಲಿ ಅಡಗಿ ಕುಳಿತಿದ್ದ ವೀರಪ್ಪನ್ ಏಕಾಏಕಿ ನಡುರಸ್ತೆಯಲ್ಲಿ ಪೊಲೀಸರ ಮೇಲೆ ಗುಂಡಿನ ಸುರಿಮಳೆಗೈದಿದ್ದ. ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆಯ ಮುನ್ನ ಪೊಲೀಸರಿಗೆ ಈ ಮರಣದ ಕಥೆ ಈಗಲೂ ಕಣ್ಣೀರು ತರಿಸುತ್ತದೆ.

ವೀರಪ್ಪನ್ ಅಟ್ಟಹಾಸ ಎಲ್ಲೆ ಮೀರಿದ್ದ 90ರ ದಶಕದಲ್ಲಿ ಎಸ್ಟಿಎಫ್ನಲ್ಲಿ ಕರ್ತವ್ಯ ನಿರ್ವಹಿಸಲು ಹಿಂಜರಿಯುವಂತಹ ಪರಿಸ್ಥಿತಿ ಇತ್ತು. ಆ ವೇಳೆ ಆತನನ್ನು ಹಿಡಿದೇ ತೀರುತ್ತೇವೆ ಎಂದು ಸಾಹಸತನ ತೋರಿದ್ದ ಎಸ್ಪಿ ಹರಿಕೃಷ್ಣ ಹಾಗೂ ಎಸ್ಐ ಶಕೀಲ್ ಅಹ್ಮದ್ ವೀರಪ್ಪನ್ ಮೋಸಕ್ಕೆ ಬಲಿಯಾಗಿದ್ದರು.
ಕಾಡುಗಳ್ಳನ ಮೋಸದಾಟಕ್ಕೆ ಪೊಲೀಸರು ಬಲಿ: ಎಸ್ಟಿಎಫ್ ಪಡೆಯ ನಿರಂತರ ಕಾರ್ಯಾಚರಣೆ ವೇಳೆ ವೀರಪ್ಪನ್ ಬಂಟನಾದ ಗುರುನಾಥನ್ ಎಂಬಾತನನ್ನು ಹಿಡಿಯುವ ಅವಕಾಶ ಪೊಲೀಸರಿಗೆ ಒದಗಿ ಬಂದಿತ್ತು. ಆದರೆ ಆತ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದ. ತನ್ನ ನೆಚ್ಚಿನ ಬಂಟನನ್ನು ಕಳೆದುಕೊಂಡಿದ್ದ ವೀರಪ್ಪನ್ ಹರಿಕೃಷ್ಣ ಮತ್ತು ಶಕೀಲ್ ಅಹ್ಮದ್ ಮೇಲೆ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದ.
ಹಠಕ್ಕೆ ಬಿದ್ದಿದ್ದ ವೀರಪ್ಪನ್, ಕಮಲ ನಾಯ್ಕ ಎಂಬುವವನ ಮೂಲಕ ದಾಳಿ ನಡೆಸಲು ಯೋಜನೆ ರೂಪಿಸುತ್ತಾನೆ. ಕಮಲ ನಾಯ್ಕ, ವೀರಪ್ಪನ್ ಮತ್ತು ಪೊಲೀಸರಿಗೆ ಮಾಹಿತಿದಾರನಂತೆ ಕೆಲಸ ಮಾಡುತ್ತಾನೆ. ವ್ಯಾಪಾರಿಗಳ ಸೋಗಿನಲ್ಲಿ ಕಾಡುಗಳ್ಳನನ್ನು ಹಿಡಿಯಲು ಹೊರಟ ಹರಿಕೃಷ್ಣ ಮತ್ತು ಶಕೀಲ್ ಅಹ್ಮದ್ ಅವರ ಮೇಲೆ ಮಿಣ್ಯಂ ಬಳಿ ವೀರಪ್ಪನ್ ಹೊಂಚುಹಾಕಿ ಗುಂಡಿನ ದಾಳಿ ನಡೆಸುತ್ತಾನೆ. ಘಟನೆಯಲ್ಲಿ ಅಪ್ಪಚ್ಚು, ಸುಂದರ್, ಕಾಳಪ್ಪ ಸೇರಿದಂತೆ ಕಮಲನಾಯ್ಕನೂ ಮೃತಪಡುತ್ತಾನೆ. ಅಲ್ಲದೆ, ದಾಳಿಯಲ್ಲಿ ಕೆಲ ಪೊಲೀಸರು ಗಾಯಗೊಳ್ಳುತ್ತಾರೆ.
ಸ್ಮಾರಕದ ಬಳಿ ಪೊಲೀಸ್ ನಮನ: ಮೀಣ್ಯಂ ಸಮೀಪ ನಡೆದ ದಾಳಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲಾಗಿದ್ದು, ಪ್ರತಿ ವರ್ಷ ಆಗಸ್ಟ್ 14ರಂದು ಹುತಾತ್ಮ ಪೊಲೀಸರಿಗೆ ಪೊಲೀಸರು ಗೌರವ ವಂದನೆ ಸಲ್ಲಿಸುತ್ತಾರೆ. ಹಾಗೆಯೇ ಇಂದು ಕೂಡ ರಾಮಾಪುರ ಠಾಣೆ ಪೊಲೀಸರು ಮೀಣ್ಯಂ ಸ್ಮಾರಕದಲ್ಲಿ ಹುತಾತ್ಮರಿಗೆ ನಮಿಸಿ, ಕರಾಳ ಘಟನೆ ನೆನೆದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications