ಇನ್ನೂ ತಪ್ಪಿಲ್ಲ ಸುಳ್ವಾಡಿ ವಿಷ ಪ್ರಕರಣದ ಸಂತ್ರಸ್ತರ ಪರದಾಟ
ಚಾಮರಾಜನಗರ, ಆಗಸ್ಟ್ 30: ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಸುಳ್ವಾಡಿಯ ಕಿಚ್ಚುಗುತ್ತಿ ಮಾರಮ್ಮ ದೇಗುಲದಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ ವಿಷಪ್ರಸಾದ ಸೇವಿಸಿ ಕೆಲ ಮಂದಿ ಸಾವನ್ನಪ್ಪಿದ ಪ್ರಕರಣದಲ್ಲಿ ಸಂತ್ರಸ್ತರ ಬದುಕು ಮಾತ್ರ ಇನ್ನೂ ಹಸನಾಗಿಲ್ಲ.
ಮೈತ್ರಿ ಸರ್ಕಾರವಿದ್ದ ಕಾಲದಲ್ಲಿ ಈ ದುರಂತ ನಡೆದಿತ್ತು. ಅವತ್ತಿನ ಸರ್ಕಾರ ಹಲವು ಭರವಸೆಗಳನ್ನು ನೀಡಿತ್ತಾದರೂ ಅದು ಇಂದಿಗೂ ಈಡೇರಿಲ್ಲ. ಜತೆಗೆ ಆಸ್ಪತ್ರೆಗಳಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಸರ್ಕಾರ ತಿಳಿಸಿದ್ದರೂ ಉಚಿತ ಚಿಕಿತ್ಸೆ ದೊರೆಯುತ್ತಿಲ್ಲ ಎನ್ನುವುದು ಸಂತ್ರಸ್ತರ ಅಳಲು.
ಘಟನೆಯಲ್ಲಿ 125 ಮಂದಿ ಅಸ್ವಸ್ಥರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಬದುಕುಳಿದಿದ್ದರೂ ಇನ್ನೂ ಅವರ ಆರೋಗ್ಯ ಸರಿಹೋಗಿಲ್ಲ. ಒಂದಲ್ಲ ಒಂದು ರೀತಿಯ ತೊಂದರೆ ಅನುಭವಿಸುತ್ತಲೇ ಇದ್ದಾರೆ. ದುರಂತ ನಡೆದ ಬಳಿಕ ಅಂದು ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಬಿದರಳ್ಳಿಗೆ ಭೇಟಿ ನೀಡಿದ ವೇಳೆ ಸಂತ್ರಸ್ತರ ಪ್ರತಿ ಕುಟುಂಬಕ್ಕೆ 3 ಎಕರೆ ಜಮೀನು, ಅದಕ್ಕೆ ಕೊಳವೆ ಬಾವಿ, ವಾಸಕ್ಕೆ ಮನೆ, ಸರಕಾರಿ ಉದ್ಯೋಗ, ಉಚಿತ ವೈದ್ಯಕೀಯ ಸೇವೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದ್ದರು. ಆದರೆ ಅದು ಇನ್ನೂ ಈಡೇರಿಲ್ಲ. ವಿಷ ಪ್ರಸಾದ ಸೇವಿಸಿದ ಮಕ್ಕಳು ಈಗ ಶಾಲೆಗೆ ಹೋಗುವಾಗ ಮಂಪರು ನಿದ್ರೆಗೆ ಜಾರುವುದು ಸೇರಿದಂತೆ ಹಲವು ತೊಂದರೆ ಅನುಭವಿಸುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿ ರಕ್ತ ಪರೀಕ್ಷೆ, ಔಷಧ, ಚುಚ್ಚುಮದ್ದು ಹೀಗೆ ಹಣವನ್ನು ನೀಡಬೇಕಾಗುತ್ತದೆ.

ಇಷ್ಟೇ ಅಲ್ಲದೆ ಸಂತ್ರಸ್ತರು ಬಿಸಿಲಿಗೆ ಮುಖವೊಡ್ಡಲು ಕಷ್ಟಪಡುತ್ತಿದ್ದಾರೆ. ಕಣ್ಣು ಉರಿ, ಹೊಟ್ಟೆ ಉರಿ ಆಗಾಗ್ಗೆ ಕಾಡುತ್ತಿದೆ. ಹೀಗಾಗಿ ಸಂತ್ರಸ್ತರು ತೊಂದರೆಯಲ್ಲೇ ಕಾಲ ಕಳೆಯುವಂತಾಗಿದೆ. ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಸಂಕಷ್ಟ ಅನುಭವಿಸುವಂತಾಗಿದೆ. ಕೆಲವು ಕುಟುಂಬಗಳಲ್ಲಿ ಮನೆಯಲ್ಲಿ ದುಡಿಯುವವರೇ ಇಲ್ಲದಾಗಿದೆ. ಇನ್ನು ದುಡಿಯೋಣ ಎಂದರೂ ಆರೋಗ್ಯದ ಸಮಸ್ಯೆ ಕಾಡುತ್ತಿದೆ. ಸುಳ್ವಾಡಿಯ ಕಿಚ್ಚುಗುತ್ತಿ ಮಾರಮ್ಮ ದೇಗುಲದಲ್ಲಿ ವಿಷ ಪ್ರಸಾದ ಸೇವಿಸಿದ ಸುಳ್ವಾಡಿ, ಎಂ.ಜಿ.ದೊಡ್ಡಿ, ಬಿದರಳ್ಳಿ ಮತ್ತಿತರ ಗ್ರಾಮಗಳ ನೂರಕ್ಕೂ ಹೆಚ್ಚು ಸಂತ್ರಸ್ತರು ತೊಂದರೆ ಅನುಭವಿಸುತ್ತಿದ್ದಾರೆ.
ಈ ಪ್ರಕರಣ ನ್ಯಾಯಾಲಯದಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದೆ. ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೂ ಸಂತ್ರಸ್ತರ ಗ್ರಾಮಗಳಿಗೂ ಸುಮಾರು 200 ಕಿ.ಮೀ. ದೂರವಿರುವುದರಿಂದ ಪ್ರಕರಣದಲ್ಲಿ ಮಹಿಳೆಯರು, ಮಕ್ಕಳು, ವಯೋವೃದ್ಧರು ತೆರಳಲು ಕಷ್ಟವಾಗುತ್ತಿದೆ. ಹೀಗಾಗಿ ಹನೂರು ಕೇಂದ್ರ ಸ್ಥಾನದಲ್ಲೇ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಬೇಕು. ಸಂತ್ರಸ್ತ ಆರು ಮಂದಿಗೆ ಸರ್ಕಾರದಿಂದ ಇನ್ನೂ ಸ್ವಲ್ಪ ಪರಿಹಾರ ದೊರಕಬೇಕಾಗಿದೆ. ಸಂತ್ರಸ್ತರಿಗೆ ಕೊನೆಯವರೆಗೂ ಉಚಿತ ವೈದ್ಯಕೀಯ ಸೇವೆ ಒದಗಿಸುವುದು ಸೇರಿದಂತೆ ಪ್ರತಿ ತಿಂಗಳು 10 ಸಾವಿರ ಪಿಂಚಣಿ ನೀಡಬೇಕು ಎನ್ನುವುದು ಸಂತ್ರಸ್ತರ ಒತ್ತಾಯ.
ನೂತನವಾಗಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಈ ನಿಟ್ಟಿನಲ್ಲಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications