IAF Plane Crash: ಭೋಗಪುರದ ಬಳಿ ಭಾರತದ ವಾಯುಸೇನೆ ಲಘು ವಿಮಾನ ಪತನ, ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
ಚಾಮರಾಜನಗರ, ಜೂನ್, 01: ಚಾಮರಾಜನಗರ ಜಿಲ್ಲೆಯ ಭೋಗಪುರ ಗ್ರಾಮದ ಬಳಿ ಭಾರತದ ವಾಯು ಸೇನೆಯ ಲಘು ವಿಮಾನ ಪತನವಾಗಿದ್ದು, ಸದ್ಯ ಈ ಘಟನೆಯಲ್ಲಿ ಪೈಲಟ್ಗಳಿಬ್ಬರೂ ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ಇನ್ನು ಈ ಬಗ್ಗೆ ಪ್ರತ್ಯಕ್ಷದರ್ಶಿಗಳು ಏನು ಹೇಳಿದ್ದಾರೆ ಅನ್ನುವ ವಿವರವನ್ನು ಗಮನಿಸಿ.
ವಿಮಾನ ತೀರಾ ಸಮೀಪದಲ್ಲೇ ಬಂದಿತ್ತು. ನೋಡುವಷ್ಟರಲ್ಲಿ ಉಲ್ಟಾ ಆಗಿ ಬ್ಲಾಸ್ಟ್ ಆಯಿತು ಎಂದು ವಿಮಾನ ಪತನದ ದೃಶ್ಯವನ್ನು ಕಂಡ ಪ್ರತ್ಯಕ್ಷದರ್ಶಿ ಸೋಮಶೇಖರ್ ಹೇಳಿದ್ದಾರೆ.

ಚಾಮರಾಜನಗರ ತಾಲೂಕಿನನ ಭೋಗಾಪುರ ಗ್ರಾಮದಲ್ಲಿ ಪತನಗೊಂಡ ವಿಮಾನದ ಬಗ್ಗೆ ಮಾತನಾಡಿದ ಅವರು, ಸಮೀಪದಲ್ಲೇ ಚಾಮರಾಜನಗರದ ಕಡೆ ವಿಮಾನ ಹೋಯಿತು. ಬಳಿಕ ಮತ್ತೇ ನಮ್ಮ ಊರಿನತ್ತ ಬಂದಿತು. ನೋಡುವಷ್ಟರಲ್ಲಿ ಇಬ್ಬರು ಹೊರ ನೆಗೆದರು. ಕೆಲವೇ ಕ್ಷಣಗಳಲ್ಲಿ ವಿಮಾನ ಉಲ್ಟಾ ಆಗಿ ಬ್ಲಾಸ್ಟ್ ಆಯಿತು. ವಿಮಾನ ಬಿದ್ದ 2 ಕಿಲೋ ಮೀಟರ್ ದೂರದಲ್ಲಿ ಇಬ್ಬರು ಪೈಲಟ್ಗಳು ಬಿದ್ದಿದ್ದರು. ನಂತರ ಸೇನೆಯವರು ಬರುತ್ತಾರೆ ಎಂದು ತಿಳಿಸಿ ಅವರು ಅಲ್ಲೇ ವಿರಮಿಸುತ್ತಿದ್ದರು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ವಿಮಾನ ಪತನ ಘಟನೆ ಹಿನ್ನೆಲೆ
ಪ್ರತಿಕೂಲ ವಾತಾವರಣದಿಂದಾಗಿ ವಾಯುಸೇನೆಯ ಕಿರಣ್ ಏರ್ ಪಥ್ U692 ವಿಮಾನ ಚಾಮರಾಜನಗರ ತಾಲೂಕಿನ ಭೋಗಾಪುರ ಗ್ರಾಮದಲ್ಲಿ ಪತನಗೊಂಡಿತ್ತು. ಇದೊಂದು ತರಬೇತಿ ವಿಮಾನವಾಗಿದ್ದು, ಭೂಮಿಕಾ ಹಾಗೂ ತೇಜ್ ಪಾಲ್ ಎಂಬವರು ಈ ವಿಮಾನವನ್ನು ಚಲಾಯಿಸುತ್ತಿದ್ದರು.
ವಿಮಾನ ಪತನಗೊಂಡ ವೇಳೆ ಇನ್ನರು ಪೈಲಟ್ಗಳು ಪ್ಯಾರಚೂಟ್ ಮೂಲಕ ತಮ್ಮನ್ನು ಬಚಾವ್ ಮಾಡಿಕೊಂಡಿದ್ದು, ಅವರು ವಿಮಾನ ಪತನಗೊಂಡ 2 ಕಿಲೋ ಮೀಟರ್ ದೂರದಲ್ಲಿ ಬಿದ್ದಿದ್ದರು. ಸದ್ಯ, ಈ ಇಬ್ಬರನ್ನು ವಾಯುಸೇನೆಯವರು ಪತ್ತೆಹಚ್ಚಿ ರಕ್ಷಣೆ ಮಾಡಿದ್ದು, ಬೆಂಗಳೂರಿಗೆ ವಿಶೇಷ ಹೆಲಿಕಾಪ್ಟರ್ನಲ್ಲಿ ಕರೆದೊಯ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ಇನ್ನು ಇಬ್ಬರಿಗೂ ಕುತ್ತಿಗೆ ಬಳಿ ಸಣ್ಣಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications