ಗುಂಡ್ಲುಪೇಟೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಈಶ್ವರಪ್ಪ
ಚಾಮರಾಜನಗರ, ಆಗಸ್ಟ್ 17: ಕಳೆದ ವಿಧಾನಸಭೆಯ ಉಪಚುನಾವಣೆಯ ಮತಯಾಚನೆ ಸಂದರ್ಭದಲ್ಲಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಪಟ್ಟಣದ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಅಂದು ಸೆಕ್ಟರ್ ಮ್ಯಾಜಿಸ್ಟ್ರೇಟ್ ಆಗಿದ್ದ ಚಿಕ್ಕಣ್ಣ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದು, ಹಿಂದೆ ವಿಚಾರಣೆಗೆ ಹಾಜರಾಗದೆ ವಾರಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಈಶ್ವರಪ್ಪನವರು ಖುದ್ದಾಗಿ ವಿಚಾರಣೆಗೆ ಆಗಮಿಸಿದರು. ಎಲ್ಲಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿದ್ದು, ಈ ಪ್ರಕರಣವನ್ನೂ ಅಲ್ಲಿಗೆ ವರ್ಗಾಯಿಸುವಂತೆ ವಕೀಲರ ಮೂಲಕ ಮನವಿ ಸಲ್ಲಿಸಿದರು.

ನಂತರ ವರದಿಗಾರರೊಂದಿಗೆ ಮಾತನಾಡಿ, ಒಂದೆಡೆ ನೆರೆ ಇನ್ನೊಂದೆಡೆ ಬರಪೀಡಿತವಾಗಿ ಜನತೆ ಸಂಕಷ್ಟದಲ್ಲಿ ಸಿಲುಕಿದ್ದರೂ ಅವರ ಬಳಿ ತೆರಳುತ್ತಿಲ್ಲ. ಸಾಲ ಮನ್ನಾ ಬಗ್ಗೆ ಮುಖ್ಯಮಂತ್ರಿಗಳಿಗೆ ಸ್ಪಷ್ಟತೆಯಿಲ್ಲದೆ ಗೊಂದಲದ ಹೇಳಿಕೆ ನೀಡುತ್ತಿದ್ದು, ರೈತರನ್ನು ಹತಾಶರನ್ನಾಗಿಸಿದೆ. ಶಾಸಕರಿಗೆ ಇನ್ನೂ ಅನುದಾನವನ್ನೇ ನೀಡದೆ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿವೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳನ್ನು ನೇಮಿಸಿದ್ದರೂ ಯಾರೂ ಭೇಟಿ ನೀಡುತ್ತಿಲ್ಲ. ರಾಜ್ಯ ಸರ್ಕಾರ ವರ್ಗಾವಣೆ ಮೂಲಕ ಹಣಮಾಡುವ ದಂಧೆಯಲ್ಲಿ ತೊಡಗಿದ್ದು ಆಡಳಿತ ವ್ಯವಸ್ಥೆ ಕುಸಿದಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಎನ್.ಮಲ್ಲೇಶ್, ರಾಜ್ಯ ಸಮಿತಿಯ ಸದಸ್ಯ ಹುಚ್ಚೇಗೌಡ, ಮುಖಂಡರಾದ ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಹಲವರು ಇದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications