Wayanad landslide: ನಾಪತ್ತೆಯಾಗಿದ್ದ 5 ಹಸುಗಳು ಮತ್ತೆ ಯಜಮಾನನ ಬಳಿಗೆ.!
ಚಾಮರಾಜನಗರ, ಆಗಸ್ಟ್, 11: ಕೇರಳದ ವಯನಾಡು ಭೂಕುಸಿತ ದುರಂತದಲ್ಲಿ ಮನುಷ್ಯರಷ್ಟೇ ಅಲ್ಲದೆ, ಪ್ರಾಣಿಗಳು ಕೂಡ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಇದೀಗ 5 ಹಸುಗಳು ಮತ್ತೇ ತನ್ನ ಒಡೆಯನ ಬಳಿ ಸೇರಿದ ಘಟನೆ ಕೇರಳದ ಚೂರಲ್ ಮಲೆ ಟೀ ಎಸ್ಟೇಟ್ನಲ್ಲಿ ನಡೆದಿದೆ.
ಚಾಮರಾಜನಗರ ಮೂಲದ ವಿನೋದ್ ಎಂಬವವರು ಹಸುವಿನ ಚೀರಾಟದಿಂದಲೇ ಎಚ್ಚರಗೊಂಡು ಬಚಾವಾಗಿದ್ದರು. ದುರಂತ ನಡೆದ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನಗಳ ಹಗ್ಗ ಬಿಚ್ಚಿ ಬಳಿಕ ತಾವು ಬೆಟ್ಟ ಏರಿ ಪಾರಾಗಿದ್ದರು. ಅದಾದ ನಂತರ, ಇಂದು (ಆಗಸ್ಟ್ 11) ಟೀ ಎಸ್ಟೇಟ್ ಒಂದರಲ್ಲಿ ತಮ್ಮ 5 ಹಸುಗಳು ಇರುವುದು ಗೊತ್ತಾಗಿ, ಆ 5 ಹಸುಗಳನ್ನು ಕಾಳಜಿ ಕೇಂದ್ರದತ್ತಲೇ ಕರೆತಂದಿದ್ದಾರೆ.

ಒಟ್ಟಿನಲ್ಲಿ ಮಳೆಯಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಹಸುಗಳು ಪವಾಡದ ರೀತಿಯಲ್ಲಿ ಪಾರಾಗಿ ತಮ್ಮ ಜೀವ ಉಳಿಸಿಕೊಂಡಿವ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಪಾಯದಿಂದ ಪಾರಾದ ಕುಟುಂಬ: ಕೇರಳದ ಭೂ ಕುಸಿತದಲ್ಲಿ ಕ್ಷಣಮಾತ್ರದಲ್ಲಿ ಚಾಮರಾಜನಗರದ ಕುಟುಂಬ ಬಚಾವ್ ಆದ ಘಟನೆ ವೈನಾಡಿನ ಚೂರಲ್ ಮಲೆಯಲ್ಲಿ ನಡೆದಿದೆ.
ಚೂರಲ್ ಮಲೆಯಲ್ಲಿದ್ದ ಚಾಮರಾಜನಗರದ ವಿನೋದ್, ಜಯಶ್ರೀ, ಸಿದ್ದರಾಜು, ಮಹೇಶ್ ಹಾಗೂ ಗೌರಮ್ಮ ಎಂಬವವರು ಪಾರಾಗಿದ್ದು, ಮೆಪಾಡಿಯಲ್ಲಿದ್ದ ಪ್ರವಿದಾ, ಲಕ್ಷ್ಮಿ, ಪುಟ್ಟಸಿದ್ದಮ್ಮ ಮತ್ತು 2 ತಿಂಗಳ ಮಗು ಚಾಮರಾಜನಗರಕ್ಕೆ ಸುರಕ್ಷಿತವಾಗಿ ಬಂದಿದ್ದಾರೆ.
ವಿನೋದ್ ಪತ್ನಿ ಬಾಣಂತಿಯಾದ ಕಾರಣ ಪ್ರವಿದಾ, ಅತ್ತೆ ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಮೆಪಾಡಿಯಲ್ಲಿದ್ದರು. ವಿನೋದ್ ಮತ್ತು ನಾಲ್ವರು ಚೂರಲ್ ಮಲೆಯಲ್ಲಿದ್ದರು. ಚೂರಲ್ ಮಲೆಗೂ ಮೆಪಾಡಿಗೂ 6 ಕಿಮೀ ದೂರದಲ್ಲಿದ್ದು ಭೂ ಕುಸಿತ ಉಂಟಾಗುವ ಕೆಲವೇ ಸಮಯಕ್ಕೂ ಮುನ್ನ ಸುರಕ್ಷಿತ ಸ್ಥಳಕ್ಕೆ ಬಂದಿದ್ದಾರೆ.
ಕುಟುಂಬ ಕಾಪಾಡಿದ ಹಸು: ಚೂರಲ್ ಮಲೆಯಲ್ಲಿ ವಿನೋದ್ ಕುಟುಂಬ ನಿದ್ರಿಸುತ್ತಿದ್ದಾಗ ಕೊಟ್ಟಿಗೆಯಲ್ಲಿದ್ದ ಹಸು ಚೀರಾಡಿ, ಅಳುವ ಸದ್ದು ಮಾಡಿದೆ. ಕೂಡಲೇ ಎಚ್ಚೆತ್ತ ವಿನೋದ್ ಕೊಟ್ಟಿಗೆಗೆ ತೆರಳಿ ನೋಡಿದಾಗ ನೀರು ತುಂಬಿಕೊಂಡಿದ್ದನ್ನು ಕಂಡು ಕೂಡಲೇ ವಿನೋದ್ ಮನೆಯಲ್ಲಿದ್ದವರನ್ನು ಎಬ್ಬಿಸಿ ಗುಡ್ಡದ ಮೇಲಕ್ಕೆ ತೆರಳಿದ್ದಾರೆ.
ಬಳಿಕ ನೋಡ ನೋಡುತ್ತಿದ್ದಂತೆ ತಾವಿದ್ದ ಮನೆ, ವಾಹನ ಎಲ್ಲವೂ ಮಾಯವಾದಂತೆ ಭೂಮಿಯಡಿ ಹುದುಗಿಹೋಗಿದೆ.ಮನೆಯ ಸಮೀಪವೇ ಇದ್ದ ಸೇತುವೆ ಕೂಡ ಎರಡು ಭಾಗವಾಗಿದೆ. ಕೂಡಲೇ ಮೆಪಾಡಿಯಲ್ಲಿದ್ದ ಪತ್ನಿಗೂ ವಿಚಾರ ತಿಳಿಸಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ವಿನೋದ್ ಸೂಚಿಸಿದ್ದರಿಂದ ಪ್ರವಿದಾ, ಶ್ರೀಲಜ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಸುರಕ್ಷಿತ ಸ್ಥಳಕ್ಕೆ ಬಂದು ಕಾರ್ ಮೂಲಕ ಚಾಮರಾಜನಗರಕ್ಕೆ ಮಂಗಳವಾರ ಸಂಜೆ ತಲುಪಿದ್ದಾರೆ.
ಗುಡ್ಡದ ಮೇಲೆ ಆಶ್ರಯ ಪಡೆದಿದ್ದ ವಿನೋದ್ ಹಾಗೂ ಮತ್ತಿತ್ತರನ್ನು ರಕ್ಷಣಾ ಪಡೆ ಮಂಗಳವಾರ ಸಂಜೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಸಾಕಿದ್ದ ಹಸು ದೇವರಂತೆ ಕುಟುಂಬಕ್ಕೆ ಅಪಾಯದ ಬಗ್ಗೆ ಎಚ್ಚರಿಸಿ ಇಡೀ ಕುಟುಂಬವನ್ನು ಪಾರು ಮಾಡಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications