ನಾವು ದೇವೇಗೌಡರ ಸಾವು ಬಯಸಲ್ಲ: ನಿಮ್ಮ ಮನೆ ಅನಾಹುತಕ್ಕೆ ಕಾಂಗ್ರೆಸ್ ಕಾರಣವಲ್ಲ: ಸಚಿವ
ಚಾಮರಾಜನಗರ, ಮೇ, 20: ಜೆಡಿಎಸ್ ನಾಯಕರು ಮೂರ್ಖರ ರೀತಿ ಮಾತನಾಡುತ್ತಿದ್ದಾರೆ, ಅವರ ಮನೆಯ ಅನಾಹುತಕ್ಕೆ ನಾವು ಹೇಗೆ ಕಾರಣ? ಅವರ ಸಾವನ್ನು ನಾವು ಏಕೆ ಬಯಸೋಣ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು.
ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಎಚ್.ಡಿ.ದೇವೇಗೌಡ ಸಾವನ್ನು ಕಾಂಗ್ರೆಸ್ ಬಯಸಲಿದೆ ಎಂಬ ಜೆಡಿಎಸ್ ಆರೋಪಕ್ಕೆ ಪ್ರತಿಕ್ರಿಯಿಸಿ, ಎಚ್.ಡಿ.ದೇವೇಗೌಡರಿಗೆ ವಯಸ್ಸಾಗಿದೆ. ಪೆನ್ಡ್ರೈವ್ ಪ್ರಕರಣದಿಂದ ಅವರ ಮನಸ್ಸಿಗೆ ನೋವಾಗಿದೆ. ಅವರು ಇನ್ನಷ್ಟು ವರ್ಷ ಸಾರ್ಥಕ ಜೀವನ ನಡೆಸಲಿ ಎಂದರು.

ಇಷ್ಟು ದಿನ ಪೆನ್ಡ್ರೈವ್ ಇದೆ ಎಂದು ತಿರುಗಾಡುತ್ತಿದುದು ದೇವೇರಾಜೇಗೌಡ. ಈಗ ಡಿ.ಕೆ.ಶಿವಕುಮಾರ್ ಅನ್ನುತ್ತಿದ್ದಾರೆ. ಪೆನ್ಡ್ರೈವ್ ಪ್ರಕರಣದ ಹಿಂದೆ ಬಿಜೆಪಿ ಕುತಂತ್ರ ಅಡಗಿದೆ, ದೇವರಾಜೇಗೌಡ ಅಂತಹವರು ನೂರು ಜನ ಆಚೆ ಬಂದರೂ ಸರ್ಕಾರ ಬೀಳುವುದಿಲ್ಲ ಎಂದರು. ಇನ್ನು ಇದೇ ವೇಳೆ , ರೆಡ್ ಕಾರ್ನರ್ ನೋಟಿಸ್ ಕೊಡಲು ಎಸ್ಐಟಿ ಕ್ರಮ ವಹಿಸಲಿದೆ. ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದರು.
ಸಚಿವ ಎಚ್.ಸಿ.ಮಹಾದೇವಪ್ಪ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರ 1 ವರ್ಷ ಪೂರೈಸಿರುವುದು ನಮಗೆ ಸಂತೃಪ್ತಿ ತಂದಿದೆ. 1 ಕೋಟಿಗೂ ಅಧಿಕ ಕುಟುಂಬಕ್ಕೆ ಆರ್ಥಿಕ ಸ್ವಾವಲಂಬನೆ ತರಲಾಗಿದೆ ಎಂದರು.
ಸರ್ಕಾರದ ಸಾಧನೆ ಶೂನ್ಯ ಎಂಬ ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಟ್ರೈನು ಹೋಗ್ತಾ ಇದೆ. ಗಡಗಡ ಅಲ್ಲಾಡ್ತಿದೆ, ರೈಲು ಬಿದ್ದು ಹೋಗಲ್ಲ. ಇವರಿಗೇನು ಲಾಭ ಸಿಗಲ್ಲ ಎಂದು ವ್ಯಂಗ್ಯ ಮಾಡಿದರು.
ಇದೇ ವೇಳೆ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಎಸ್ಐಟಿ ತನಿಖೆ ನಡೆಸುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ ಎಂದರು. ಇನ್ನು ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ವಿಪಕ್ಷಗಳ ಟೀಕೆಗೆ ಉತ್ತರಿಸಿ, ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಉತ್ತಮವಾಗಿದೆ. ಕಾನೂನನ್ನು ಕೈಗೆ ತೆಗೆದುಕೊಳ್ಳುವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications