ಮಹದೇವ ಪ್ರಸಾದ್ ಸ್ಥಾನ ತುಂಬುವವರು ಯಾರು?
ಚಾಮರಾಜನಗರ, ಜನವರಿ 4: ಕಾಂಗ್ರೆಸ್ ಪ್ರಬಲ ನಾಯಕರಾಗಿದ್ದ ಎಚ್.ಎಸ್. ಮಹದೇವ ಪ್ರಸಾದ್ ನಿಧನ ಪಕ್ಷವನ್ನು ಬಡವಾಗಿಸಿದರೆ, ಚಾಮರಾಜನಗರಕ್ಕೆ ಉತ್ತಮ ನಾಯಕನ ಕೊರತೆಯನ್ನುಂಟು ಮಾಡಿದೆ. ಇನ್ನು ಅವರ ಸ್ಥಾನಕ್ಕೆ ಸಿದ್ದರಾಮಯ್ಯ ಯಾರನ್ನು ತರಲಿದ್ದಾರೆ ಎಂದು ಪಕ್ಷದಲ್ಲಿಯೇ ಚರ್ಚೆ ಪ್ರಾರಂಭವಾಗಿದೆ.[ಮಹದೇವ ಪ್ರಸಾದ್ ನಿಧನ : ಮುಖಂಡರ ಅಂತಿಮ ನುಡಿ]

ಮಹದೇವ ಪ್ರಸಾದ್ ಅವರಿಗೆ ಮಗನನ್ನು ರಾಜಕೀಯ ತರಬೇಕೆಂಬ ಆಕಾಂಕ್ಷೆ ಇತ್ತೆ ಅದು ಯಾರಿಗೂ ಗೊತ್ತಿಲ್ಲ. ಅದರೆ ಗಣೇಶ್ ಪ್ರಸಾದ್ ಬಿ.ಕಾಂ ಮುಗಿಸಿ ಎಂ ಸ್ಯಾಂಡ್ ಘಟಕವೊಂದರ ಪಾಲುದಾರಿಕೆ ಹೊಂದಿ ವ್ಯಾಪಾರ ವ್ಯವಹಾರದಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ಪತ್ನಿ ಡಾ. ಎಂ.ಸಿ ಮೋಹನಕುಮಾರಿ ಪಿಎಚ್ ಡಿ ಪದವಿ ಮುಗಿಸಿ ಸಾಹಿತ್ಯಾಸಕ್ತಿಯಿಂದ ಕವಿಗೋಷ್ಠಿ ಕವನವಾಚನ, ಪುಸ್ತಕ ಪ್ರಕಟಣೆಗಳಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದರು. ಆದರೆ ಅವರೂ ಪತಿಯ ರಾಜಕೀಯ ವಿಷಯದಲ್ಲಿ ತಲೆಕೆಡಿಸಿಕೊಂಡಿರಲಿಲ್ಲ.

ಇನ್ನು ಮಹದೇವ ಪ್ರಸಾದ್ ಅವರ ತಮ್ಮ ನಂಜುಂಡ ಪ್ರಸಾದ್ ಅಣ್ಣನ ಬೆನ್ನೆಲುಬಾಗಿ ಎಲ್ಲ ಕಾರ್ಯಗಳಲ್ಲೂ ತೊಡಗಿಕೊಂಡಿದ್ದರು. ಈಗ ಮುಖ್ಯ ಮಂತ್ರಿ ಸಿದ್ದರಾಮಯ್ಯ ರಾಜಕೀಯದ ಬಲಗೈಯಂತಿದ್ದ ಮಹದೇವ ಪ್ರಸಾದ್ ಅಗಲಿಕೆ ತುಂಬಲಾರದ ನಷ್ಟ ತಂದೊಡ್ಡಿದೆ. ಪಕ್ಷದಲ್ಲಿ ಸಹಕಾರಿ ಮತ್ತು ಸಕ್ಕರೆ ಸಚಿವ ಸ್ಥಾನವನ್ನು ಸಿಎಂ ಏನು ಮಾಡಲಿದ್ದಾರೆ ಎಂಬ ಪ್ರಶ್ನೆ ಕಾಡಲು ಪ್ರಾರಂಭವಾಗಿದೆ.[ಎಚ್ಎಸ್ಎಂ ನಿಧನ : ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ]

ಮಹದೇವ ಪ್ರಸಾದ್ ಅವರ ಪತ್ನಿಯನ್ನು ಸಿಎಂ ರಾಜಕೀಯ ರಂಗಕ್ಕೆ ತರತ್ತಾರೆಂಬ ಗಾಳಿಮಾತುಗಳು ಕೇಳಿಬರುತ್ತಿವೆ. ಅಲ್ಲದೆ ಮಹದೇವ ಪ್ರಸಾದ್ ಅವರ ತಮ್ಮ ನಂಜುಂಡಪ್ರಸಾದ್ ಅವರನ್ನು ತರಲಿರುವರೇ ಎಂಬ ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಇದೆ. ಇನ್ನು ಮಗ ಗಣೇಶ್ ಪ್ರಸಾದ್ ಅವರು ಹೊಸದಾಗಿ ರಾಜಕೀಯ ಪಾಠ ಕಲಿತು ಅಪ್ಪನ ಸ್ಥಾನವನ್ನು ಮುಂದಿನ ದಿನಗಳಲ್ಲಿ ತುಂಬಲಿರುವರೇ ಎಂಬ ಪ್ರಶ್ನೆಗೆ ಕಾಲವೇ ಉತ್ತರ ನೀಡಬೇಕಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications