ಮಹದೇವ ಪ್ರಸಾದ್ ಸ್ಥಾನ ತುಂಬುವವರು ಯಾರು?
ಚಾಮರಾಜನಗರ, ಜನವರಿ 4: ಕಾಂಗ್ರೆಸ್ ಪ್ರಬಲ ನಾಯಕರಾಗಿದ್ದ ಎಚ್.ಎಸ್. ಮಹದೇವ ಪ್ರಸಾದ್ ನಿಧನ ಪಕ್ಷವನ್ನು ಬಡವಾಗಿಸಿದರೆ, ಚಾಮರಾಜನಗರಕ್ಕೆ ಉತ್ತಮ ನಾಯಕನ ಕೊರತೆಯನ್ನುಂಟು ಮಾಡಿದೆ. ಇನ್ನು ಅವರ ಸ್ಥಾನಕ್ಕೆ ಸಿದ್ದರಾಮಯ್ಯ ಯಾರನ್ನು ತರಲಿದ್ದಾರೆ ಎಂದು ಪಕ್ಷದಲ್ಲಿಯೇ ಚರ್ಚೆ ಪ್ರಾರಂಭವಾಗಿದೆ.[ಮಹದೇವ ಪ್ರಸಾದ್ ನಿಧನ : ಮುಖಂಡರ ಅಂತಿಮ ನುಡಿ]

ಮಹದೇವ ಪ್ರಸಾದ್ ಅವರಿಗೆ ಮಗನನ್ನು ರಾಜಕೀಯ ತರಬೇಕೆಂಬ ಆಕಾಂಕ್ಷೆ ಇತ್ತೆ ಅದು ಯಾರಿಗೂ ಗೊತ್ತಿಲ್ಲ. ಅದರೆ ಗಣೇಶ್ ಪ್ರಸಾದ್ ಬಿ.ಕಾಂ ಮುಗಿಸಿ ಎಂ ಸ್ಯಾಂಡ್ ಘಟಕವೊಂದರ ಪಾಲುದಾರಿಕೆ ಹೊಂದಿ ವ್ಯಾಪಾರ ವ್ಯವಹಾರದಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ಪತ್ನಿ ಡಾ. ಎಂ.ಸಿ ಮೋಹನಕುಮಾರಿ ಪಿಎಚ್ ಡಿ ಪದವಿ ಮುಗಿಸಿ ಸಾಹಿತ್ಯಾಸಕ್ತಿಯಿಂದ ಕವಿಗೋಷ್ಠಿ ಕವನವಾಚನ, ಪುಸ್ತಕ ಪ್ರಕಟಣೆಗಳಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದರು. ಆದರೆ ಅವರೂ ಪತಿಯ ರಾಜಕೀಯ ವಿಷಯದಲ್ಲಿ ತಲೆಕೆಡಿಸಿಕೊಂಡಿರಲಿಲ್ಲ.

ಇನ್ನು ಮಹದೇವ ಪ್ರಸಾದ್ ಅವರ ತಮ್ಮ ನಂಜುಂಡ ಪ್ರಸಾದ್ ಅಣ್ಣನ ಬೆನ್ನೆಲುಬಾಗಿ ಎಲ್ಲ ಕಾರ್ಯಗಳಲ್ಲೂ ತೊಡಗಿಕೊಂಡಿದ್ದರು. ಈಗ ಮುಖ್ಯ ಮಂತ್ರಿ ಸಿದ್ದರಾಮಯ್ಯ ರಾಜಕೀಯದ ಬಲಗೈಯಂತಿದ್ದ ಮಹದೇವ ಪ್ರಸಾದ್ ಅಗಲಿಕೆ ತುಂಬಲಾರದ ನಷ್ಟ ತಂದೊಡ್ಡಿದೆ. ಪಕ್ಷದಲ್ಲಿ ಸಹಕಾರಿ ಮತ್ತು ಸಕ್ಕರೆ ಸಚಿವ ಸ್ಥಾನವನ್ನು ಸಿಎಂ ಏನು ಮಾಡಲಿದ್ದಾರೆ ಎಂಬ ಪ್ರಶ್ನೆ ಕಾಡಲು ಪ್ರಾರಂಭವಾಗಿದೆ.[ಎಚ್ಎಸ್ಎಂ ನಿಧನ : ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ]

ಮಹದೇವ ಪ್ರಸಾದ್ ಅವರ ಪತ್ನಿಯನ್ನು ಸಿಎಂ ರಾಜಕೀಯ ರಂಗಕ್ಕೆ ತರತ್ತಾರೆಂಬ ಗಾಳಿಮಾತುಗಳು ಕೇಳಿಬರುತ್ತಿವೆ. ಅಲ್ಲದೆ ಮಹದೇವ ಪ್ರಸಾದ್ ಅವರ ತಮ್ಮ ನಂಜುಂಡಪ್ರಸಾದ್ ಅವರನ್ನು ತರಲಿರುವರೇ ಎಂಬ ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಇದೆ. ಇನ್ನು ಮಗ ಗಣೇಶ್ ಪ್ರಸಾದ್ ಅವರು ಹೊಸದಾಗಿ ರಾಜಕೀಯ ಪಾಠ ಕಲಿತು ಅಪ್ಪನ ಸ್ಥಾನವನ್ನು ಮುಂದಿನ ದಿನಗಳಲ್ಲಿ ತುಂಬಲಿರುವರೇ ಎಂಬ ಪ್ರಶ್ನೆಗೆ ಕಾಲವೇ ಉತ್ತರ ನೀಡಬೇಕಾಗಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications