ನರೇಂದ್ರ ಮೋದಿಯವರು ಸಫಾರಿಗೆ ಬಂಡೀಪುರವನ್ನೇ ಆಯ್ಕೆ ಮಾಡಿಕೊಂಡಿದ್ದು ಏಕೆ?, "ಆ" ನಾಲ್ಕು ಕಾರಣಗಳು ಇಲ್ಲಿವೆ ತಿಳಿಯಿರಿ
ಚಾಮರಾಜನಗರ, ಏಪ್ರಿಲ್, 09: ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ನಡೆಸಿ ಗಮನ ಸೆಳೆದಿದ್ದಾರೆ. ಬಂಡೀಪುರಕ್ಕೆ ಭೇಟಿ ಕೊಡುತ್ತಿರುವ ಮೊದಲ ಪ್ರಧಾನಿ ನರೇಂದ್ರ ಮೋದಿ ಅವರಾಗಿದ್ದು, ಅವರು ಸಫಾರಿಗೆ ಬಂಡೀಪುರವನ್ನೇ ಆಯ್ಕೆ ಮಾಡಿಕೊಳ್ಳಲು ಕಾರಣ ಏನು ಅನ್ನುವ ಮಾಹಿತಿ ಇಲ್ಲಿದೆ ತಿಳಿಯಿರಿ.
ಕಾರಣ: 1 ಮೋದಿ ಭೇಟಿ, ಉದ್ದೇಶ ಏನು?
ಅವನತಿಯತ್ತ ತಲುಪಿದ್ದ ಹುಲಿಯನ್ನು ಹೇಗಾದರೂ ಮಾಡಿ ಉಳಿಸಲೇಬೇಕೆಂದು 1973ರಲ್ಲಿ ಅಂದಿನ ಪಿಎಂ ಇಂದಿರಾಗಾಂಧಿ ಹುಲಿ ರಕ್ಷಿತಾರಣ್ಯಗಳನ್ನು ಘೋಷಣೆ ಮಾಡಿ ಪ್ರಾಜೆಕ್ಟ್ ಟೈಗರ್ ಯೋಜನೆಯನ್ನು ಆರಂಭಿಸಿದರು. ಅಂದು ಆರಂಭಗೊಂಡ ಹುಲಿ ರಕ್ಷಿತ ಅರಣ್ಯಗಳಲ್ಲಿ ಬಂಡೀಪುರವೂ ಒಂದಾಗಿದ್ದು, ಈಗ ಇದು ಸುವರ್ಣ ಸಂಭ್ರಮದಲ್ಲಿ ಇದೆ. ಈ ಹಿನ್ನೆಲೆಯಲ್ಲಿ ಮೋದಿ ಅವರು ಇಲ್ಲಿಗೆ ಭೇಟಿ ಕೊಟ್ಟಿದ್ದಾರೆ.

ಕಾರಣ: 2 ಆನೆ ಉಳಿಸಿದ್ದವರಿಗೆ ಶಹಬ್ಬಾಸ್ ಗಿರಿ
ಕೆಲ ತಿಂಗಳುಗಳ ಹಿಂದೆಯಷ್ಟೇ ವಿದ್ಯುತ್ ಶಾಕ್ನಿಂದ ಪ್ರಜ್ಞೆ ಕಳೆದುಕೊಂಡು ಸಾವಿನಂಚಿಗೆ ತಲುಪಿದ್ದ ಆನೆಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ ಸತತ ಪ್ರಯತ್ನ ನಡೆಸಿ ಉಳಿಸಿಕೊಂಡಿದ್ದರು. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದರು. ಜೊತೆಗೆ ಬಂಡೀಪುರಕ್ಕೆ ಅಂಟಿಕೊಂಡಂತೆ ಇರುವ ತೆಪ್ಪಕಾಡು ಅರಣ್ಯ ಪ್ರದೇಶಕ್ಕೆ ಭೇಟಿ ಕೊಟ್ಟು ಬೊಮ್ಮ-ಬೆಳ್ಳಿಯನ್ನು ಸನ್ಮಾನಿಸಬೇಕಾದ್ದರಿಂದ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.
ಕಾರಣ: 3 ನ. 1 ಸ್ಥಾನಕ್ಕೇರುವ ನಿರೀಕ್ಷೆಯಲ್ಲಿ ಬಂಡೀಪುರ
ಬಂಡೀಪುರ ಹುಲಿ ಸಂರಕ್ಷಿತ ಸುವರ್ಣ ಸಂಭ್ರಮದಲ್ಲಿದೆ. ಜೊತೆಗೆ ಇದು ಹುಲಿ ಸಂರಕ್ಷಿತ ಪ್ರದೇಶದಲ್ಲೇ 100ಕ್ಕೇ 97 ಅಂಕ ಪಡೆದಿದ್ದು, ದೇಶದಲ್ಲೇ ನಂ 1 ಇಲ್ಲವೇ ನಂ 2 ಹುಲಿ ಸಂರಕ್ಷಿತ ಪ್ರದೇಶ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎನಿಸಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮೋದಿ ಬಂಡೀಪುರಕ್ಕೆ ಭೇಟಿ ಕೊಡಲಿದ್ದಾರೆ ಎನ್ನಬಹುದು.
ಕಾರಣ: 4 ನಂಬರ್ 1 ಸ್ಥಾನಕ್ಕೇರುವ ನಿರೀಕ್ಷೆಯಲ್ಲಿ ಕರ್ನಾಟಕ
ಕೆಲವೇ ಕೆಲವು ಹುಲಿಗಳ ಅಂತರದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದ ಕರ್ನಾಟಕ ಈ ಬಾರಿ ನಂ1 ಸ್ಥಾನಕ್ಕೇರುವ ನಿರೀಕ್ಷೆಯಲ್ಲಿದೆ. ಜೊತೆಗೆ ಕರ್ನಾಟಕದಲ್ಲಿ ಅತ್ಯಧಿಕ ಹುಲಿಗಳಿರುವ ಪ್ರದೇಶವೂ ಬಂಡೀಪುರವೇ ಆಗಿರುವುದರಿಂದ ಬಂಡೀಪುರಕ್ಕೆ ಮೋದಿ ಭೇಟಿ ಕೊಡುತ್ತಿದ್ದಾರೆ.

ಓಪನ್ ಜೀಪ್ನಲ್ಲಿ ವನ್ಯಜೀವಿ ಸಫಾರಿ
ಹುಲಿ ಯೋಜನೆ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಕೊಟ್ಟಿದ್ದು, ಈ ವೇಳೆ ಅವರು ಓಪನ್ ಜೀಪ್ನಲ್ಲಿ ವನ್ಯಜೀವಿ ಸಫಾರಿ ನಡೆಸಿ ಗಮನ ಸೆಳೆದಿದ್ದಾರೆ.
ನರೇಂದ್ರ ಮೋದಿ ಅವರು ಟೋಪಿ, ಗಾಗಲ್ಸ್ ಜೊತೆಗೆ ಸಫಾರಿ ದಿರಿಸಿ ತೊಟ್ಟು ಓಪನ್ ಜೀಪ್ನಲ್ಲಿ ಕಾಡಿನಲ್ಲಿ ಸಫಾರಿ ನಡೆಸಿ ಮಿಂಚಿದ್ದಾರೆ. ಒಟ್ಟು 9 ವಾಹನಗಳು ಪ್ರಧಾನಿ ಮೋದಿಯವರ ಜೊತೆಗಿದ್ದು, ಸದ್ಯ ಸಫಾರಿ ಮುಗಿಸಿ ತಮಿಳುನಾಡಿನ ತೆಪ್ಪಕಾಡಿಗೆ ಭೇಟಿ ಕೊಡುತ್ತಿದ್ದಾರೆ. ಸಫಾರಿ ವೇಳೆ ನರೇಂದ್ರ ಮೋದಿ ಹುಲಿಯನ್ನು ವಿಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮೋದಿಯವರ ಸಫಾರಿ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಅಲ್ಲದೇ ನಂತರ ತೆಪ್ಪಕಾಡಿನಲ್ಲಿ ಬೊಮ್ಮ-ಬೆಳ್ಳಿ ದಂಪತಿಯನ್ನು ಕೂಡ ಮೋದಿ ಭೇಟಿ ಮಾಡಿ ಸನ್ಮಾನಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್ 08) ಮೈಸೂರಿಗೆ ಬಂದಿಳಿದಿದ್ದು, ಭಾನುವಾರ (ಏಪ್ರಿಲ್ 9) ಬೆಳಗ್ಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿ ಸಫಾರಿ ನಡೆಸಿ ಗಮನ ಸೆಳೆದಿದ್ದಾರೆ.
ಭಾನುವಾರ ಬೆಳಗ್ಗೆ 7:30ರ ಸುಮಾರಿಗೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಸಮೀಪ ನಿರ್ಮಿಸಿರುವ ಹೆಲಿಪ್ಯಾಡ್ಗೆ ಬಂದಿಳಿದ ಪ್ರಧಾನಿ ಮೋದಿ, ಬಳಿಕ ಎಪ್ಪಿಜಿ ಭದ್ರತೆಯೊಂದಿಗೆ ಸಫಾರಿ ವಾಹನ ಹತ್ತಿ ಕಾಡಿನಲ್ಲಿ ಸುತ್ತಾಟ ಆರಂಭಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications