ಬಂಡೀಪುರ: ಪ್ರವಾಸಿಗರಿಗೆ ಪೋಟೊ ಹುಚ್ಚು, ಕಾಡುಪ್ರಾಣಿಗಳಿಗೆ ಪೆಚ್ಚು
ಚಾಮರಾಜನಗರ, ಮೇ 31: ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ ಜೊತೆಗೆ ಪೋಟೊ ತೆಗೆಯುವ ಹುಚ್ಚು, ಸಾಹಸಗಳು ಹೆಚ್ಚಾಗಿ ಕಂಡು ಬರುತ್ತಿದೆ. ಇದ್ದರಿಂದ ರಸ್ತೆಬದಿಯಲ್ಲಿರುವ ಪ್ರಾಣಿಗಳಿಗೆ ಕಿರಿಕಿರಿಯಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಮಾಡುವ ಪ್ರವಾಸಿಗರು ಹೆದ್ದಾರಿ ಬದಿಯಲ್ಲಿ ಸಿಗುವ ಕಾಡು ಪ್ರಾಣಿಗಳನ್ನು ಪೋಟೊ ತೆಗೆಯುವ ಭರದಲ್ಲಿ ಕೀಟಲೆ ಮಾಡುತ್ತಿದ್ದಾರೆ.
ಗುಂಡ್ಲುಪೇಟೆ ತಾಲೋಕು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ತಮಿಳುನಾಡು ಮತ್ತು ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿರುವುದರಿಂದ ಪ್ರತಿದಿನ ಸಾವಿರಾರು ವಾಹನಗಳು ಹೆದ್ದಾರಿಯಲ್ಲಿ ಸಂಚರಿಸುತ್ತಿವೆ.

ಕಾರಿನಲ್ಲಿ ಸಂಚಾರ ಮಾಡುವ ಪ್ರವಾಸಿಗರು ಆನೆಗಳನ್ನು ಕಂಡು ಹತ್ತಿರಕ್ಕೆ ಪೋಟೋ ತೆಗೆದರೆ ದ್ವಿಚಕ್ರ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಆನೆಯ ಮರಿಗಳು ಇದ್ದರೆ ಮರಿಗಳ ರಕ್ಷಣೆಗೆ ಆನೆಗಳು ವಾಹನಗಳ ಮೇಲೆ ದಾಳಿ ಮಾಡಲು ಮುಂದಾಗುತ್ತವೆ. ಸಂಚಾರ ಮಾಡುವವರು ಪ್ರಾಣಿಗಳನ್ನು ಕಂಡರೆ ನಿಲ್ಲಿಸಬಾರದು. ನಿಲ್ಲಿಸಿದರೆ ನಿಯಮ ಉಲ್ಲಂಘನೆ ಮಾಡಿದರೆ ದಂಡ ವಿಧಿಸಲಾಗುತ್ತಿದೆ. ಆದರೂ ಪ್ರವಾಸಿಗರು ಲೆಕ್ಕಕ್ಕೆ ತೆಗೆದುಕೊಳ್ಳದೇ ಇಂತಹ ಘಟನೆಗಳು ಹೆಚ್ಚಾಗಿ ಕಂಡು ಬರುತ್ತಿವೆ.
ರಸ್ತೆಯಲ್ಲಿಯೇ ನಿಂತು ಫೋಟೊ ತೆಗೆಯುವುದು
ಕಾಡಿನಲ್ಲಿ ಹಾದು ಹೋಗಿರುವ ರಸ್ತೆಯುದ್ದಕ್ಕೂ ಕಾಡಿನ ಮಧ್ಯೆ ವಾಹನಗಳನ್ನು ನಿಲ್ಲಿಸಬಾರದು, ಪ್ರಾಣಿಗಳಿಗೆ ತಿಂಡಿ ನೀಡಬಾರದು, ಪ್ರಾಣಿಗಳ ಪೋಟೋ ತೆಗೆಯಬಾರದು, ಪ್ಲಾಸ್ಟಿಕ್ ಬಳಸಬಾರದು ಎಂಬ ನಾಮಫಲಕಗಳು ಇದ್ದರೂ ಪ್ರಯೋಜನವಾಗುತ್ತಿಲ್ಲ. ಏಕೆಂದರೆ ಕೆಲವರು ಇಂತಹ ತಪ್ಪುಗಳನ್ನು ಮಾಡುತ್ತಿದ್ದಾರೆ. ರಸ್ತೆಯ ಬದಿಯಲ್ಲಿ ಮೇಯುವ ಆನೆ, ಜಿಂಕೆ, ಕಡವೆ, ಕಾಡಮ್ಮೆಗಳು ಕಂಡರೆ ವಾಹನಗಳನ್ನು ರಸ್ತೆಯಲ್ಲಿಯೇ ನಿಲ್ಲಿಸಿ ಪೋಟೊ ತೆಗೆಯುವುದು, ಜಿಂಕೆ ಮತ್ತು ಕಡವೆ, ಕೋತಿಗಳಿಗೆ ತಿಂಡಿ ನೀಡುವುದನ್ನು ಮಾಡುತ್ತಿರುವುದರಿಂದ ಉಳಿದ ಸವಾರರಿಗೆ ತೊಂದರೆಯಾಗುತ್ತಿದೆ.

ಸಿಬ್ಬಂದಿ ಗಸ್ತು ಹೆಚ್ಚಿಸಬೇಕು
ಸರಿಯಾದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪ್ರೇಟೋಲಿಗ್ ಮಾಡದೆ ಇರುವುದೇ ಇದಕ್ಕೆ ಎಲ್ಲಾ ಕಾರಣ ಎನ್ನಲಾಗುತ್ತಿದೆ. ಪ್ರವಾಸಿಗರು ತಿಂಡಿಗಳನ್ನು ನೀಡಿ ಅಭ್ಯಾಸ ಮಾಡಿರುವುದರಿಂದ ಕೋತಿ, ಜಿಂಕೆಗಳು ಪ್ರವಾಸಿಗರ ವಾಹನಗಳ ಕಾಯುತ್ತಿರುವೆ. ವಾಹನ ಒಳಗೆ ಇರುವ ಕವರ್ ಗಳು ಕೋತಿಗಳು ಎತ್ತಿಕೊಂಡು ಹೋಗತ್ತವೆ. ಪ್ರವಾಸಿಗರು ಸೇವಾ ಮನೋಭಾವದ ದೃಷ್ಟಿಯಿಂದ ಪ್ರಾಣಿಗಳಿಗೆ ತಿಂಡಿ ನೀಡುತ್ತಾರೆ. ಆದರೆ, ಪ್ರಾಣಿಗಳಿಗೆ ತಿಂಡಿ ನೀಡುತ್ತಾರೆ. ಆದರೆ ಪ್ರಾಣಿಗಳು ಈ ತಿಂಡಿಗಳಿಗೆ ಸೆಳೆತಗೊಂಡು ತಮ್ಮ ಸಹಜ ಕ್ರಿಯೆಗಳನ್ನು ಮರೆಯುತ್ತದೆ. ರಾಷ್ಟೀಯ ಹೆದ್ದಾರಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಸವಾರರ ಮೇಲೆ ಗಮನ ನೀಡಬೇಕು. ಸಿಬ್ಬಂದಿ ಗಸ್ತು ಹೆಚ್ಚಿಸಬೇಕು. ಈ ರೀತಿಯಲ್ಲಿ ಮಾಡುವುದರಿಂದ ಕಾಡಿನ ಸುರಕ್ಷತಾ ಜೊತೆಗೆ ನಿಯಮಗಳು ಉಲ್ಲಂಘನೆ ಮಾಡುವುದು ತಪ್ಪುತ್ತದೆ ಎನ್ನಬಹುದು.
(ಒನ್ಇಂಡಿಯಾ ಸುದ್ದಿ)
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications