ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ, ಸೆಪ್ಟೆಂಬರ್, 20: ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾಣಿಗಳು ಹಾವಳಿ ಮಾಡುತ್ತಲೇ ಇರುತ್ತವೆ. ಅದರಲ್ಲೂ ಆಗಾಗ್ಗೆ ಕಾಡಾನಗಳು ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇಗುಲದ ಆವರಣಕ್ಕೆ ಬಂದು ಭಕ್ತರನ್ನು ರೋಮಾಂಚನಗೊಳಿಸುತ್ತಿರುತ್ತವೆ. ಹಾಗೆಯೇ ಇದೀಗ ಮತ್ತೆ ಕಾಡಾನೆ ಅರಣ್ಯ ಸಿಬ್ಬಂದಿಯನ್ನು ಗುರಾಯಿಸಿ ವಾಪಾಸ್ ಕಳುಹಿಸಿದ ಘಟನೆ ಇದೇ ಬೆಟ್ಟದಲ್ಲಿ ನಡೆದಿದೆ.
ಗೋಪಾಲಸ್ವಾಮಿ ಬೆಟ್ಟ ದೇವಾಲಯಕ್ಕೆ ಬರುತ್ತಿದ್ದ ಕಾಡಾನೆಯನ್ನು ಅರಣ್ಯ ಸಿಬ್ಬಂದಿ ಕಾಡಿಗೆ ಕಳುಹಿಸಲು ಪ್ರಯತ್ನಿಸಿದ ವೇಳೆ ಸಿಬ್ಬಂದಿಯನ್ನೇ ಕಾಡಾನೆ ಹಿಮ್ಮೆಟ್ಟಿಸಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಪ್ರತಿನಿತ್ಯ ಗೋಪಾಲಸ್ವಾಮಿ ಬೆಟ್ಟದ ಶ್ರೀಕೃಷ್ಣನ ಸನ್ನಿಧಿಗೆ ಬರುವ ಗಜರಾಜ ಯಾರಿಗೂ ತೊಂದರೆ ನೀಡದೆ ತನ್ನಷ್ಟಕ್ಕೆ ವಾಪಾಸ್ಸಾಗುತ್ತಿತ್ತು. ಅದರಂತೆಯೇ ಗುರುವಾರ ಬೆಳಗ್ಗೆ ದೇಗುಲದ ಸಮೀಪ ಅಗಮಿಸುತ್ತಿದ್ದುದ್ದನ್ನ ಗಮನಿಸಿದ ಸಿಬ್ಬಂದಿ ವಾಪಾಸ್ ಕಾಡಿಗಟ್ಟಲು ಪ್ರಯತ್ನಿಸಿದ ವೇಳೆ ಅವರನ್ನೇ ಹಿಮ್ಮೆಟ್ಟಿಸಿದೆ.
ಸಿಬ್ಬಂದಿ ಗಜರಾಜನ ನಡುವೆ ನಡೆದ ದೃಶ್ಯವನ್ನ ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಇದೀಗ ಈ ದೃಶ್ಯ ಭಾರೀ ವೈರಲ್ ಆಗುತ್ತಿದೆ.
ವಾಹನ ಸವಾರರ ಪರದಾಟ: ಕಾಡಾನೆಯೊಂದು ಆಹಾರ ಅರಸಿ ರಸ್ತೆಗಿಳಿದ ಪರಿಣಾಮ ವಾಹನ ಸವಾರರು ಪರದಾಡಿದ ಘಟನೆ ಜಿಲ್ಲೆಯ ಗಡಿಭಾಗವಾದ ತಮಿಳುನಾಡಿನ ತಾಳವಾಡಿ ಸಮೀಪ ಮಂಗಳವಾರ ಸಂಜೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಿಢೀರ್ ನಡು ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡಾನೆ ಕಬ್ಬಿನ ಲಾರಿ ಅಡ್ಡಗಟ್ಟಿದೆ. ಇನ್ನು ಆನೆ ಕಂಡು ಹೌಹಾರಿರುದ ವಾಹನ ಸವಾರರು ರಸ್ತೆಯ ಎರಡೂ ಬದಿಗಳಲ್ಲೂ ವಾಹನ ನಿಲ್ಲಿಸಿ ಆನೆ ಪಕ್ಕಕ್ಕೆ ಸರಿಯುವ ತನಕ ಕಾದಿದ್ದು, ಅರ್ಧ ತಾಸಿಗಿಂತಲೂ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
ಕಬ್ಬಿನ ಲಾರಿಗೆ ಟಾರ್ಪಾಲ್ ಸುತ್ತಿದ್ದರೂ ಬಿಡದ ಕಾಡಾನೆ ಟಾರ್ಪಾಲ್ ಕಿತ್ತು ಬಿಸಾಡಿ ಕಬ್ಬಿನ ಜಲ್ಲೆಗಳಲ್ಲಿ ಸವಿದಿದೆ. ಇನ್ನು ಆನೆ ಸಮೀಪವೇ ಇದ್ದರೂ ಬೈಕ್ ಸವಾರರು ಆನೆ ಬಳಿಯೇ ನಿಂತು ಹುಚ್ಚಾಟ ಮೆರೆದಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
ನಾಲ್ವರಿಗೆ ಗಾಯ: ಚಿರತೆ ಸೆರೆ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡಿಗೆ ಗುಂಡಿನ ಪದರಗಳು ನಾಟಿ ನಾಲ್ವರು ರೈತರು ಗಾಯಗೊಂಡ ಘಟನೆ ಯಳಂದೂರು ತಾಲೂಕಿನ ಮದ್ದೂರು-ಮಲ್ಲಿಗೆಹಳ್ಳಿ ನಡುವಿನ ಜಮೀನಿನಲ್ಲಿ ನಡೆದಿದೆ.
ಮದ್ದೂರು ಗ್ರಾಮದ ಮೂರ್ತಿ, ರವಿ, ಶಿವು ಹಾಗೂ ರಂಗಸ್ವಾಮಿ ಎಂಬವರು ಗಾಯಗೊಂಡು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮುಳ್ಳಿನ ಪೊದೆಯಲ್ಲಿ ಚಿರತೆ ಕಾಣಿಸಿಕೊಂಡಿತ್ತು.
ಕೂಡಲೇ ಅರಣ್ಯ ಇಲಾಖೆಗೆ ರೈತರು ಮಾಹಿತಿ ನೀಡಿದ್ದಾರೆ. ಯಳಂದೂರು ವಲಯ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಗುಂಡು ಹಾರಿಸಿದ ವೇಳೆ ಗುಂಡಿನ ಪದರಗಳು ನಾಲ್ವರಿಗೆ ತಗುಲಿ ಗಾಯಗಳಾಗಿದೆ. ಇನ್ನು, ಚಿರತೆ ಕೂಡ ಅಸುನೀಗಿದ್ದು, ಮರಣೋತ್ತರ ಪರೀಕ್ಷೆ ಇನ್ನಷ್ಟೇ ನಡೆಯಬೇಕಿದೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications