ಗುಂಡ್ಲುಪೇಟೆ: ಹಾಡಹಗಲೇ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸಿದ ಒಂಟಿ ಸಲಗ
ಚಾಮರಾಜನಗರ, ನವೆಂಬರ್, 28: ಚಾಮರಾಜನಗರದಲ್ಲಿ ಆಗಾಗ ಪ್ರಾಣಿಗಳು ಹಾವಳಿ ಮಾಡುತ್ತಲೇ ಇರುತ್ತವೆ. ಹಾಗೆಯೇ ಇದೀಗ ಹಾಡಹಗಲೇ ಜಮೀನುಗಳಲ್ಲಿ ಒಂಟಿ ಸಲಗ ಓಡಾಟ ನಡೆಸಿ ಫಸಲು ನಾಶ ಪಡಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ, ಹಸಗೂಲಿ ಗ್ರಾಮಗಳಲ್ಲಿ ನಡೆದಿದ್ದು, ಜಮೀನಿಗೆ ತೆರಳಲು ರೈತರು ಭಯಬೀತರಾಗಿದ್ದಾರೆ.
ರಾತ್ರಿ ವೇಳೆ ಆಹಾರ ಅರಸಿ ನಾಡಿಗೆ ಲಗ್ಗೆ ಕಾಡಾನೆಗಳ ಭೀತಿ ಒಂದೆಡೆಯಾದರೆ, ಹಗಲಿನಲ್ಲೇ ಈ ಸಲಗ ಜಮೀನುಗಳಲ್ಲಿ ಓಡಾಡುತ್ತಿರುವುದು ರೈತರು ಜಮೀನಿಗೆ ತೆರಳಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.

ಕಳೆದ ಒಂದು ವಾರದಿಂದ ಸಲಗ ಓಡಾಡುತ್ತಿದ್ದು, ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮಂಚಹಳ್ಳಿಯ ಶ್ರೀ ನಡುಬೆಟ್ಟ ಮಹಾದೇಶ್ವರ ದೇವಸ್ಥಾನದ ಹತ್ತಿರ ರಸ್ತೆ ಮಾರ್ಗವಾಗದಲ್ಲೇ ಆನೆ ಓಡಾಡುತ್ತಿದೆ. ಈ ಆನೆ ಸಿಕ್ಕ ಸಿಕ್ಕ ಜಮೀನುಗಳಲ್ಲಿ ಫಸಲನ್ನು ತುಳಿದು ತಿಂದು ನಾಶ ಮಾಡುತ್ತಾ ಹೋಗುತ್ತಿದ್ದು, ರೈತರು ಹಗಲಲ್ಲೇ ಜಮೀನಿನ ಕೆಲಸಕ್ಕೆ ತೆರಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ನೇನೆಕಟ್ಟೆ, ಶೆಟ್ಟಹಳ್ಳಿ, ಮಂಚಹಳ್ಳಿ, ಹಸಗೂಲಿ ಗ್ರಾಮದ ಆಸುಪಾಸಿನಲ್ಲೇ ಆನೆ ಓಡಾಟವಿದ್ದು, ಅರಣ್ಯ ಇಲಾಖೆಯು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಬಂಡೀಪುರದಲ್ಲಿ ಹೆಣ್ಣಾನೆ ಆಂಥ್ರಾಕ್ಸ್ಗೆ ಬಲಿ ಶಂಕೆ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯ ಬಾಚಹಳ್ಳಿ ಗ್ರಾಮದ ಸರ್ವೇ ನಂ-516ರ ಪ್ರದೇಶದಲ್ಲಿ ಹೆಣ್ಣಾನೆಯೊಂದರ ಮೃತದೇಹ ಪತ್ತೆಯಾಗಿದ್ದು, ಆನೆಯು ಆಂಥ್ರಾಕ್ಸ್ ನೆರಡಿ ಕಾಯಿಲೆಯಿಂದ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.
ಮೃತ ಹೆಣ್ಣಾನೆಗೆ ಅಂದಾಜು 30 ವರ್ಷ ವಯಸ್ಸಾಗಿದ್ದು, ಅರಣ್ಯ ಇಲಾಖೆ ಗಸ್ತು ತಿರುಗುತಿದ್ದಾಗ ಬೆಳಕಿಗೆ ಬಂದಿದೆ. ಮಾಹಿತಿ ಅರಿತ ಕೂಡಲೇ ಸ್ಥಳಕ್ಕೆ ಆಗಮಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಹಾಗೂ ವಲಯ ಅರಣ್ಯಾಧಿಕಾರಿ ಮಲ್ಲೇಶ್ ಪರಿಶೀಲನೆ ನಡೆಸಿದ್ದಾರೆ. ಮೃತ ಕಾಡಾನೆಯ ಬಾಯಿ, ಗುದದ್ವಾರ, ಕಿವಿ, ಬಾಲದಲ್ಲಿ ರಕ್ತ ಸೋರಿಕೆ ಆಗಿರುವುದು ಕಂಡು ಬಂದಿದ್ದು, ಮೃತ ಕಾಡಾನೆ ಪರಿಶೀಲನೆ ಸಮಯದಲ್ಲಿ ಪಶು ವೈದ್ಯ ಡಾ.ಮಿರ್ಜಾ ವಾಸೀಂ ಅಂಥ್ರಾಕ್ಸ್ ರೋಗದ ಗುಣ ಲಕ್ಷಣಗಳು ಮೇಲ್ನೋಟಕ್ಕೆ ಕಂಡಿದೆ ಎಂದಿದ್ದಾರೆ.
ಮೃತ ಆನೆಯ ಅಂಗಾಂಗಗಳ ಮಾದರಿಗಳನ್ನು ಸಂಗ್ರಹಿಸಿ, ವಿಜ್ಞಾನ ಪ್ರಯೋಗ ಶಾಲೆ ಬೆಂಗಳೂರು ಇಲ್ಲಿಗೆ ಕಳುಹಿಸಲಾಗಿದೆ. ಹೆಣ್ಣಾನೆ ಮೃತ ದೇಹವನ್ನು ಸುಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಯಿತು. ನೆರಡಿ ರೋಗ ಎಂದು ಕರೆಯುವ ಈ ಖಾಯಿಲೆ ಭಯಾನಕವಾಗಿದ್ದು, ಸಾಂಕ್ರಾಮಿಕ ಖಾಯಿಲೆಯಾಗಿದೆ. ಜಾನುವಾರುಗಳಿಗೆ ಅಷ್ಟೇ ಅಲ್ಲದೆ, ಹಲವು ಕಾಡು ಪ್ರಾಣಿಗಳಿಗೂ ಈ ರೋಗ ಬರಲಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications