ಚಾಮರಾಜನಗರ; ಊರೂರು ಸುತ್ತುತ್ತಿದೆ ಒಂಟಿ ಸಲಗ, ಜನರಿಗೆ ಭೀತಿ
ಚಾಮರಾಜನಗರ,ಜೂ 25: ಕಳೆದ ಮೂರು ದಿನಗಳ ಹಿಂದೆ ಆಹಾರ ಅರಸಿ ಬಂದಿದ್ದ ಕಾಡಾನೆಯೊಂದು ನಿತ್ಯ ಒಂದಲ್ಲ ಒಂದೂರಿಗೆ ಲಗ್ಗೆ ಇಟ್ಟು ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಕಾಡಿಗಟ್ಟಲು ಹರಸಾಹಸ ಪಡುತ್ತಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಚಾಮರಾಮನಗರ ಸಮೀಪದ ದೊಡ್ಡಕೆರೆ, ಬೂದಿತಿಟ್ಟದಲ್ಲಿ ಕಾಣಿಸಿಕೊಂಡು ಜಮೀನುಗಳಲ್ಲಿ ಓಡಾಡಿದ್ದ ಕಾಡಾನೆ ಬಳಿಕ ಸಿಮ್ಸ್ನ ಎಡಬೆಟ್ಟದ ಹಿಂಭಾಗ ಕಾಣಿಸಿಕೊಂಡಿತ್ತು. ಶುಕ್ರವಾರ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಮಾರುಕಟ್ಟೆ ಸಮೀಪದ ತೆಂಗಿನಕೆರೆ ಹತ್ತಿರ ಇಡಿ ದಿನ ಬೀಡು ಬಿಟ್ಟಿತ್ತು.
ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದಿದ್ದ ಕಾಡಾನೆಯು ಕಳೆದ ಮೂರು ದಿನದಿಂದ ದಾರಿತಪ್ಪಿ ತೆರಕಣಾಂಬಿ ಪಶ್ಚಿಮದ ಕೆರೆಯಂಗಳದಲ್ಲಿ ನೀರಿನಿಂದ ಆಚೆ ಆನೆ ಬೀಡು ಬಿಟ್ಟಿದ್ದು, ಮೇವು, ನೀರಿನ ಲಭ್ಯತೆ ಜನರ ಗಲಾಟೆ ಹಿನ್ನೆಲೆಯಲ್ಲಿ ಸಲಗ ಅಲ್ಲಲ್ಲೇ ಓಡಾಡಿಕೊಂಡಿತ್ತು.

ಬಳ್ಳಾರಿ ಜಾಲಿ ನಡುವೆ ಸಣ್ಣ ಕಾಲು ದಾರಿಯಲ್ಲಿ ಕೆರೆಯ ಪಶ್ಚಿಮ ಭಾಗಕ್ಕೆ ಹೋಗಲು ಮಾತ್ರ ಸ್ಥಳವಕಾಶ ಇತ್ತು. ಅಲ್ಲದೇ ಕೆರೆಯ ಸುತ್ತಲೂ ಬೆಳಗಿನಿಂದ ಸಂಜೆ ತನಕ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದ ಕಾರಣ ಆನೆಯನ್ನು ಕಾಡಿಗಟ್ಟುವ ಕಾರ್ಯ ಸಾಧ್ಯವಾಗಲಿಲ್ಲ.
80 ಮಂದಿ ಕಾರ್ಯಾಚರಣೆ; ಗುಂಡ್ಲುಪೇಟೆ ಮತ್ತು ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯಾಧಿಕಾರಿ ಡಾ. ಲೋಕೇಶ್, ಎನ್. ಪಿ. ನವೀನ್ ಕುಮಾರ್ ಇತರೆ ಅಧಿಕಾರಿಗಳು, ನೌಕರರು, ವಿಶೇಷ ಹುಲಿ ಸಂರಕ್ಷಣಾ ದಳದ 80 ರಷ್ಟು ಮಂದಿ ಸ್ಥಳದಲ್ಲೇ ಬೀಡುಬಿಟ್ಟು ವೆಂಕಟರಮಣಸ್ವಾಮಿ ದೇವಾಲಯ ಸಂರಕ್ಷಿತ ಅರಣ್ಯದ ಮೂಲಕ ಹತ್ತಿರವಿರುವ ಕುಂದಕೆರೆ ಅರಣ್ಯ ವಲಯಕ್ಕೆ ಕಾಡಾನೆ ಹೋಗುವಂತೆ ಮಾಡಲು ಯೋಜನೆ ರೂಪಿಸಿದ್ದರು.

ಆದರೆ ಶನಿವಾರ ಬೆಳಗ್ಗೆ ತೆರಕಣಾಂಬಿ ಕೆರೆಯಂಗಳದಿಂದಲೂ ಆನೆ ಪರಾರಿಯಾಗಿ ವೀರನಪುರ ಸಮೀಪಕ್ಕೆ ಹೋಗಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸದ್ಯ, ವೀರನಪುರದಲ್ಲಿ ಆನೆ ಇರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ತೆರಳಿದ್ದಾರೆ. ಆನೆ ಸಂಚಾರದಿಂದ ಜನರು ಆತಂಕಗೊಂಡಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications