ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂಡೀಪುರ ಕಾಡಂಚಿನ ರೈತರ ನಿದ್ದೆಗೆಡಿಸಿದ ಕಾಡಾನೆಗಳು!

|
Google Oneindia Kannada News

ಚಾಮರಾಜನಗರ, ನವೆಂಬರ್ 29: ಕಳೆದೊಂದು ವರ್ಷದಿಂದ ಉತ್ತಮ ಮುಂಗಾರು ಮತ್ತು ಹಿಂಗಾರು ಮಳೆ ಸುರಿದ ಪರಿಣಾಮ ಅರಣ್ಯದಲ್ಲಿರುವ ಕೆರೆಕಟ್ಟೆಗಳು ತುಂಬಿದ್ದು, ಹಸಿರು ಮೇವು ಹೇರಳವಾಗಿ ದೊರಕುತ್ತಿವೆ. ಹೀಗಿದ್ದರೂ ಅರಣ್ಯದಲ್ಲಿರುವ ಕಾಡಾನೆಗಳು ರೈತರ ಜಮೀನಿಗೆ ಲಗ್ಗೆ ಹಾಕುತ್ತಿರುವುದು ರೈತರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.

ಈಗಾಗಲೇ ರೈತರು ಬಾಳೆ, ಭತ್ತ, ಜೋಳ, ರಾಗಿ ಹೀಗೆ ವಿವಿಧ ಬೆಳೆಗಳನ್ನು ಬೆಳೆದಿದ್ದು ಆ ಬೆಳೆಯನ್ನು ಕಾಡಾನೆಗಳಿಂದ ಕಾಪಾಡಿಕೊಳ್ಳುವುದೇ ಕಷ್ಟದ ಕೆಲಸವಾಗಿದೆ. ಸ್ವಲ್ಪ ಎಚ್ಚರ ತಪ್ಪಿದರೂ ಕಾಡಿನಿಂದ ಬರುವ ಕಾಡಾನೆಗಳ ಹಿಂಡು ಬೆಳೆಯನ್ನು ತಿಂದು ತುಳಿದು ನಾಶ ಮಾಡಿಬಿಡುತ್ತವೆ.

ಪೊದೆಗಳಲ್ಲಿ ಕುಳಿತು ಜಾನುವಾರುಗಳನ್ನು ಬಲಿ ಪಡೆಯುತ್ತಿರುವ ಹುಲಿಗಳುಪೊದೆಗಳಲ್ಲಿ ಕುಳಿತು ಜಾನುವಾರುಗಳನ್ನು ಬಲಿ ಪಡೆಯುತ್ತಿರುವ ಹುಲಿಗಳು

ಇದರಿಂದ ವರ್ಷ ಪೂರ್ತಿ ದುಡಿದು ಸಾಲ ಮಾಡಿ ಬೆಳೆದ ಬೆಳೆ ನಾಶವಾಗಿ ರೈತನ ಹೊಟ್ಟೆಗೆ ತಣ್ಣೀರು ಬಟ್ಟೆ ಎನ್ನುವಂತಾಗಿದೆ. ಮುಂದಿನ ದಿನಗಳಲ್ಲಿ ಬೇಸಿಗೆ ಬರುತ್ತಿರುವುದರಿಂದ ಕಾಡಾನೆಗಳು ಅರಣ್ಯ ಬಿಟ್ಟು ನಾಡಿನತ್ತ ಬರುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಹಸಿರಾಗಿ ಬೆಳೆದ ಬಾಳೆ, ತೆಂಗು ಬೆಳೆಯನ್ನೇ ಟಾರ್ಗೆಟ್ ಮಾಡಿಕೊಳ್ಳುವ ಕಾಡಾನೆಗಳು ಅದನ್ನು ತಿಂದು ನಾಶ ಮಾಡುತ್ತಿವೆ.

Wild Elephants are found in the Gopalaswamy hill zone

ಇದೀಗ ಬಂಡೀಪುರ ಹುಲಿಯೋಜನೆಯ ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಇದರಿಂದ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ರೈತರು ಬೆಳೆದ ಹುರುಳಿ, ರಾಗಿ, ತೊಗರಿ, ಟೊಮೆಟೊ ಹಾಗೂ ಬಾಳೆಯನ್ನು ನಾಶಪಡಿಸಿವೆ.

ಸತ್ತಿಗೆಹುಂಡಿ ಸಮೀಪ ಮಾವುತರನ್ನೇ ಬೀಳಿಸಿ 15 ಕಿ.ಮೀ ಓಡಿದ ಸಾಕಾನೆಗಳುಸತ್ತಿಗೆಹುಂಡಿ ಸಮೀಪ ಮಾವುತರನ್ನೇ ಬೀಳಿಸಿ 15 ಕಿ.ಮೀ ಓಡಿದ ಸಾಕಾನೆಗಳು

ಕಾಡಾನೆಗಳು ಹಾದು ಹೋದ ಹಾದಿಯುದ್ದಕ್ಕೂ ಸಿಗುವ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನೆಲ್ಲ ತುಳಿದು ಹಾಳು ಮಾಡಿವೆ. ಆದರೆ ಇದಕ್ಕೆ ಅರಣ್ಯ ಇಲಾಖೆಯಿಂದ ಯಾವುದೇ ರೀತಿಯ ಪರಿಹಾರ ಸಿಗುವುದಿಲ್ಲ ಎಂಬುದು ರೈತರ ಅಳಲಾಗಿದೆ.

ನೆಮ್ಮದಿಯುಸಿರುಬಿಟ್ಟ ರೈತರು ಇನ್ನೊಂದೆಡೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿಯೋಜನೆಯ ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಾ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಹುಲಿ ಇದೀಗ ನಿತ್ರಾಣವಾಗಿ ಸಾವಿಗೀಡಾಗಿದ್ದರಿಂದ ಗ್ರಾಮದಲ್ಲಿದ್ದ ಜನರ ಭಯ ಮುಕ್ತರಾಗಿದ್ದಾರೆ.

Wild Elephants are found in the Gopalaswamy hill zone

ಸಾವನ್ನಪ್ಪಿದ ಹುಲಿ 12 ವರ್ಷ ವಯಸ್ಸಿನ ಗಂಡು ಹುಲಿಯಾಗಿದ್ದು, ಇದು ಆಹಾರ ಸಿಗದೆ ನಿತ್ರಾಣಗೊಂಡು ಸಾವನ್ನಪ್ಪಿರಬಹುದು ಎಂಬುದು ಅರಣ್ಯ ಇಲಾಖೆ ತಿಳಿಸಿದೆ.

ಫಸಲಿನ ರುಚಿ ಕಂಡು ಮಂಡ್ಯ ರೈತರ ಜಮೀನಿಗೆ ಲಗ್ಗೆ ಇಟ್ಟ ಕಾಡಾನೆಗಳುಫಸಲಿನ ರುಚಿ ಕಂಡು ಮಂಡ್ಯ ರೈತರ ಜಮೀನಿಗೆ ಲಗ್ಗೆ ಇಟ್ಟ ಕಾಡಾನೆಗಳು

ಕೆಲವು ದಿನಗಳ ಹಿಂದೆ ಹಂಗಳ ಸಮೀಪದ ಹಿರೀಕೆರೆ ಬಳಿ ಗಸ್ತಿನಲ್ಲಿದ್ದ ಸಿಬ್ಬಂದಿ ಸೋಮನಾಥಪುರ ಬೀಟ್‌ನಲ್ಲಿದ್ದಾಗ ಹುಲಿಯೊಂದು ಮಲಗಿದ ಸ್ಥಿತಿಯಲ್ಲಿ ಕಾಣಿಸಿತ್ತು. ಆದರೆ ಅದು ಬಹಳ ಸಮಯವಾದರೂ ಕದಲದೆ ಇದ್ದುದರಿಂದ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಪರಿಶೀಲಿಸಿದಾಗ ಅದು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

English summary
Recently Wild Elephants are found in the Gopalaswamy hill zone. Farmers are suffering from Elephants in this area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X