ಮೇಲೂರು ಕೆರೆಯಲ್ಲಿ ತೇಲಿದ ಮಹಿಳೆ & ಬಾಲಕನ ಶವ ಪತ್ತೆ
ಚಾಮರಾಜನಗರ, ನವೆಂಬರ್, 09: ಇಂದು (ನವೆಂಬರ್ 09) ಮಹಿಳೆ ಮತ್ತು ಬಾಲಕನ ಶವಗಳು ಪತ್ತೆಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಯಾನಗಳ್ಳಿ ಸಮೀಪದ ಮೇಲೂರು ಕೆರೆಯಲ್ಲಿ ನಡೆದಿದೆ. ಹಾಗಾದರೆ ಆ ಮಹಿಳೆಯ ಹಿನ್ನೆಲೆ ಏನು ಹಾಗೂ ಇದಕ್ಕೆ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮೊದಲು ಬಾಲಕನ ಶವ ಮೇಲೆ ಬಂದಿದ್ದು, ಬಳಿಕ ಮಹಿಳೆ ಶವವೂ ತೇಲಿದೆ. ಮೇಲ್ನೋಟಕ್ಕೆ ತಮಿಳುನಾಡಿನ ಮೂಲದವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಇನ್ನೂ ಮೃತರ ಗುರುತು ಹಾಗೂ ಸಾವಿಗೆ ಕಾರಣ ಏನೆಂದು ತಿಳಿದುಬಂದಿಲ್ಲ.

ಇನ್ನು ಸ್ಥಳೀಯರ ಮಾಹಿತಿ ಮೇರೆಗೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಮೇಲಕ್ಕೆತ್ತಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬದುಕಿದ್ದವರ ಮರಣ ಪತ್ರ: ಸಾಮಾನ್ಯವಾಗಿ ಮರಣ ಹೊಂದಿದವರ ಮರಣ ಪತ್ರವನ್ನು ಕೊಡಲಾಗುತ್ತಿದೆ. ಆದರೆ ಇದೀಗ ವಿಚಿತ್ರ ಎಂಬಂತೆ ಎದುರಿಗೆ ಕುಳಿತ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ಕೊಟ್ಟು ಎಲ್ಲರನ್ನೂ ಹೌಹಾರುವಂತೆ ಮಾಡಿರುವ ಘಟನೆ ಕೊಳ್ಳೇಗಾಲ ನಗರಸಭೆಯಲ್ಲಿ ನಡೆದಿದೆ. ಹಾಗಾದರೆ ಮುಂದಾಗಿದ್ದೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕೊಳ್ಳೇಗಾಲ ನಗರಸಭೆ ಸಿಬ್ಬಂದಿಯ ಎಡವಟ್ಟು ಕಂಡು ದಾಖಲೆಯಲ್ಲಿ ಮೃತಪಟ್ಟು ದೈಹಿಕವಾಗಿ ಬದುಕಿರುವ ವ್ಯಕ್ತಿ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಏನಿದು ಎಡವಟ್ಟು?: ಕೊಳ್ಳೇಗಾಲದ ಕುರುಬರ ಬೀದಿ ನಿವಾಸಿಯಾದ ಶಂಕರ ಎಂಬವರು, ನಿಧನ ಹೊಂದಿದ ತಮ್ಮ ತಾಯಿ ಪುಟ್ಟಮ್ಮ ಮರಣ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಕೊಳ್ಳೇಗಾಲ ನಗರಸಭೆಯ ಜನನ-ಮರಣ ನೋಂದಣಿ ವಿಭಾಗದ ಮಹಾದೇವಸ್ವಾಮಿ ಎಂಬವರು ನಿಧನ ಹೊಂದಿದ ಪುಟ್ಟಮ್ಮ ಬದಲಾಗಿ ಬದುಕಿರುವ ಶಂಕರ್ಗೆ ಮರಣ ಪ್ರಮಾಣ ಪತ್ರ ಕೊಟ್ಟು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬಳಿ ಆಕ್ರೋಶಗೊಂಡ ಶಂಕರ್ ಆತನ ಮುಂದೆ ಜೀವಂತವಾಗಿ ಕೂತಿದ್ದರೂ, ಅರ್ಜಿಯಲ್ಲಿ ಪುಟ್ಟಮ್ಮ ಎಂದು ಬರೆಯಲಾಗಿತ್ತು. ಆದರೂ ಕರ್ತವ್ಯ ಲೋಪ ಎಸಗಿ ಮರಣ ಪ್ರಮಾಣ ಪತ್ರ ಕೊಟ್ಟಿದ್ದನ್ನು ಕೂಡಲೇ ಸರಿಪಡಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications