ಗುಂಡ್ಲುಪೇಟೆಯ ಅರಣ್ಯದಂಚಿನಲ್ಲಿ ಪ್ರತ್ಯಕ್ಷರಾಗಿದ್ದು ನಕ್ಸಲರಾ?
ನವೆಂಬರ್ 11, ಚಾಮರಾಜನಗರ: ಗುಂಡ್ಲುಪೇಟೆಯ ಅರಣ್ಯದಂಚಿನ ಗಡಿಭಾಗದಿಂದ ನಕ್ಸಲರು ರಾಜ್ಯದೊಳಕ್ಕೆ ನುಸುಳ ಬಹುದೆಂಬ ಸಂಶಯ ಹಿಂದಿನಿಂದಲೂ ಇದ್ದು, ಈ ಬಗ್ಗೆ ನಕ್ಸಲ್ ನಿಗ್ರಹಪಡೆ ಹದ್ದಿನ ಕಣ್ಣಿಟ್ಟು ಕಾಯುತ್ತಿದೆ. ಆದರೂ ಈ ನಡುವೆ ಶುಕ್ರವಾರ(ನ.10) ಮಧ್ಯಾಹ್ನದ ವೇಳೆಯಲ್ಲಿ ಕಾಡಂಚಿನ ಗ್ರಾಮದಲ್ಲಿ ಮೂವರು ಮುಸುಕುಧಾರಿಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದ್ದು, ಇವರು ನಕ್ಸಲರೇನಾ? ಎಂಬ ಸಂಶಯ ಕಾಡತೊಡಗಿದೆ.
ಬಂಡೀಪುರ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಗ್ರಾಮದ ಒಂಟಿಮನೆಯೊಂದಕ್ಕೆ ಮೂವರು ಮುಸುಕುಧಾರಿಗಳು ಆಗಮಿಸಿ ಕೀಲಿಕೈಕೊಡುವಂತೆ ಕಾರ್ಮಿಕ ಮಹಿಳೆಯನ್ನು ಕೇಳಿದ್ದಾರೆ ಎನ್ನಲಾಗಿದ್ದು ಆಕೆ ಇದರಿಂದ ಭಯಗೊಂಡು ಗ್ರಾಮಸ್ಥರಿಗೆ ಮಾಹಿತಿ ನೀಡಿದ ಮೇರೆಗೆ ಸುದ್ದಿಯಾಗಿದ್ದು, ಸ್ಥಳಕ್ಕೆ ಡಿಎಸ್ಪಿ ಎಸ್.ಈ.ಗಂಗಾಧರಸ್ವಾಮಿ, ಪಿಎಸ್ಐ ಬಿ.ಎಸ್.ಶಿವರುದ್ರ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಕಾರ್ರಾಗಿಹುಂಡಿ ಗ್ರಾಮದ ನಿವಾಸಿ ಮಂಗಲ, ಗ್ರಾಮಪಂಚಾಯಿತಿ ಸದಸ್ಯರಾದ ಮಾದೇಶ್ ಎಂಬುವರು ಶಾಂತಿ ಎಂಬ ಗಿರಿಜನ ಕಾರ್ಮಿಕಳನ್ನು ಜಮೀನಿನ ಕೆಲಸಕ್ಕೆ ಬಿಟ್ಟು ಮನೆಗೆ ಬೀಗ ಹಾಕಿ ತಮ್ಮ ಕುಟುಂಬ ಸಮೇತ ಸಮೀಪದ ಎಲ್ಚೆಟ್ಟಿ ಗ್ರಾಮದಲ್ಲಿ ನಡೆಯುತ್ತಿದ್ದ ಸಂಬಂಧಿಕರ ಗೃಹಪ್ರವೇಶಕ್ಕೆ ತೆರಳಿದ್ದರು ಎನ್ನಲಾಗಿದೆ.
ಮಧ್ಯಾಹ್ನ 2.30ರಲ್ಲಿ ಕಣ್ಣುಗಳು ಮಾತ್ರ ಕಾಣುವಂತೆ ಕಪ್ಪುಬಟ್ಟೆಯಿಂದ ಮುಖಮುಚ್ಚಿಕೊಂಡು ಶೂ ಧರಿಸಿದ್ದ ಮೂವರು ಮುಸುಕುಧಾರಿಗಳು ಇಲ್ಲಿಗೆ ಆಗಮಿಸಿ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ಮಾತನಾಡುತ್ತಾ ಶಾಂತಿಯನ್ನು ಮನೆಯ ಕೀಲಿಕೈ ಕೊಡುವಂತೆ ಒತ್ತಾಯಿಸಿದ್ದಾರೆ. ಮಾಲೀಕರು ತನಗೆ ಮನೆಯ ಕೀಲಿಕೈಕೊಟ್ಟಿಲ್ಲ ಸ್ವಲ್ಪಹೊತ್ತಿನಲ್ಲಿಯೇ ಬರುತ್ತಾರೆ ಎಂದು ಹೇಳಿದಾಗ ತಾವು ಬಂದಿದ್ದ ವಿಷಯವನ್ನು ಯಾರಿಗೂ ತಿಳಿಸಬಾರದು, ಹೇಳಿದರೆ ನಿನಗೆ ತೊಂದರೆಯಾಗುತ್ತದೆ ಎಂದು ಚಾಕು ತೋರಿಸಿ ಬೆದರಿಕೆ ಹಾಕಿ ಕಾಡಿನತ್ತ ತೆರಳಿದರು ಎಂದು ಕಾರ್ಮಿಕ ಮಹಿಳೆ ತಿಳಿಸಿದ್ದಾಳೆ.
ಮನೆ ಮಾಲೀಕ ಮರಳಿದ ಬಳಿಕ ಈ ವಿಚಾರವನ್ನು ಶಾಂತಿ ತಿಳಿಸಿದ್ದು, ಅವರು ಗ್ರಾಮಸ್ಥರಿಗೆ ಮಾಹಿತಿ ನೀಡುವ ಮೂಲಕ ಮಾದೇಶ್ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು ಶಾಂತಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ವಿಷಯ ಸಂಗ್ರಹಿಸಿದ್ದಾರೆ.
ಮುಸುಕುಧಾರಿಗಳು ನಕ್ಸಲ್ ಆಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ವ್ಯಾಪ್ತಿಯಲ್ಲಿ ನಕ್ಸಲರು ಅಡಗಿದ್ದಾರೆ ಎಂಬ ಸಂಶಯ ಹಿಂದಿನಿಂದಲೂ ಇದೆ. ಕೆಲವರ ಪೋಸ್ಟರ್ ಗಳನ್ನು ಹಾಕಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿತ್ತು. ಇದೀಗ ಮುಸುಕುಧಾರಿಗಳು ಬಂದಿದ್ದರು ಎಂಬ ವಿಚಾರ ಈ ವ್ಯಾಪ್ತಿಯ ಜನರ ಆತಂಕಕ್ಕೆ ಕಾರಣವಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications