ಗುಂಡ್ಲುಪೇಟೆ: ಆಧಾರ್ ತಿದ್ದುಪಡಿಗಾಗಿ ರಾತ್ರಿಯೇ ಸೇವಾ ಕೇಂದ್ರದ ಮುಂದೆ ಠಿಕಾಣಿ ಹೂಡಿದ ಮಹಿಳೆಯರು
ಚಾಮರಾಜನಗರ, ಜುಲೈ, 27: ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಆಧಾರ್ ತಿದ್ದುಪಡಿ ಮಾಡಿಸಲು ಸೇವಾಕೇಂದ್ರಗಳ ಮುಂದೆ ಜನಜಾತ್ರೆಯೇ ಸೇರುತ್ತಿದೆ. ಈ ಹಿನ್ನೆಲೆ ಜನಸಂದಣಿಯಿಂದ ತಪ್ಪಿಸಿಕೊಳ್ಳಲು ಕೆಲವರು ರಾತ್ರಿಯೇ ಸೇವಾಕೇಂದ್ರದ ಮುಂದೆ ಮಲಗಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ತಾಲೂಕು ಕಚೇರಿಯಲ್ಲಿ ನಡೆದಿದೆ.
ಕಳೆದ ಮೂರು ದಿನಗಳಿಂದಲೂ ನಿತ್ಯ ಸೇವಾಕೇಂದ್ರಕ್ಕೆ ಬಂದರೂ ಟೋಕನ್ ಸಿಗದ ಹಿನ್ನೆಲೆಯಲ್ಲಿ ಬೇಸತ್ತ ಹಲವರು ತಾಲೂಕು ಕಚೇರಿಗೆ ಬುಧವಾರ ರಾತ್ರಿಯೇ ಬಂದು ಮಲಗಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಚೆನ್ನಾಜಮ್ಮ, ಸಿದ್ದಮ್ಮ, ನೇನೆಕಟ್ಟೆ ಗ್ರಾಮದ ಮಾಲೇಗೌಡ, ಬೆಟ್ಟಗೌಡನಹುಂಡಿ ಗ್ರಾಮದ ಬೆಳ್ಳಿಬಸವೇಗೌಡ ಎಂಬವವರು ಶಾಲು ಹೊದ್ದು ಬಂದು ಮಲಗಿದ್ದು, ಇಂದು ಬೆಳಗ್ಗೆ ಟೋಕನ್ ಪಡೆಯಲು ಹರಸಾಹಸ ಪಟ್ಟಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ಗೆ ಫೋನ್ ನಂಬರ್, ಪಡಿತರ ಕಾರ್ಡ್ಗಳಲ್ಲಿ ಯಜಮಾನಿ ಹೆಸರುಗಳನ್ನು ತಿದ್ದುಪಡಿ ಮಾಡಿಸಬೇಕಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬ್ಯಾಂಕ್ ವಿವರ, ಮೊಬೈಲ್ ನಂಬರ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ಕಡ್ಡಾಯವಾಗಿರುವುದರಿಂದ ಸೇವಾಕೇಂದ್ರದ ಮುಂದೆ ನಿತ್ಯ ಜನಜಾತ್ರೆಯೇ ಬಂದು ಸೇರುತ್ತಿದೆ. ಟೋಕನ್ಗಾಗಿ ಕೆಲವರು ರಾತ್ರಿಯೇ ಬಂದು ಸೇವಾ ಕೇಂದ್ರದ ಮುಂದೆ ಮಲಗುತ್ತಿದ್ದಾರೆ.
ನಮ್ಮ ಗ್ರಾಮದಿಂದ ಪಟ್ಟಣಕ್ಕೆ ಬೆಳ್ಳಂಬೆಳಗ್ಗೆ ಬಸ್ ಇಲ್ಲ. 8 ಗಂಟೆ ನಂತರ ಬರುವ ಬಸ್ನಲ್ಲಿ ಗುಂಡ್ಲುಪೇಟೆಗೆ ಆಗಮಿಸುವ ವೇಳೆಗೆ ಆಧಾರ್ ಸೇವಾ ಕೇಂದ್ರದ ಮುಂದೆ ನೂರಾರು ಮಂದಿ ಜಮಾಯಿಸಿ ಕ್ಯೂನಲ್ಲಿ ನಿಂತಿರುತ್ತಾರೆ. 4 ದಿನದಿಂದ ನಾವು ಆಧಾರ್ಗೆ ಮೊಬೈಲ್ ನಂಬರ್ ಲಿಂಕ್ ಮಾಡಿಸಲು ತಾಲೂಕು ಕಚೇರಿಗೆ ಅಲೆಯುತ್ತಿದ್ದರೂ ಪ್ರಯೋಜನವಾಗಲಿಲ್ಲ. ಆದ್ದರಿಂದ ರಾತ್ರಿ ಇಲ್ಲಿಯೇ ಮಲಗುತ್ತಿದ್ದೇವೆ ಎಂದು ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.
ಅಲ್ಲದೆ ಬೆಳಗ್ಗೆ ಕ್ಯೂನಲ್ಲಿ ಮೊದಲನೆಯವರಾಗಿ ನಿಂತು ಟೋಕನ್ ಪಡೆದುಕೊಂಡು ಆಧಾರ್ಗೆ ಮೊಬೈಲ್ ನಂಬರ್ ಲಿಂಕ್ ಮಾಡಿಸುತ್ತೇವೆ ಎಂದು ಆಧಾರ್ ಸೇವಾ ಕೇಂದ್ರದ ಬಳಿ ಮಲಗಿದ್ದ ಮಹಿಳೆಯರು ಅಳಲು ತೋಡಿಕೊಂಡರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications