ಸಾಂಕ್ರಾಮಿಕ ರೋಗದ ಭಯಕ್ಕೆ ಗುಂಡ್ಲುಪೇಟೆ ವಸತಿ ಶಾಲೆಯೆಲ್ಲ ಖಾಲಿ ಖಾಲಿ
ಚಾಮರಾಜನಗರ, ಸೆಪ್ಟೆಂಬರ್ 12: ಮೊರಾರ್ಜಿ ವಸತಿ ಶಾಲೆಯಲ್ಲಿ ಸಾಂಕ್ರಾಮಿಕ ರೋಗ ಕಂಡು ಬಂದಿದ್ದರಿಂದ ಭಯಗೊಂಡ ಪೋಷಕರು ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ದಿದ್ದರಿಂದ ವಸತಿ ಶಾಲೆ ಮಕ್ಕಳಿಲ್ಲದೆ ಖಾಲಿ ಹೊಡೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ತಾಲೂಕಿನ ಬೇಗೂರು ಹೋಬಳಿಯ ಕಾಡಂಚಿನ ಯಡವನಹಳ್ಳಿ ಗ್ರಾಮದ ಬಳಿಯಿರುವ ತಾಲೂಕಿನ ಮೊದಲ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿ ನೀರು ಮತ್ತು ಶುಚಿತ್ವದ ಕೊರತೆಯಿಂದ ಸಾಂಕ್ರಾಮಿಕ ರೋಗ ಕಾಣಿಸಿದೆ ಎಂದು ಹೇಳಲಾಗಿದೆ.

ದಿನದಿಂದ ದಿನಕ್ಕೆ ಒಬ್ಬರಿಂದ ಒಬ್ಬರಿಗೆ ಸಾಂಕ್ರಾಮಿಕ ಜ್ವರ ಹರಡಿದ್ದರಿಂದ ಭಯಗೊಂಡ ಪೋಷಕರು ತಮ್ಮ ಮಕ್ಕಳನ್ನು ಕರೆದೊಯ್ದಿದ್ದಾರೆ ಎನ್ನಲಾಗಿದೆ. ಇಲ್ಲಿ ಸುಮಾರು 40ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದಾರೆ ಎನ್ನಲಾಗಿದೆ. ಇದರಿಂದ ಆತಂಕಕ್ಕೊಳಗಾದ ಪೋಷಕರು ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ದಿದ್ದಾರೆ.
2005ರಲ್ಲಿ ಪ್ರಾರಂಭವಾದ ಉತ್ತಮ ಕಟ್ಟಡದೊಂದಿಗೆ ಪ್ರಾರಂಭವಾದ ಮೊರಾರ್ಜಿ ವಸತಿ ಶಾಲೆ ನಿರ್ವಹಣೆಯಿಲ್ಲದೆ ದುಸ್ಥಿತಿಯಲ್ಲಿದ್ದು ಗೋಡೆಗಳು ಬಿರುಕುಬಿಡುತ್ತಿವೆ. ಶಾಲೆಯ ಸುತ್ತಲೂ ಕಾಂಪೌಂಡ್ ನಿರ್ಮಾಣವಾಗದೆ ವಿದ್ಯಾರ್ಥಿಗಳು ವನ್ಯಜೀವಿಗಳ ದಾಳಿಯ ಆತಂಕದಲ್ಲಿಯೇ ವಿದ್ಯಾಭ್ಯಾಸ ಮಾಡುವಂತಾಗಿದೆ.
ಶಾಲೆಯಲ್ಲಿ 6ರಿಂದ 10ನೇ ತರಗತಿಯವರೆಗೆ ಸುಮಾರು 242 ವಿದ್ಯಾರ್ಥಿಗಲ್ಲಿ 131 ವಿದ್ಯಾರ್ಥಿನಿಯರು ಹಾಗೂ 152 ವಿದ್ಯಾರ್ಥಿಗಳಿದ್ದಾರೆ. ಆದರೆ ಇಲ್ಲಿಗೆ ಸಮರ್ಪಕ ನೀರಿನ ವ್ಯವಸ್ಥೆಯಿಲ್ಲದೆ ಶೌಚಾಲಯಗಳು ಗಬ್ಬುನಾರುತ್ತಿವೆ. ಹೀಗಾಗಿ ವಿದ್ಯಾರ್ಥಿಗಳು ಶೌಚಕ್ಕಾಗಿ ಬಯಲನ್ನೇ ಆಶ್ರಯಿಸಿರುವುದು ಕಂಡು ಬಂದಿದೆ.

ಸೆ.6ರಂದು ಶಾಲೆಯ ವಿದ್ಯಾರ್ಥಿಯೊಬ್ಬನಿಗೆ ತಲೆನೋವು ಹಾಗೂ ಜ್ವರ ಕಾಣಿಸಿಕೊಂಡಿದ್ದು ಬಳಿಕ ಅದು ಆತನ ಕೊಠಡಿಯ ಇತರೆ ಎಂಟು ವಿದ್ಯಾರ್ಥಿಗಳಿಗೂ ಹರಡಿದೆ. ಕೂಡಲೇ ವಿದ್ಯಾರ್ಥಿಗಳನ್ನು ಬೇಗೂರಿನ ಸಮುದಾಯ ಆರೋಗ್ಯ ಕೇಂದ್ರೆಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಬಾಲಸ್ವಾಸ್ಥ್ಯ ಇಲಾಖೆಯ ಅಧಿಕಾರಿಗಳು ವಸತಿ ಶಾಲೆಗೆ ಭೇಟಿ ನೀಡಿ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಿ ಹಾಗೂ ವಾತಾವರಣವನ್ನು ಪರಿಶೀಲಿಸಿದ್ದಾರೆ. ಅಲ್ಲದೆ, ವೈರಲ್ ಜ್ವರದ ಸೋಂಕು ಇತರೆ ವಿದ್ಯಾರ್ಥಿಗಳಿಗೆ ಹರಡುವ ಸಾಧ್ಯತೆ ಇರುವ ಕಾರಣ ಮನೆಗಳಿಗೆ ಕರೆದೊಯ್ಯುವಂತೆ ಹೇಳಿದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಕರೆದೊಯ್ದಿದ್ದು ಇಡೀ ವಸತಿ ಶಾಲೆ ಖಾಲಿಯಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications