ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಮ್ಮಡಹಳ್ಳಿ ಕೆರೆಯಲ್ಲಿ ಈಜಲು ಹೋದವರು ಮರಳಿ ಬಂದದ್ದು ಶವವಾಗಿ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಏಪ್ರಿಲ್ 08: ಬೇಸಿಗೆ ಬರುತ್ತಿದ್ದಂತೆಯೇ ಈಜಲು ತೆರಳುವ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪುವ ಘಟನೆಗಳು ಅಲ್ಲಲ್ಲಿ ವರದಿಯಾಗಿದ್ದು, ಅಂತಹದ್ದೇ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಎರಡು ಪ್ರಕರಣದಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸಮೀಪದ ಹುತ್ತೂರು ಕೆರೆ ಮತ್ತು ತಮ್ಮಡಹಳ್ಳಿ ಕೆರೆಯಲ್ಲಿ ಈ ದುರ್ಘಟನೆ ನಡೆದಿದ್ದು, ಪೋಷಕರು ದುಃಖದ ಮಡುವಿನಲ್ಲಿ ಮುಳುಗಿದ್ದಾರೆ.

Young men have been died in the Thammadihalli lake

 ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ತಂದೆ ವಿಧಿವಶ ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ತಂದೆ ವಿಧಿವಶ

ಹುತ್ತೂರು ಕೆರೆಯಲ್ಲಿ ಉಡಿಗಾಲ ಗ್ರಾಮದ 16 ವರ್ಷದ ಕಿರಣ್ ಎಂಬ ವಿದ್ಯಾರ್ಥಿ ಈಜಲು ಹೋಗಿ ಸಾವನ್ನಪ್ಪಿದ್ದು, ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಘಟನೆ ತಮ್ಮಡಹಳ್ಳಿ ಕೆರೆಯಲ್ಲಿ ನಡೆದಿದ್ದು, ಗುಂಡ್ಲುಪೇಟೆ ಪಟ್ಟಣದ ಕೆಲವು ಯುವಕರು ಈಜಲು ಈ ಕೆರೆಯಲ್ಲಿ ಈಜಲು ತೆರಳಿದ್ದರು.

Young men have been died in the Thammadihalli lake

ಈ ವೇಳೆ ಇಬ್ಬರು ನೀರಿನಲ್ಲಿ ಮುಳುಗಿದ್ದು ಕೂಡಲೇ ಜತೆಗಿದ್ದವರು ಅಲ್ಲಿಂದ ಹೊರಟು ಹೋಗಿದ್ದಾರೆ ಎನ್ನಲಾಗಿದೆ. ತಮ್ಮಡಹಳ್ಳಿ ಗ್ರಾಮದ ಕೆರೆಯಲ್ಲಿ ನೀರು ಪಾಲಾದವರು ಗುಂಡ್ಲುಪೇಟೆ ಪಟ್ಟಣದ ಆಚಾರ್ ಬೀದಿಯ ಅಣ್ಣತಮ್ಮಂದಿರು ಎಂದು ಹೇಳಲಾಗಿದ್ದು, ಮೃತ ದೇಹವನ್ನು ಕೆರೆಯಿಂದ ಗ್ರಾಮಸ್ಥರ ಸಹಾಯ ಹೊರ ತೆಗೆಯಲಾಗಿದೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

English summary
Young men have been drowned and died in the Thammadihalli lake. The deceased are brothers of Achar Street of Gundlupete town and Kiran, a 16-year-old student from Udigala village.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X