ಮೂರ್ತಿಯನ್ನು ಬಿಟ್ಟು ಬೇರೆ ಯಾರೂ ತಾಳಿ ಕಟ್ಟ ಬಾರದು: ದೇವರಿಗೆ ಪತ್ರ ಬರೆದ ಯುವತಿ
ಚಾಮರಾಜನಗರ, ಡಿಸೆಂಬರ್ 30: ದೇವರಿಗೆ ತಮ್ಮ ಇಷ್ಟಾರ್ಥ ಫಲಿಸಲೆಂದು ಭಕ್ತರು ವಿವಿಧ ರೀತಿಯ ಹರಕೆ ನೀಡುವುದು ಅಥವಾ ಹರಕೆ ಕೋರಿಕೆಯ ಪತ್ರಗಳನ್ನು ಹಾಕುವುದು ಸಾಮಾನ್ಯ. ಅದರಂತೆ, ಇಲ್ಲೋರ್ವ ಯುವತಿ ತಾನಿಷ್ಟಪಟ್ಟ ಹುಡುಗ ನನಗೆ ಸಿಗಲಿ ಎಂದು ಪತ್ರ ಬರೆದು ದೇವರ ಹುಂಡಿಗೆ ಹಾಕಿ ಬೇಡಿಕೊಂಡಿದ್ದಾಳೆ
ಈ ಮೊದಲು ಭಕ್ತರು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸು ಎಂದು ದೇವರಿಗೆ ಕಾಣಿಕೆ ಹಾಕುತ್ತಿದ್ದರು. ಅಲ್ಲದೇ ಹರಕೆ ರೂಪದಲ್ಲಿ ಚಿನ್ನ, ಬೆಳ್ಳಿಯಂತಹ ಬೆಲೆ ಬಾಳುವ ವಸ್ತುಗಳನ್ನು ನೀಡುತ್ತಿದ್ದರು. ಆದರೆ ಈಗ ತೀರ ಅಪರೂಪವೆಂಬಂತೆ ಕಾಣಿಕೆ ಹಾಕುವ ಹುಂಡಿಯಲ್ಲಿ ಕೆಲವೊಂದು ವಿಚಿತ್ರ ಪತ್ರಗಳನ್ನು ದೇವರ ಹುಂಡಿಯಲ್ಲಿ ಪತ್ತೆಯಾಗುತ್ತಿರುವುದು ವಿಪರ್ಯಾಸವಾಗಿದೆ.
ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ ಗ್ರಾಮದ 'ಮಾಯಮ್ಮ ದೇವಮ್ಮ' ದೇವಾಲಯದಲ್ಲಿ ಶುಕ್ರವಾರ ಹುಂಡಿ ಎಣಿಕೆ ನಡೆದಿದ್ದು, ಈ ವೇಳೆ ಯುವತಿಯೊರ್ವಳು ಬರೆದಿರುವ ವಿಚಿತ್ರ ಪತ್ರ ಪತ್ತೆಯಾಗಿದೆ. ' ದೇವರೇ, ಮೂರ್ತಿನಾ ಬಿಟ್ಟು ಯಾರೂ ನನ್ನ ಕುತ್ತಿಗೆಗೆ ತಾಳಿ ಕಟ್ಟಬಾರದು' ಎಂದು ಪತ್ರ ಹಾಕಿದ್ದಾಳೆ. ಆಕೆಯ ಪ್ರಾರ್ಥನೆ ಫಲಿಸಿತೇ ಇಲ್ಲವೇ ಎನ್ನುವ ಸತ್ಯ ನಿಗೂಢವಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಚಾಮರಾಜನಗರದ ಚಾಮರಾಜೇಶ್ವರ ದೇವಾಲಯ ಹುಂಡಿ ಎಣಿಕೆ ಕಾರ್ಯ ನಡೆದಿದ್ದ ವೇಳೆ ಕೆಲವು ಪತ್ರಗಳು, ಆಹ್ವಾನ ಪತ್ರಿಕೆಗಳು ಕೂಡ ಪತ್ತೆಯಾಗಿತ್ತು. ಏಸು ಭಕ್ತನೋರ್ವ ಕ್ರಿಸ್ತ ಹುಟ್ಟಿದ ಬಗೆ, ಕ್ರಿಸ್ತನನ್ನು ನಂಬಿದ್ದೆಲ್ಲಾ ಬರೆದು ದೇವರ ಹುಂಡಿಗೆ ಹಾಕಿದ್ದು 'ದೇವರ ರಾಜ್ಯ ಸಮೀಪಿಸಿದೆ' ಎಂಬ ನಿಗೂಢ ಅರ್ತ ವಾಕ್ಯವನ್ನು ಬರೆದು ಹಾಕಿದ್ದ.
ಇನ್ನು, ಯುವಕನೋರ್ವ ತನಗೆ ಹುಡುಗಿ ಕರುಣಿಸು, ಪ್ರೀತಿಯ ದೇವರೆ ಎಂದು ಶಿವಲಿಂಗದ ಚಿತ್ರ ಬರೆದು ಹುಂಡಿಗೆ ಹಾಕಿ ಪ್ರಾರ್ಥಿಸಿದ್ದನು. ಯುವತಿ ಭಾವಚಿತ್ರ, ಆಹ್ವಾನ ಪತ್ರಿಕೆಗಳು ಕೂಡ ಹುಂಡಿಯಲ್ಲಿ ಪತ್ತೆಯಾಗಿತ್ತು.

ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿರುವ ಕಳಸೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪರಿವಾರ ದೇವರುಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ವೇಳೆ ಮಗನ ಇಡೀ ಬದುಕನ್ನೇ ಬದಲಿಸಪ್ಪಾ ಎಂದು ಪತ್ರ ಬರೆದು ಕಾಣಿಕೆ ಹುಂಡಿಗೆ ಹಾಕಿರುವ ಪತ್ರ ಕೂಡ ವೈರಲ್ ಆಗಿತ್ತು,
ಜನರು ದೇವರ ಬಳಿ ವಿವಿಧ ಕೋರಿಕೆಗಳನ್ನು ಇಡುತ್ತಿದ್ದು, ಬೇಗ ಕೆಲಸ ಸಿಗುವಂತೆ ಮಾಡು ತಂದೆ, ಕುಡಿತದ ಚಟ ಬಿಡಿಸು, ಕೋಪ ಹೋಗಲಾಡಿಸು, ಚಂಚಲ ಸ್ವಭಾವ ಹೋಗಲಾಡಿಸು. ರಾತ್ರಿ ಹೊತ್ತು ನಿದ್ದೆ ಬರುವಂತೆ ಮಾಡು, ಭಯ ನಿವಾರಣೆ ಮಾಡಪ್ಪ, ಮನಸ್ಸಿಗೆ ಸುಖ, ಶಾಂತಿ ನೆಮ್ಮದಿ ನೀಡಪ್ಪ ಎಂದು ಪತ್ರದ ಮೂಲಕ ಭಕ್ತರು ದೇವರಿಗೆ ಮನವಿ ಸಲ್ಲಿಸುತ್ತಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications