Get Updates
Get notified of breaking news, exclusive insights, and must-see stories!

ಪಂಜಾಬ್‌ನಲ್ಲಿ ಪೊಲೀಸ್ ಮೇಲೆ ದಾಳಿ ನಡೆಸಿದ 2 ನಿಹಾಂಗ್‌ಗಳ ಹತ್ಯೆ

ಚಂಡೀಘರ್, ಮಾರ್ಚ್ 21: ಪಂಜಾಬ್‌ನ ತರ್ಣ್ ತರಣ್ ಜಿಲ್ಲೆಯಲ್ಲಿ ಭಾನುವಾರ ಪೊಲೀಸರು ಮತ್ತು ನಿಹಾಂಗ್ ಸಿಖ್ಖರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ನಿಹಾಂಗ್ ಸಿಖ್ಖರು ಪೊಲೀಸರ ಮೇಲೆ ಕತ್ತಿಗಳಿಂದ ಹಲ್ಲೆ ನಡೆಸಿದ್ದು, ಇಬ್ಬರು ಅಧಿಕಾರಿಗಳ ಕೈಯನ್ನು ಕತ್ತರಿಸಲಾಗಿದೆ.
ಪೊಲೀಸರ ಮೇಲೆ ದಾಳಿ ನಡೆಸಿದ ಇಬ್ಬರು ನಿಹಾಂಗ್‌ಗಳನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ತರ್ಣ್ ತರಣ್ ಜಿಲ್ಲೆಯ ಸುರ್ ಸಿಂಗ್ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ನಾಂದೇಡ್ ನಲ್ಲಿ ವ್ಯಕ್ತಿಯನ್ನು ಹತ್ಯೆಗೈದ ಇಬ್ಬರು ನಿಹಾಂಗ್‌ಗಳು ಈ ಪ್ರದೇಶಕ್ಕೆ ಬಂದಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಅದನ್ನು ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಇಬ್ಬರು ನಿಹಾಂಗ್‌ಗಳನ್ನು ಈ ಪ್ರದೇಶದಲ್ಲಿ ಕೂಡಿ ಹಾಕಲಾಗಿದೆ ಎಂಬ ಮಾಹಿತಿ ತಿಳಿದು ಅವರನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಪೊಲೀಸರು ತಮ್ಮನ್ನು ಸುತ್ತುವರಿದಿದ್ದಾರೆ ಎಂದು ತಿಳಿದ ನಿಹಾಂಗ್‌ಗಳು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ.

2 Nihangs Attacked On Police With Sword In Punjab, After That Both Shot Dead By Police

ಇಬ್ಬರು ಅಧಿಕಾರಿಗಳಿಗೆ ಗಂಭೀರ ಗಾಯ:
ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ಎಸ್ಎಚ್ಓ ನರೇಂದ್ರ ಸಿಂಗ್ ಮತ್ತು ಎಸ್ಎಚ್ಓ ಬಲ್ವಿಂದರ್ ಸಿಂಗ್ ಎಂಬ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 2020ರ ಏಪ್ರಿಲ್ ತಿಂಗಳಿನಲ್ಲಿ ಇಂಥದ್ದೇ ಒಂದು ಘಟನೆ ವರದಿಯಾಗಿತ್ತು. ಪಟಿಯಾಲಾದ ತರಕಾರಿ ಮಾರುಕಟ್ಟೆಗೆ ನುಗ್ಗಲು ಯತ್ನಿಸಿದ ನಿಹಾಂಗ್ ಒಬ್ಬರನ್ನು ತಡೆಯಲು ಹೋದ ಪೊಲೀಸ್ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+