ಮುಸ್ಲಿಂ ಹುಡುಗಿ 16 ವರ್ಷಕ್ಕೆ ವಿವಾಹವಾಗಬಹುದು: ಹೈಕೋರ್ಟ್
ಚಂಡೀಗಢ್, ಜೂ. 20: 16 ಮತ್ತು 21 ವರ್ಷ ವಯಸ್ಸಿನ ಮುಸ್ಲಿಂ ದಂಪತಿಗಳಿಗೆ ಅವರ ಕುಟುಂಬ ಸದಸ್ಯರಿಂದ ರಕ್ಷಣೆ ನೀಡುವ ಸಂಬಂಧ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಸೋಮವಾರ ತೀರ್ಪು ನೀಡಿದ್ದು, 16 ವರ್ಷಕ್ಕಿಂತ ಮೇಲ್ಪಟ್ಟ ಮುಸ್ಲಿಂ ಹುಡುಗಿ ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹದ ಒಪ್ಪಂದಕ್ಕೆ ಅರ್ಹಳು ಎಂದು ತೀರ್ಪು ನೀಡಿದೆ.
ತಮಗೆ ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದ ಪಠಾಣ್ಕೋಟ್ ಮೂಲದ ಮುಸ್ಲಿಂ ದಂಪತಿಯ ಮನವಿಯ ಮೇರೆಗೆ ನ್ಯಾಯಮೂರ್ತಿ ಜಸ್ಜಿತ್ ಸಿಂಗ್ ಬೇಡಿ ಅವರ ಏಕಸದಸ್ಯ ಪೀಠ ಸದ್ಯ ಈ ಆದೇಶ ನೀಡಿದೆ.
ಅರ್ಜಿದಾರರು ತಮ್ಮ ಕುಟುಂಬದ ಸದಸ್ಯರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದರು ಎಂಬ ಕಾರಣಕ್ಕಾಗಿ, ಅವರು ಭಾರತದ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದಂತೆ ಅವರ ಮೂಲಭೂತ ಹಕ್ಕುಗಳಿಂದ ವಂಚಿತರಾಗಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. ಇಸ್ಲಾಮಿಕ್ ಶರಿಯಾ ನಿಯಮವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಬೇಡಿ, ಮುಸ್ಲಿಂ ಹುಡುಗಿಯ ವಿವಾಹವನ್ನು ಮುಸ್ಲಿಂ ವೈಯಕ್ತಿಕ ಕಾನೂನಿನಿಂದ ನಿಯಂತ್ರಿಸಲಾಗುತ್ತದೆ ಎಂದು ಹೇಳಿದರು.

ಸರ್ ದಿನ್ಶಾ ಫರ್ದುಂಜಿ ಮುಲ್ಲಾ ಅವರ ಪ್ರಿನ್ಸಿಪಲ್ಸ್ ಆಫ್ ಮೊಹಮ್ಮದನ್ ಲಾ ಪುಸ್ತಕದ ಆರ್ಟಿಕಲ್ 195 ರ ಪ್ರಕಾರ, ಅರ್ಜಿದಾರರ ಸಂಖ್ಯೆ. 2 (ಹುಡುಗಿ) 16 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದು, ಅವರ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹದ ಒಪ್ಪಂದಕ್ಕೆ ಒಪ್ಪಲು ಸಮರ್ಥರಾಗಿದ್ದಾರೆ. ಅರ್ಜಿದಾರ ನಂ.1 (ಹುಡುಗ) ವಯಸ್ಸು 21 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಹೇಳಲಾಗಿದೆ. ಹೀಗಾಗಿ, ಅರ್ಜಿದಾರರಿಬ್ಬರೂ ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಮದುವೆಯ ವಯಸ್ಸಿನವರಾಗಿದ್ದಾರೆ ಎಂದು ಅವರು ಹೇಳಿದರು.
ಅರ್ಜಿದಾರರ ಆತಂಕವನ್ನು ನಿವಾರಿಸುವ ಅವಶ್ಯಕತೆಯಿದೆ ಎಂಬ ನಾವು ಸುಮ್ಮನೇ ಇರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ದಂಪತಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಮತ್ತು ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಎಸ್ಎಸ್ಪಿ ಪಠಾಣ್ಕೋಟ್ಗೆ ನಿರ್ದೇಶನ ನೀಡಿದೆ.

ಅರ್ಜಿದಾರರ ಪ್ರಕಾರ, ಅವರ ವಿವಾಹವನ್ನು ಜೂನ್ 8, 2022 ರಂದು ಮುಸ್ಲಿಂ ವಿಧಿಗಳ ಪ್ರಕಾರ ನೆರವೇರಿಸಲಾಯಿತು. ಆದರೆ, ಅವರ ಕುಟುಂಬ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಕುಟುಂಬದ ಅನುಮತಿಯಿಲ್ಲದೆ ಮದುವೆಯಾಗಿದ್ದಕ್ಕಾಗಿ ಬೆದರಿಕೆ ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದರು.
ಅರ್ಜಿದಾರ ದಂಪತಿ ಮುಸ್ಲಿಂ ಕಾನೂನಿನಲ್ಲಿ, ಪ್ರೌಢಾವಸ್ಥೆ ಮತ್ತು ಸಮುದಾಯದ ಮನ್ನಣೆ ಒಂದೇ ಆಗಿರುತ್ತದೆ. ಒಬ್ಬ ವ್ಯಕ್ತಿಯು 15 ವರ್ಷ ವಯಸ್ಸಿನಲ್ಲಿ ಮನ್ನಣೆ ಪಡೆಯುತ್ತಾನೆ ಎಂಬ ಊಹೆ ಇದೆ ಎಂದು ವಾದಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications