ಕೇಜ್ರಿವಾಲ್ ಪಂಜಾಬ್ ಪ್ರವಾಸಕ್ಕೂ ಮುನ್ನ, ಗೋಡೆಗಳ ಮೇಲೆ ಖಲಿಸ್ತಾನ್ ಪರ ಘೋಷಣೆ
ಜಲಂಧರ್ ಜೂನ್ 15: ಪಂಜಾಬ್ನಲ್ಲಿ ಖಾಲಿಸ್ತಾನ್ ಬೆಂಬಲಿಗರಿಂದ ಪ್ರತಿನಿತ್ಯ ನೀಚ ಕೃತ್ಯಗಳು ನಡೆಯುತ್ತಿವೆ. ಕೆಲವೊಮ್ಮೆ ಭಾರತದ ವಿರುದ್ಧ ಘೋಷಣೆಗಳನ್ನು ಎತ್ತಲಾಗುತ್ತದೆ ಮತ್ತು ಕೆಲವೊಮ್ಮೆ ಗೋಡೆಗಳ ಮೇಲೆ ಆಕ್ಷೇಪಾರ್ಹ ಪದಗಳನ್ನು ಬರೆಯಲಾಗುತ್ತದೆ. ಇಂದು ಜಲಂಧರ್ನಲ್ಲಿ ದೆಹಲಿ ಸಿಎಂ-ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಸಿಎಂ ಭಗವಂತ್ ಮಾನ್ ಕಾರ್ಯಕ್ರಮಕ್ಕೂ ಮುನ್ನ, ಖಲಿಸ್ತಾನ್ ಬೆಂಬಲಿಗರು ಮತ್ತೆ ಕೃತ್ಯ ಎಸಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ, ಜಲಂಧರ್ನ ಕೊಳದ ಬಳಿ ಇರುವ ದೇವಿಯ ಶಕ್ತಿ ಪೀಠದ (ದೇವಾಲಯ) ಗೋಡೆಗಳ ಮೇಲೆ ಖಲಿಸ್ತಾನ್ ಬೆಂಬಲಕ್ಕೆ ಸಂಬಂಧಿಸಿದ ಘೋಷಣೆಗಳನ್ನು ಬರೆಯಲಾಗಿದೆ ಎಂದು ಹೇಳಿದರು. ಇದೀಗ ಜಲಂಧರ್ ಪೊಲೀಸರು ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಇದರಿಂದ ಆರೋಪಿಗಳನ್ನು ಹಿಡಿಯಲು ಸಾಧ್ಯವಾಗುತ್ತದೆ ಎಂದಿದ್ದಾರೆ. ಘೋಷಣೆ ಕೂಗಿದವರ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ವಿಶೇಷವೆಂದರೆ ಇಂದು ದೆಹಲಿ ಸಿಎಂ ಹಾಗೂ ಆಪ್ ನ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹಾಗೂ ಸಿಎಂ ಭಗವಂತ್ ಮಾನ್ ಅವರ ಕಾರ್ಯಕ್ರಮ ಜಲಂಧರ್ ನಲ್ಲಿ ನಡೆಯಲಿದ್ದು, ಇದಕ್ಕೂ ಮುನ್ನ ಖಲಿಸ್ತಾನ್ ಬೆಂಬಲಿಗರು ಕೃತ್ಯ ಎಸಗಿದ್ದಾರೆ. ಆಪರೇಷನ್ ಬ್ಲೂ ಸ್ಟಾರ್ನ ವಾರ್ಷಿಕೋತ್ಸವದಂದು ಸಹ ಇಂತಹ ದೇಶ ವಿರೋಧಿ ಘೋಷಣೆಗಳು ಎದ್ದಿದ್ದವು.

ಇದಕ್ಕೂ ಮುನ್ನ ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶ ದ್ವಾರದಲ್ಲಿ ಸಾವಿರಾರು ಜನರು ಜಮಾಯಿಸಿದ ವೇಳೆ ಸಮುದಾಯವೊಂದರ ಪರವಾಗಿ ಖಲಿಸ್ತಾನ್ ಪರ ಘೋಷಣೆಗಳನ್ನು ಎತ್ತಲಾಯಿತು ಮತ್ತು ಖಲಿಸ್ತಾನಿ ಪ್ರತ್ಯೇಕತಾವಾದಿ ಜರ್ನೈಲ್ ಭಿಂದ್ರನ್ವಾಲೆ ಅವರ ಪೋಸ್ಟರ್-ಬ್ಯಾನರ್ಗಳನ್ನು ಸಹ ಹಿಡಿಯಲಾಗಿತ್ತು. ಈ ಜನರು ಗೋಲ್ಡನ್ ಟೆಂಪಲ್ ಒಳಗೆ ಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಅವರನ್ನು ಗೇಟ್ ಬಳಿ ನಿಲ್ಲಿಸಲಾಯಿತು.












Click it and Unblock the Notifications