'ತಮ್ಮವರ ವಿರುದ್ಧವೇ ಮಾತನಾಡುತ್ತಾರೆ': ಕಾಂಗ್ರೆಸ್ ವಿರುದ್ಧ ಕ್ಯಾಪ್ಟನ್ ವಾಗ್ದಾಳಿ
ಚಂಡೀಗಢ, ಜನವರಿ 05: ಪಂಜಾಬ್ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ಹಾಗೂ ಕಾಂಗ್ರೆಸ್ ರಾಜ್ಯ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ನಡುವೆ ವಾಕ್ಸಮರವು ಮುಂದುವರಿದಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ, ಮಾಜಿ ಕಾಂಗ್ರೆಸ್ ನಾಯಕ ಅಮರೀಂದರ್ ಸಿಂಗ್, "ಕಾಂಗ್ರೆಸ್ ಪಕ್ಷದವರು ತಮ್ಮವರ ವಿರುದ್ಧವೇ ಮಾತನಾಡಿಕೊಳ್ಳುತ್ತಾರೆ," ಎಂದು ಟೀಕೆ ಮಾಡಿದ್ದಾರೆ. ಹಾಗೆಯೇ ಇವರಿಬ್ಬರು ಕೂಡಾ ವಿಧಾನಸಭೆ ಚುನಾವಣೆಗೆ ಒಂದು ವಾರ ಇರುವಾಗಲೂ ಕೂಡಾ ಪರಸ್ಪರರ ವಿರುದ್ಧ ಮಾತನಾಡಿಕೊಳ್ಳುತ್ತಾರೆ," ಎಂದು ಹೇಳಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಿಎಲ್ಸಿ ಮುಖ್ಯಸ್ಥ ಕ್ಯಾಪ್ಟನ್ ಅಮರೀಂದರ್ ಸಿಂಗ್, "ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ಪ್ರತಿ ದಿನವೂ ಕೂಡಾ ಹೊಸ ಹೊಸ ಘೋಷಣೆಯನ್ನು ಮಾಡುತ್ತಾರೆ. ಈಗ ನವಜೋತ್ ಸಿಂಗ್ ಸಿಧು ಕೂಡಾ ಚರಣ್ಜೀತ್ ಸಿಂಗ್ ಚನ್ನಿ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಇಬ್ಬರು ಕೂಡಾ ಪರಸ್ಪರರ ವಿರುದ್ಧವಾಗಿ ಮಾತನಾಡುತ್ತಿದ್ದಾರೆ," ಎಂದು ತಿಳಿಸಿದ್ದಾರೆ.
ಇನ್ನು ಈ ಸಂದರ್ಭದಲ್ಲೇ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ವಿರುದ್ಧವಾಗಿ ಮಾತನಾಡಿದ ಅಮರಿಂದರ್ ಸಿಂಗ್, "ನವಜೋತ್ ಸಿಂಗ್ ಸಿಧುಗೆ ತನ್ನದೇ ಆದ ಯಾವುದೇ ಒಂದು ನಿಲುವು ಇಲ್ಲ. ಪ್ರತಿ ಕ್ಷಣ ಕ್ಷಣಕ್ಕೂ ಸಿಧು ತನ್ನ ನಿಲುವನ್ನು ಬದಲು ಮಾಡುತ್ತಾರೆ. ಪ್ರತಿ ಕ್ಷಣ ಕ್ಷಣಕ್ಕೂ ಬದಲಾವಣೆ ಆಗುವ ವ್ಯಕ್ತಿಯ ಬಗ್ಗೆ ಮಾತನಾಡುವುದು ಮೌಲ್ಯಯುತವಲ್ಲ. ಸಿಧುವಿಗೆ ತನ್ನದೇ ಆದ ನಿಲುವೇ ಇಲ್ಲ," ಎಂದು ಟೀಕೆ ಮಾಡಿದ್ದಾರೆ.

ಸಿಧು, ಚನ್ನಿ ವಿರುದ್ಧ ಪಂಜಾಬ್ ಮಾಜಿ ಸಿಎಂ ವಾಗ್ದಾಳಿ
"ನವಜೋತ್ ಸಿಂಗ್ ಸಿಧು ಪಂಜಾಬ್ ಸಂಸತ್ತಿನಲ್ಲಿ ಸಚಿವ ಆಗಿದ್ದ ಸಂದರ್ಭದಲ್ಲಿ ತನ್ನ ಯಾವುದೇ ಕಾರ್ಯವನ್ನು ಸರಿಯಾದ ರೀತಿಯಲ್ಲಿ ಮಾಡಿಲ್ಲ. ಆದ ಕಾರಣದಿಂದಾಗಿ ನಾವು ನವಜೋತ್ ಸಿಂಗ್ ಸಿಧುವನ್ನು ಸಚಿವ ಸಂಪುಟದಿಂದ ಹೊರಗಿಡಬೇಕಾಯಿತು," ಎಂದು ಹೇಳಿರುವ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಪಂಜಾಬ್ನ ಹಾಲಿ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಂಜಾಬ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲು ಇನ್ನು ಕೆಲವೇ ವಾರಗಳು ಇರುವ ಸಂದರ್ಭದಲ್ಲಿ ಹಲವಾರು ಘೋಷಣೆಗಳನ್ನು ಮಾಡಿದ ಚನ್ನಿ ವಿರುದ್ಧ ಕಿಡಿಕಾರಿದ್ದಾರೆ. "ಸಿಎಂ ಚನ್ನಿ ಈ ಎಲ್ಲಾ ಘೋಷಣೆಗಳನ್ನು ಹೇಗೆ ಪೂರೈಸುತ್ತಾರೆ ಎಂಬುವುದನ್ನು ನಾವು ಪ್ರಶ್ನೆ ಮಾಡಬೇಕಾಗಿದೆ," ಎಂದರು. "ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ಮಾಡುವ ಘೋಷಣೆಗಳನ್ನು ನೋಡಿದಾಗ, ಆ ಭರವಸೆಗಳನ್ನು ಹೇಗೆ ಪೂರೈಸುತ್ತೀರಿ ಎಂದು ನಾವು ಅವರ ಬಳಿ ಕೇಳಬೇಕು. ಈ ಭರವಸೆಗಳನ್ನು ಪೂರೈಸಲು ಕಾಂಗ್ರೆಸ್ ಬಳಿ ಯಾವುದೇ ಯೋಜನೆಗಳು ಇಲ್ಲ," ಎಂದಿದ್ದಾರೆ.
ಪಂಜಾಬ್ನಲ್ಲಿ ಬಿಜೆಪಿ ಜೊತೆ ಮಾಜಿ ಕೈ ನಾಯಕನ ಮೈತ್ರಿ
ಪಂಜಾಬ್ ಕಾಂಗ್ರೆಸ್ನಲ್ಲಿ ಮನಸ್ಥಾಪ ಉಂಟಾಗಿ ಪಕ್ಷವನ್ನು ತೊರೆದು ತನ್ನದೇ ಆದ ಪಕ್ಷವನ್ನು ಸ್ಥಾಪನೆ ಮಾಡಿರುವ ಅಮರಿಂದರ್ ಸಿಂಗ್ ಇತ್ತೀಚೆಗೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಪಂಜಾಬ್ನಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಅಮಿತ್ ಶಾ ಜೊತೆಯಲ್ಲಿ ಮಾತುಕತೆಯನ್ನು ಕೂಡಾ ನಡೆಸಿದ್ದಾರೆ. ಪಂಜಾಬ್ನಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಪಂಜಾಬ್ ರಾಜಕೀಯವಾಗಿ ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಇನ್ನು ಈ ಮೈತ್ರಿಯಲ್ಲಿ ಬಿಜೆಪಿ ಪಕ್ಷವು ಹೆಚ್ಚು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ. ಆದರೆ ಪಂಜಾಬ್ ಲೋಕ ಕಾಂಗ್ರೆಸ್ ಮಾತ್ರ 30 ರಿಂದ 35 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. (ಒನ್ಇಂಡಿಯಾ ಸುದ್ದಿ)
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications