ಸರ್ಜರಿ ನಂತರ ಕ್ಯಾಪ್ಟನ್ ಸಿಂಗ್ ಮುಂದಿದೆ ಭರ್ಜರಿ ಆಫರ್
ಚಂಡೀಗಢ, ಜುಲೈ 1: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತೆ ಸುದ್ದಿಯಲ್ಲಿದ್ದಾರೆ. ಕಾಂಗ್ರೆಸ್ ಸೋಲು ಕಂಡಿದ್ದಾರೆ. ತನ್ನದೇ ಆದ ಪಕ್ಷವನ್ನು ಕಟ್ಟಿ ಪಟಿಯಾಲದಲ್ಲಿ ಸ್ಪರ್ಧೆಗೆ ಇಳಿದಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸೋಲುಂಡಿದ್ದರು.
89 ವರ್ಷ ವಯಸ್ಸಿನ ಮಾಜಿ ಮುಖ್ಯಮಂತ್ರಿ ಸದ್ಯ ಲಂಡನ್ನಿನಲ್ಲಿ ಬೆನ್ನು ನೋವಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಸರ್ಜರಿಗೊಳಪಡುತ್ತಿದ್ದಾರೆ. ಇದಾದ ಬಳಿಕ ರಾಜ್ಯಕ್ಕೆ ಮರಳಲಿದ್ದು, ಪ್ರಮುಖ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.
ಭಾನುವಾರದಂದು ಸರ್ಜರಿಗೊಳಪಡುತ್ತಿದ್ದು, ನಂತರ ತಮ್ಮ ಪಕ್ಷದೊಂದಿಗೆ ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿದೆ. ಪಂಜಾಬ್ನಲ್ಲಿ ಕಾಂಗ್ರೆಸ್ನಿಂದ ಹೊರ ಬಂದು ತನ್ನದೇ ಆದ ಪಂಜಾಜ್ ಲೋಕ ಕಾಂಗ್ರೆಸ್ ಪಕ್ಷವನ್ನು ಸ್ಥಾಪನೆ ಮಾಡಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆಗೆ ಇಳಿದಿದ್ದರು. ಆದರೆ ಈಗ ಸೋಲು ಕಂಡಿದ್ದಾರೆ.

ಬಿಜೆಪಿ 65 ಸ್ಥಾನಗಳಲ್ಲಿ, ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ 37 ಸ್ಥಾನಗಳಲ್ಲಿ ಮತ್ತು ಎಸ್ಎಡಿ-ಸಂಯುಕ್ತ್ 15 ಸ್ಥಾನಗಳಲ್ಲಿ ಚುನಾವಣೆ ಎದುರಿಸಿತ್ತು. ಈ ಹಿಂದೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪಂಜಾಬ್ನಲ್ಲಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಆಗಿದ್ದರು.
ವಿಶೇಷವೆಂದರೆ ಅಮರೀಂದರ್ ಸಿಂಗ್ ಪತ್ನಿ ಪ್ರಣೀರ್ ಕೌರ್ ಪಟಿಯಾಲಾ ಸಂಸದೆಯಾಗಿದ್ದಾರೆ. ಮಾಜಿ ಕೇಂದ್ರ ಸಚಿವೆಯಾಗಿರುವ ಪ್ರಣೀತ್ ಅವರು ಪತಿ ಬಳಿ ಒಂದೇ ಬೇಡಿಕೆ ಇಟ್ಟಿದ್ದಾರೆ. ಪುತ್ರಿ ಜೈ ಇಂದರ್ ಕೌರ್ ಅವರಿಗೆ ಮುಂಬರುವ ಲೋಕಸಭೆಯಲ್ಲಿ ಟಿಕೆಟ್ ಸಿಕ್ಕರೆ ಸಾಕು ಎಂದಿದ್ದಾರೆ.
ಪಕ್ಷ ವಿಲೀನ
ಐದು ದಶಕಗಳ ರಾಜಕೀಯ ಅನುಭವವಿರುವ ಕ್ಯಾ. ಅಮರೀಂದರ್ ಸಿಂಗ್ ಅವರು ಕಾಂಗ್ರೆಸ್ ತೊರೆದ ಬಳಿಕ ಪಂಜಾಬ್ ಲೋಕ್ ಕಾಂಗ್ರೆಸ್ ಎಂಬ ಹೊಸ ಪಕ್ಷ ಕಟ್ಟಿದರು. ಪಂಜಾಬ್ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಪಂಜಾಬ್ ಲೋಕ್ ಕಾಂಗ್ರೆಸ್ ಚಟುವಟಿಕೆಗಳು ತಣ್ಣಗಾಗಿತ್ತು. ಈಗ ಭಾರತೀಯ ಜನತಾ ಪಕ್ಷದ ಜೊತೆಗೆ ಪಕ್ಷ ವಿಲೀನಗೊಳಿಸಿ ತಮ್ಮ ಹೊಸ ಪಕ್ಷವನ್ನು ಸಕ್ರಿಯವಾಗಿಡಲು ಕ್ಯಾಪ್ಟನ್ ಮುಂದಾಗಿದ್ದಾರೆ. ಪ್ರಮುಖವಾಗಿ, ಮತ್ತೊಬ್ಬ ಹಿರಿಯ ಕಾಂಗ್ರೆಸ್ ನಾಯಕ ಸುನೀಲ್ ಜಾಖರ್ ಕೂಡ ಮೇ ತಿಂಗಳಲ್ಲಿ ಬಿಜೆಪಿಗೆ ಸೇರಲು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದನ್ನು ಇಲ್ಲಿ ಸ್ಮರಿಸಬಹುದು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications