ಗೋಲ್ಡನ್ ಟೆಂಪಲ್ಗೆ ಪಂಜಾಬ್ ಸಿಎಂ ಭೇಟಿ: 2 ದಿನದಲ್ಲಿ ಎಸ್ಐಟಿ ತನಿಖಾ ವರದಿ
ಚಂಡಿಗಢ ಡಿಸೆಂಬರ್ 20: ಗೋಲ್ಡನ್ ಟೆಂಪಲ್ನಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ನಂತರ, ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿ ಅಮೃತಸರದ ದೇಗುಲಕ್ಕೆ ಭೇಟಿ ನೀಡಿ ಜನರಿಗೆ ಶಾಂತವಾಗಿರುವಂತೆ ಮನವಿ ಮಾಡಿದರು. ಶಾಂತವಾಗಿ ಎಲ್ಲಾ ಧರ್ಮಗಳ ಆರಾಧನಾ ಸ್ಥಳಗಳನ್ನು ಗೌರವಿಸಿ ರಕ್ಷಿಸಿ ಎಂದು ಅವರು ರಾಜ್ಯದ ಜನರನ್ನು ಕೇಳಿದ್ದಾರೆ.
ಗೋಲ್ಡನ್ ಟೆಂಪಲ್ ಘಟನೆಯ ತನಿಖೆಗಾಗಿ ಕಾನೂನು ಮತ್ತು ಸುವ್ಯವಸ್ಥೆಯ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲಾಗಿದೆ ಎಂದು ಪಂಜಾಬ್ ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಹೇಳಿದ್ದಾರೆ. ಇನ್ನೆರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ದರ್ಬಾರ್ ಸಾಹಿಬ್ನಲ್ಲಿ ಆಪಾದಿತ ಹತ್ಯೆ ಪ್ರಯತ್ನವನ್ನು ಅತ್ಯಂತ ದುರದೃಷ್ಟಕರ ಎಂದು ಹೇಳಿದ ಚನ್ನಿ, ಪೊಲೀಸರು ಈ ವಿಷಯವನ್ನು ಸಂಪೂರ್ಣ ತನಿಖೆ ಮಾಡುತ್ತಾರೆ ಎಂದು ಭರವಸೆ ನೀಡಿದರು. ವರದಿಗಳ ಪ್ರಕಾರ, ಹತ್ಯೆ ಮಾಡಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ಸೆಕ್ಷನ್ 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶ) ಮತ್ತು IPC 307 (ಕೊಲೆ ಪ್ರಕರಣ ಪ್ರಕರಣ ದಾಖಲಿಸಲಾಗಿದೆ) ಸೆಕ್ಷನ್ ದಾಖಲಿಸಲಾಗಿದೆ.

ದರ್ಬಾರ್ ಸಾಹಿಬ್ನಲ್ಲಿ ಇಡೀ ದಿನ ಕಳೆದ ಆರೋಪಿ
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಬೆಳಿಗ್ಗೆ 11:30 ಕ್ಕೆ ದರ್ಬಾರ್ ಸಾಹಿಬ್ ಕಾಂಪ್ಲೆಕ್ಸ್ಗೆ ಪ್ರವೇಶಿಸಿದ್ದಾನೆ. ಘಟನೆಯ ಸಮಯದವರೆಗೆ, ಅಂದರೆ ಸಂಜೆ 6 ಗಂಟೆಯವರೆಗೆ ಆರೋಪಿ ಅಲ್ಲೇ ಇದ್ದನು ಎನ್ನಲಾಗುತ್ತಿದೆ. ಆರೋಪಿಗಳು ದಾಳಿಯ ಗುರಿಯನ್ನು ಹೊಂದಿದ್ದರು ಎಂದು ತಿಳಿದು ಬಂದಿದೆ ಎಂದು ಉಪ ಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ದರ್ಬಾರ್ ಸಾಹಿಬ್ನ ಮಾರುಕಟ್ಟೆಗಳು ಮತ್ತು ಅಕ್ಕಪಕ್ಕದ ಪ್ರದೇಶಗಳ ಸಿಸಿಟಿವಿ ದೃಶ್ಯಗಳನ್ನು ಸಹ ಆರೋಪಿಯು ಎಲ್ಲಿಂದ ಬಂದಿದ್ದಾನೆ ಮತ್ತು ಅವನು ಯಾರೊಂದಿಗಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಸ್ಕ್ಯಾನ್ ಮಾಡಲಾಗುತ್ತಿದೆ. ಆರೋಪಿಯನ್ನು ಗುರುತಿಸಲಾಗಿಲ್ಲ ಮತ್ತು ಆತನ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ರಾಂಧವಾ ಹೇಳಿದರು. ಪಂಜಾಬ್ ಪೊಲೀಸರು, ಎಸ್ಜಿಪಿಸಿ ಸಹಯೋಗದಲ್ಲಿ ಗುರುದ್ವಾರಗಳು ಸಿಸಿಟಿವಿ ಕ್ಯಾಮೆರಾಗಳನ್ನು ಹೊಂದಿದ್ದು, ಅದು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆಯೆ ಎಂದು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದರು.
ಪಂಜಾಬ್ ವಿಧಾನಸಭೆಯು 2018 ರಲ್ಲಿ ಸೆಕ್ಷನ್ 298 ರಿಂದ 295-ಎ ವರೆಗೆ ತಿದ್ದುಪಡಿ ಮಾಡಲಾಗಿದೆ. ಆದರೆ ಇದುವರೆಗೆ ಕೇಂದ್ರವು ಯಾವುದೇ ಕ್ರಮ ಕೈಗೊಂಡಿಲ್ಲ. ಸೆಕ್ಷನ್ 295-ಎ ಯಾವುದೇ ಧರ್ಮದ ದ್ವಂದ್ವ ಘಟನೆಗಳಲ್ಲಿ ತೊಡಗಿಸಿಕೊಂಡವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಹಕ್ಕನ್ನು ಹೊಂದಿದೆ ಎಂದು ಉಪ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಪಂಜಾಬ್ ಸರ್ಕಾರವು ಸೆಕ್ಷನ್ 295-ಎ ಅನುಮೋದನೆಗಾಗಿ ಕೇಂದ್ರಕ್ಕೆ ಪತ್ರವನ್ನು ಕಳುಹಿಸುತ್ತದೆ ಎಂದು ರಾಂಧವಾ ಸುದ್ದಿಗಾರರಿಗೆ ತಿಳಿಸಿದರು. ಪಂಜಾಬಿಗಳು ಇಂತಹ ಪ್ರಯತ್ನಗಳನ್ನು ಅನುಭವಿಸುತ್ತಲೇ ಇದ್ದಾರೆ ಎಂದು ಪುನರುಚ್ಚರಿಸಿದ ಉಪಮುಖ್ಯಮಂತ್ರಿ, ಪಂಜಾಬ್ನ ಶಾಂತಿ ಮತ್ತು ಸೌಹಾರ್ದತೆಯನ್ನು ಎಲ್ಲಾ ಸಂರ್ಭದಲ್ಲಿಯೂ ಕಾಪಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಗೋಲ್ಡನ್ ಟೆಂಪಲ್ನಲ್ಲಿ ಏನಾಯ್ತು?
ಶನಿವಾರದಂದು ವ್ಯಕ್ತಿಯೊಬ್ಬರು ರೆಹ್ರಾಸ್ ಸಾಹಿಬ್ ಪಾಥ್ (ಸಂಜೆಯ ಪ್ರಾರ್ಥನೆ) ಸಮಯದಲ್ಲಿ ಗೋಲ್ಡನ್ ಟೆಂಪಲ್ನೊಳಗೆ ಹರ್ಮಂದಿರ್ ಸಾಹಿಬ್ ಗುರುದ್ವಾರವನ್ನು ಪ್ರವೇಶಿಸಲು ಬೇಲಿ ಹಾರಿದ್ದಾನೆ. ನಂತರ ಅವನು ಕೇವಲ ಗ್ರಂಥಿ ಸಿಖ್ಖರಿಗೆ ಮಾತ್ರ ತೆರೆದಿರುವ ಮೀಸಲು ಪ್ರದೇಶದೊಳಗೆ ಗುರು ಗ್ರಂಥ ಸಾಹಿಬ್ ಮುಂದೆ ಇರಿಸಲಾದ ಕತ್ತಿಯನ್ನು ಎತ್ತಿಕೊಳ್ಳಲು ಪ್ರಯತ್ನಿಸಿದ್ದಾನೆ.
"ಆತ 24-25 ವರ್ಷ ವಯಸ್ಸಿನ ವ್ಯಕ್ತಿ. ಪವಿತ್ರ ಪುಸ್ತಕವನ್ನು [ಗುರು ಗ್ರಂಥ ಸಾಹಿಬ್] ಇರಿಸಲಾಗಿರುವ ಪ್ರದೇಶದ ಒಳಗೆ ಹೋಗಿದ್ದಾನೆ. ಅವನು ಅಲ್ಲಿದ್ದ ಕತ್ತಿಯನ್ನು ತೆಗೆದುಕೊಳ್ಳುವ ಮೂಲಕ ಅಪವಿತ್ರಗೊಳಿಸಲು ಪ್ರಯತ್ನಿಸಿದನು. ಪ್ರಾರ್ಥನೆಯಲ್ಲಿದ್ದ ಜನ ಆತನನ್ನು ಹಿಡಿದು ಹೊಡೆದಿದ್ದಾರೆ. ಜೊತೆಗೆ ಆ ವ್ಯಕ್ತಿ ಸಾವನ್ನಪ್ಪಿದ್ದಾನೆ "ಎಂದು ಅಮೃತಸರದ ಡಿಸಿಪಿ, ಪರ್ಮಿಂದರ್ ಸಿಂಗ್ ಭಂಡಾಲ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಕಪುರ್ತಲಾ ಜಿಲ್ಲೆಯ ಗುರುದ್ವಾರದಲ್ಲಿ ಧಾರ್ಮಿಕ ಧ್ವಜವನ್ನು ತೆಗೆಯಲು ಯತ್ನಿಸಿದ ವ್ಯಕ್ತಿಯನ್ನು ಜನ ಹೊಡೆದು ಕೊಂದಿದ್ದಾರೆ. ಕಪುರ್ತಲದ ನಿಜಾಂಪುರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಈ ವ್ಯಕ್ತಿ ನಿಜಾಂಪುರದ ಗುರುದ್ವಾರದಲ್ಲಿ ಸಿಖ್ಖರ ಧಾರ್ಮಿಕ ಧ್ವಜವಾದ ನಿಶಾನ್ ಸಾಹಿಬ್ ಅನ್ನು ತೆಗೆದುಹಾಕಲು ಪ್ರಯತ್ನಿಸಿದನು. ಆತನನ್ನು ಭಕ್ತರು ಹೊಡೆದು ಸಾಯಿಸಿದ್ದಾರೆ ಎನ್ನಲಾಗಿದೆ.
Recommended Video
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications