ಬಿಜೆಪಿ ಹರ್ಯಾಣದಲ್ಲಿ ಗೋಪಾಲ್ ಕಂಡ ಬೆಂಬಲ ಪಡೆಯುತ್ತಿಲ್ಲ: ರವಿಶಂಕರ್ ಪ್ರಸಾದ್
ಚಂಡೀಗಢ, ಅಕ್ಟೋಬರ್ 26: ಬಿಜೆಪಿಯು ಹರ್ಯಾಣದಲ್ಲಿ ಪಕ್ಷೇತರ ಶಾಸಕ ಗೋಪಾಲ್ ಕಂಡ ಅವರ ಬೆಂಬಲವನ್ನು ಪಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಗೋಪಾಲ್ ಕಂಡ ಅವರು ಕೊಲೆ ಹಾಗೂ ಅತ್ಯಾಚಾರ ಆರೋಪಿಯಾಗಿದ್ದಾರೆ. ಅವರು ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದು, ಯಾವುದೇ ಕಾರಣಕ್ಕೂ ಬಿಜೆಪಿ ಅವರ ಬೆಂಬಲ ಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ದೊಡ್ಡಪಕ್ಷವಾಗಿ ಹೊರಹೊಮ್ಮಿದ್ದರೂ ಸಹ ಬಹುಮತ ಸಾಬೀತಿಗೆ ಇನ್ನೂ ಆರು ಸ್ಥಾನಗಳ ಅವಶ್ಯಕತೆ ಇದೆ. ಹೀಗಾಗಿ ಪಕ್ಷೇತರ ಮತ್ತು ಇತರೆ ಪ್ರಾದೇಶಿಕ ಪಕ್ಷಗಳ ಬೆಂಬಲ ಪಡೆದು, ಸರ್ಕಾರ ರಚನೆಗೆ ಕಸರತ್ತು ನಡೆಸಿದೆ.

ಕೊಲೆ ಮತ್ತು ಅತ್ಯಾಚಾರ ಆರೋಪಿಯಾಗಿರುವ ಗೋಪಾಲ್ ಕಂಡ ಅವರು ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದು, ಇದೀಗ ಬಿಜೆಪಿ ಗೋಪಾಲ್ ಅವರ ಬೆಂಬಲ ಪಡೆಯಲು ಮುಂದಾಗಿದೆ ಎಂದು ಹೇಳಲಾಗಿತ್ತು. ಆದರೂ ಯಾವುದೇ ಕಾರಣಕ್ಕೂ ಅವರ ಬೆಂಬಲ ಪಡೆಯುವುದಿಲ್ಲ ಎಂದು ನಿಷ್ಠೂರವಾಗಿಯೇ ಬಿಜೆಪಿ ಹೇಳಿದೆ.
ಆದರೆ ಶುಕ್ರವಾರ ಕಂಡ ಅವರು ತಮ್ಮ ಬೆಂಬಲ ಬಿಜೆಪಿ ಪಕ್ಷಕ್ಕಿದೆ ಎಂದು ಹೇಳಿದ್ದರು. ಹೀಗಾಗಿ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಮಾತನಾಡಿ, ಬಿಜೆಪಿಗೆ ಎರಡು ನಾಲಿಕೆ ಇದೆ ಪದೇ ಪದೇ ಹೇಳಿಕೆ ಬದಲಾಯಿಸುತ್ತದೆ ಎಂದು ಟೀಕಿಸಿದ್ದರು.
ಮೋದಿ ಸರ್ಕಾರದಲ್ಲಿ ಗೋಪಾಲ್ ಸಚಿವರಾಗಿದ್ದರು ಆದರೆ ಗೋಪಾಲ್ ಅವರ ಮೇಲೆ ದೂರುಗಳು ಕೇಳಿಬಂದಾಗ ಅವರನ್ನು ಸಂಪುಟದಿಂದ ತೆಗೆದು ಹಾಕಿದ್ದರು.
ಚುನಾವಣೆಯಲ್ಲಿ ಗೆದ್ದ ತಕ್ಷಣ ಗೋಪಾಲ್ ಕಂಡ ನಿರ್ದೋಷಿಯಲ್ಲ. ಚುನಾವಣೆಯಲ್ಲಿ ಗೆಲ್ಲಲು ಹಲವು ಅಂಶಗಳು ಇರುತ್ತವೆ. ಬಿಜೆಪಿ ತನ್ನ ಸಿದ್ಧಾಂತವನ್ನು ಮರೆಯಬಾರದು ಎಂದು ಮನವಿ ಮಾಡಿ ಉಮಾಭಾರತಿ ಟ್ವೀಟ್ ಮಾಡಿದ್ದರು..
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications