ಬಿಜೆಪಿ ಹರ್ಯಾಣದಲ್ಲಿ ಗೋಪಾಲ್ ಕಂಡ ಬೆಂಬಲ ಪಡೆಯುತ್ತಿಲ್ಲ: ರವಿಶಂಕರ್ ಪ್ರಸಾದ್
ಚಂಡೀಗಢ, ಅಕ್ಟೋಬರ್ 26: ಬಿಜೆಪಿಯು ಹರ್ಯಾಣದಲ್ಲಿ ಪಕ್ಷೇತರ ಶಾಸಕ ಗೋಪಾಲ್ ಕಂಡ ಅವರ ಬೆಂಬಲವನ್ನು ಪಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಗೋಪಾಲ್ ಕಂಡ ಅವರು ಕೊಲೆ ಹಾಗೂ ಅತ್ಯಾಚಾರ ಆರೋಪಿಯಾಗಿದ್ದಾರೆ. ಅವರು ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದು, ಯಾವುದೇ ಕಾರಣಕ್ಕೂ ಬಿಜೆಪಿ ಅವರ ಬೆಂಬಲ ಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ದೊಡ್ಡಪಕ್ಷವಾಗಿ ಹೊರಹೊಮ್ಮಿದ್ದರೂ ಸಹ ಬಹುಮತ ಸಾಬೀತಿಗೆ ಇನ್ನೂ ಆರು ಸ್ಥಾನಗಳ ಅವಶ್ಯಕತೆ ಇದೆ. ಹೀಗಾಗಿ ಪಕ್ಷೇತರ ಮತ್ತು ಇತರೆ ಪ್ರಾದೇಶಿಕ ಪಕ್ಷಗಳ ಬೆಂಬಲ ಪಡೆದು, ಸರ್ಕಾರ ರಚನೆಗೆ ಕಸರತ್ತು ನಡೆಸಿದೆ.

ಕೊಲೆ ಮತ್ತು ಅತ್ಯಾಚಾರ ಆರೋಪಿಯಾಗಿರುವ ಗೋಪಾಲ್ ಕಂಡ ಅವರು ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದು, ಇದೀಗ ಬಿಜೆಪಿ ಗೋಪಾಲ್ ಅವರ ಬೆಂಬಲ ಪಡೆಯಲು ಮುಂದಾಗಿದೆ ಎಂದು ಹೇಳಲಾಗಿತ್ತು. ಆದರೂ ಯಾವುದೇ ಕಾರಣಕ್ಕೂ ಅವರ ಬೆಂಬಲ ಪಡೆಯುವುದಿಲ್ಲ ಎಂದು ನಿಷ್ಠೂರವಾಗಿಯೇ ಬಿಜೆಪಿ ಹೇಳಿದೆ.
ಆದರೆ ಶುಕ್ರವಾರ ಕಂಡ ಅವರು ತಮ್ಮ ಬೆಂಬಲ ಬಿಜೆಪಿ ಪಕ್ಷಕ್ಕಿದೆ ಎಂದು ಹೇಳಿದ್ದರು. ಹೀಗಾಗಿ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಮಾತನಾಡಿ, ಬಿಜೆಪಿಗೆ ಎರಡು ನಾಲಿಕೆ ಇದೆ ಪದೇ ಪದೇ ಹೇಳಿಕೆ ಬದಲಾಯಿಸುತ್ತದೆ ಎಂದು ಟೀಕಿಸಿದ್ದರು.
ಮೋದಿ ಸರ್ಕಾರದಲ್ಲಿ ಗೋಪಾಲ್ ಸಚಿವರಾಗಿದ್ದರು ಆದರೆ ಗೋಪಾಲ್ ಅವರ ಮೇಲೆ ದೂರುಗಳು ಕೇಳಿಬಂದಾಗ ಅವರನ್ನು ಸಂಪುಟದಿಂದ ತೆಗೆದು ಹಾಕಿದ್ದರು.
ಚುನಾವಣೆಯಲ್ಲಿ ಗೆದ್ದ ತಕ್ಷಣ ಗೋಪಾಲ್ ಕಂಡ ನಿರ್ದೋಷಿಯಲ್ಲ. ಚುನಾವಣೆಯಲ್ಲಿ ಗೆಲ್ಲಲು ಹಲವು ಅಂಶಗಳು ಇರುತ್ತವೆ. ಬಿಜೆಪಿ ತನ್ನ ಸಿದ್ಧಾಂತವನ್ನು ಮರೆಯಬಾರದು ಎಂದು ಮನವಿ ಮಾಡಿ ಉಮಾಭಾರತಿ ಟ್ವೀಟ್ ಮಾಡಿದ್ದರು..
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications