Breaking; ಪಾಕ್ ಕಡೆಯಿಂದ ಬಂದ ಡ್ರೋನ್ ಹೊಡೆದುರುಳಿಸಿದ ಸೇನೆ
ಚಂಡೀಗಢ, ಮೇ 10; ಪಾಕಿಸ್ತಾನದಿಂದ ಹೆರಾಯಿನ್ ಸರಬರಾಜು ಮಾಡುತ್ತಿದ್ದ ಡ್ರೋನ್ ಅನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಸುಮಾರು 10 ಕೆಜಿ ಮಾದಕ ವಸ್ತುವನ್ನು 9 ಪ್ಯಾಕ್ಗಳಲ್ಲಿ ಡ್ರೋನ್ ಮೂಲಕ ಸಾಗಣೆ ಮಾಡಲಾಗುತ್ತಿತ್ತು.
ಅಮೃತಸರದ ಬಿಎಸ್ಎಫ್ ಡಿಐಜಿ ಬಿ. ಸಿಂಗ್ ಈ ಕುರಿತು ಮಾಹಿತಿ ನೀಡಿದರು, "ಪಾಕಿಸ್ತಾನ ಕಡೆಯಿಂದ ರಾತ್ರಿ 11.15ರ ಸುಮಾರಿಗೆ ಡ್ರೋನ್ ಹಾರಿ ಬರುವುದನ್ನು ಕಣ್ಗಾವಲು ಪಡೆ ಸಿಬ್ಭಂದಿ ಗಮನಿಸಿದ್ದರು. ತಕ್ಷಣ 9 ಸುತ್ತು ಗುಂಡು ಹಾರಿಸಿದರು" ಎಂದರು.
BSF troops foiled another smuggling attempt through Pakistan drone. Vigilant BSF troops fired at the drone coming from Pakistan & brought it down. The drone was carrying 9 packets: BSF Punjab Frontier pic.twitter.com/a0qLmnw4fd
— ANI (@ANI) May 9, 2022
"ಅಮೃತಸರದಲ್ಲಿ ಅಂತರಾಷ್ಟ್ರೀಯ ಗಡಿಯ ಸಮೀಪ ನೆಲಕ್ಕೆ ಬಿದ್ದ ಡ್ರೋನ್ ಪರಿಶೀಲನೆ ನಡೆಸಿದಾಗ ಮಾದಕ ವಸ್ತು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಇದು ಹೆಕ್ಸಾಕಾಪ್ಟರ್ ಮಾದರಿಯ ಡ್ರೋನ್ ಆಗಿದೆ" ಎಂದು ಡಿಜಿಪಿ ಮಾಹಿತಿ ನೀಡಿದರು.

ಡ್ರೋನ್ ಮೂಲಕ ಪಾಕಿಸ್ತಾನ ಕಡೆಯಿಂದ ಮಾದಕ ವಸ್ತು ಸಾಗಾಟ ಮಾಡಲಾಗುತ್ತಿತ್ತು. 9 ಪ್ಯಾಕ್ಗಳ ಮೂಲಕ ಸುಮಾರು 10 ಕೆಜಿ ಹೆರಾಯಿನ್ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.
ಪಂಜಾಬ್ನಲ್ಲಿ ಭಾರತ-ಪಾಕಿಸ್ತಾನವು 553 ಕಿ. ಮೀ. ಗಡಿಯನ್ನು ಹೊಂದಿದೆ. ಪಾಕಿಸ್ತಾನ ಮೂಲಕ ಆಗಾಗ ಡ್ರೋನ್ ಮೂಲಕ ಮಾದಕ ವಸ್ತುಗಳ ಸಾಗಾಟ ನಡೆಯುತ್ತಿದೆ. ಇದೇ ಮಾದರಿ ಕೃತ್ಯವೂ ಸೋಮವಾರ ರಾತ್ರಿ ನಡೆದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications