ಚಂಡೀಗಢವನ್ನು ತಕ್ಷಣ ಪಂಜಾಬ್ಗೆ ವರ್ಗಾಯಿಸಲು ಸಿಎಂ ಮಾನ್ ನಿರ್ಣಯ ಮಂಡನೆ
ಚಂಡೀಗಢ, ಏಪ್ರಿಲ್ 1: ಚಂಡೀಗಢವನ್ನು ತಕ್ಷಣವೇ ಪಂಜಾಬ್ಗೆ ವರ್ಗಾವಣೆ ಮಾಡಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಪಂಜಾಬ್ ರಾಜ್ಯ ವಿಧಾನಸಭೆಯ ಒಂದು ದಿನದ ವಿಶೇಷ ಅಧಿವೇಶನದಲ್ಲಿ ನಿರ್ಣಯವನ್ನು ಮಂಡನೆ ಮಾಡಿದ್ದಾರೆ.
ಚಂಡೀಗಢವು ಪಂಜಾಬ್ ಮತ್ತು ಹರಿಯಾಣದ ಜಂಟಿ ರಾಜಧಾನಿಯಾಗಿದೆ. ಚಂಡೀಗಢದ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಸೇವಾ ನಿಯಮಗಳು ಅನ್ವಯ ಆಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಈ ನಿರ್ಣಯವನ್ನು ಮಂಡಿಸಿದ್ದಾರೆ.
ಸಂವಿಧಾನದಲ್ಲಿ ಮಂಡನೆ ಮಾಡಿರುವ ಫೆಡರಲಿಸಂನ ತತ್ವಗಳಿಗೆ ಗೌರವ ನೀಡಬೇಕು ಎಂದು ಇಂದು ಪಂಜಾಬ್ ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ನಿರ್ಣಯವನ್ನು ಮಂಡನೆ ಮಾಡುತ್ತಾ ಹೇಳಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಚಂಡೀಗಢದ ಆಡಳಿತದ ಸಮತೋಲನ ಮತ್ತು ಇತರ ಸಾಮಾನ್ಯ ಆಸ್ತಿಗಳಿಗೆ ಭಂಗ ತರುವಂತಹ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದಿದ್ದಾರೆ.

ಭಗವಂತ್ ಮಾನ್ ನಿರ್ಣಯದಲ್ಲಿ ಏನಿದೆ?
"ಪಂಜಾಬ್ ಮರುಸಂಘಟನೆ ಕಾಯಿದೆ, 1966ರ ಮೂಲಕ ಪಂಜಾಬ್ ಅನ್ನು ಮರುಸಂಘಟನೆ ಮಾಡಬೇಕು. ಇದರಲ್ಲಿ ಪಂಜಾಬ್ ರಾಜ್ಯವನ್ನು ಹರಿಯಾಣ ರಾಜ್ಯವಾಗಿ ಮರುಸಂಘಟಿಸಲಾಯಿತು. ಚಂಡೀಗಢದ ಕೇಂದ್ರಾಡಳಿತ ಪ್ರದೇಶ ಮತ್ತು ಪಂಜಾಬ್ನ ಕೆಲವು ಭಾಗಗಳನ್ನು ಅಂದಿನ ಕೇಂದ್ರಾಡಳಿತ ಪ್ರದೇಶವಾದ ಹಿಮಾಚಲ ಪ್ರದೇಶಕ್ಕೆ ನೀಡಲಾಯಿತು," ಎಂದು ನಿರ್ಣಯದಲ್ಲಿ ಉಲ್ಲೇಖ ಮಾಡಲಾಗಿದೆ.
ನಿರ್ಣಯವನ್ನು ಓದಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಸೌಹಾರ್ದತೆ ಕಾಪಾಡಲು ಮತ್ತು ಜನರ ಭಾವನೆಗಳನ್ನು ಗಣನೆಗೆ ತೆಗೆದುಕೊಂಡು ಚಂಡೀಗಢವನ್ನು ತಕ್ಷಣವೇ ಪಂಜಾಬ್ಗೆ ವರ್ಗಾಯಿಸಲು ಕೇಂದ್ರ ಸರ್ಕಾರಕ್ಕೆ ವಿಷಯ ಪ್ರಸ್ತಾಪಿಸಲು ಈ ಸದನವು ಮತ್ತೊಮ್ಮೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ ಎಂದರು.

ಪಂಜಾಬ್ ಮತ್ತು ಹರಿಯಾಣದ ಅಧಿಕಾರಿಗಳು ಯಾವಾಗಲೂ 60:40 ಅನುಪಾತದಲ್ಲಿ ನಿರ್ವಹಣೆ ಮಾಡಲಾಗುತ್ತದೆ. ಆದರೆ, ಇತ್ತೀಚೆಗೆ ಕೇಂದ್ರ ಸರ್ಕಾರ ಚಂಡೀಗಢಕ್ಕೆ ಹೊರಗಿನ ಅಧಿಕಾರಿಗಳನ್ನು ನಿಯೋಜನೆ ಮಾಡಿದೆ. ಚಂಡೀಗಢ ಆಡಳಿತದ ನೌಕರರಿಗೆ ಕೇಂದ್ರ ನಾಗರಿಕ ಸೇವಾ ನಿಯಮಗಳನ್ನು ಪರಿಚಯಿಸಿದೆ. ಇದು ಹಿಂದಿನ ತಿಳುವಳಿಕೆಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಈ ನಿರ್ಣಯದಲ್ಲಿ ಉಲ್ಲೇಖ ಮಾಡಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications