ನವಜೋತ್ ಸಿಧು ರಾಜೀನಾಮೆ ಅಂಗೀಕರಿಸಿಲ್ಲ ಕಾಂಗ್ರೆಸ್ ಹೈಕಮಾಂಡ್?
ಚಂಡೀಘರ್, ಸೆಪ್ಟೆಂಬರ್ 29: ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ನೀಡಿರುವ ರಾಜೀನಾಮೆಯನ್ನು ಹೈಕಮಾಂಡ್ ನಾಯಕರು ನಿರಾಕರಿಸಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆಯು ವರದಿ ಮಾಡಿದೆ.
ಎಎನ್ಐ ವರದಿ ಪ್ರಕಾರ, ನವಜೋತ್ ಸಿಂಗ್ ಸಿಧು ರಾಜೀನಾಮೆಯನ್ನು ತಿರಸ್ಕರಿಸಿರುವ ಹೈಕಮಾಂಡ್ ನಾಯಕರು ರಾಜ್ಯ ಮಟ್ಟದಲ್ಲಿಯೇ ಬಿಕ್ಕಟ್ಟು ಬಗೆಹರಿಸಿಕೊಳ್ಳುವಂತೆ ಸ್ಥಳೀಯ ನಾಯಕರಿಗೆ ಸೂಚನೆ ನೀಡಿದ್ದಾರೆ.
ಪಂಜಾಬ್ ಸಚಿವ ಸಂಪುಟದಲ್ಲಿನ ಬದಲಾವಣೆಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ನವಜೋತ್ ಸಿಂಗ್ ಸಿಧು, ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಕ್ಕೆ ಸಂಬಂಧಿಸಿದ ಪತ್ರವನ್ನು ಟ್ವೀಟ್ ಮಾಡಿದ್ದರು.

ಎಐಸಿಸಿ ವಕ್ತಾರೆ ಸೋನಿಯಾ ಗಾಂಧಿಯವರಿಗೆ ಪತ್ರ:
"ರಾಜಿ ಮಾಡಿಕೊಳ್ಳುವುದರ ಮೂಲಕ ಮನುಷ್ಯನ ಪಾತ್ರದ ಕುಸಿಯಲು ಆರಂಭವಾಗುತ್ತದೆ. ಪಂಜಾಬ್ನ ಭವಿಷ್ಯ ಮತ್ತು ಪಂಜಾಬ್ನ ಕಲ್ಯಾಣದ ವಿಷಯದಲ್ಲಿ ನಾನು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಆದ್ದರಿಂದ, ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ," ಎಂದು ಎಐಸಿಸಿ ವಕ್ತಾರೆ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ನವಜೋತ್ ಸಿಧು ಉಲ್ಲೇಖಿಸಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಸಿಧು ಪಂಜಾಬ್ ರಾಜ್ಯಕ್ಕೆ ಸೂಕ್ತವಲ್ಲ ಎಂದ ಕ್ಯಾಪ್ಟನ್:
ನವಜೋತ್ ಸಿಂಗ್ ಸಿಧು ಕಾಲಾವಧಿಯಲ್ಲೇ ಪಂಜಾಬ್ ಮುಖ್ಯಮಂತ್ರಿ ಸ್ಥಾನದಿಂದ ಅಮರೀಂದರ್ ಸಿಂಗ್ ಅವರನ್ನು ಬದಲಾಯಿಸಲಾಗಿತ್ತು. "ನಾನು ನಿಮಗೆ ಹೇಳಿದೆ ಅಲ್ಲವೇ, ಅವರು ಪಂಜಾಬ್ನಂತಹ ಗಡಿ ರಾಜ್ಯಕ್ಕೆ ಸರಿಹೊಂದುವ ಸ್ಥಿರ ವ್ಯಕ್ತಿ ಅಲ್ಲ" ಎಂದು ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಟ್ವೀಟ್ ಮಾಡಿದ್ದರು.
ಸಿಧು ರಾಜೀನಾಮೆ ಹಿಂದಿನ ಕಾರಣ?:
ಪಂಜಾಬ್ ನೂತನ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಮಾಡಿದ ಸಚಿವ ಸಂಪುಟದಲ್ಲಿನ ಬದಲಾವಣೆಗಳ ಬಗ್ಗೆ ಸಿಧು ತೀವ್ರ ಅಸಮಾಧಾನ ಹೊಂದಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ. ಕೆಲವು ನಿರ್ಧಾರಗಳ ವಿಷಯದಲ್ಲಿ ನವಜೋತ್ ಸಿಂಗ್ ಸಿಧು "ಸೂಪರ್ ಸಿಎಂ" ರೀತಿಯಲ್ಲಿ ವರ್ತಿಸುತ್ತಿದ್ದರು, ಆದರೆ ಇತ್ತೀಚಿಗೆ ತೆಗೆದುಕೊಂಡ ಸರ್ಕಾರ ನೇಮಕಾತಿ ಮತ್ತು ಸಂಪುಟ ರಚನೆಯಲ್ಲಿ ಸಿಧುರನ್ನು ತೀವ್ರವಾಗಿ ನಿರ್ಲಕ್ಷಿಸಲಾಗಿತ್ತು ಎಂದು ವರದಿಯಾಗಿದೆ. ಅದರಲ್ಲೂ "ಸಕ್ರಿಲೇಜ್" ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ನೀಡಲಾದ ಪ್ರಮುಖ ಹುದ್ದೆಗಳ ಬಗ್ಗೆ ಸಿಧು ಕೋಪಗೊಂಡಿದ್ದರು ಎಂದು ಗೊತ್ತಾಗಿದೆ.
ಸಿಧು ಬೆಂಬಲಿಗರಿಂದ ರಾಜೀನಾಮೆ ಪರ್ವ:
ಪಂಜಾಬ್ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎರಡೇ ದಿನಗಳಲ್ಲಿ ಮಲೆರ್ಕೋಟ್ಲಾ ಶಾಸಕಿ ರಜಿಯಾ ಸುಲ್ತಾನಾ ಮಂಗಳವಾರ "ನವಜೋತ್ ಸಿಂಗ್ ಸಿಧುಗೆ ಬೆಂಬಲವಾಗಿ" ರಾಜೀನಾಮೆ ನೀಡಿದ್ದಾರೆ. "ಸಿದ್ದು ಸಾಹಬ್ ತತ್ವಗಳ ವ್ಯಕ್ತಿ. ಅವರು ಪಂಜಾಬ್ ಮತ್ತು ಪಂಜಾಬಿಯತ್ ಗಾಗಿ ಹೋರಾಡುತ್ತಿದ್ದಾರೆ" ಎಂದು ಸುಲ್ತಾನಾ ಹೇಳಿದ್ದಾರೆ. ಪಂಜಾಬ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯೋಗಿಂದರ್ ಧಿಂಗ್ರಾ ಮತ್ತು ಖಜಾಂಚಿ ಗುಲ್ಜಾರ್ ಇಂದರ್ ಚಹಲ್ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications