ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಚನ್ನಿ ಆಯ್ಕೆ ಕಾಂಗ್ರೆಸ್ನ ತಪ್ಪು: ಅಮರಿಂದರ್
ಚಂಡೀಗಢ, ಫೆಬ್ರವರಿ 9: ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿರುವುದು ತಪ್ಪು ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.
ಪಂಜಾಬ್ ಹಿಂದೆಂದೂ ಜಾತಿ ಅಥವಾ ಧರ್ಮದ ಆಧಾರದ ಮೇಲೆ ವಿಭಜನೆಯಾಗಿಲ್ಲ, ಮುಖ್ಯಮಂತ್ರಿ ಸ್ಥಾನಕ್ಕೆ ಚನ್ನಿ ಯೋಗ್ಯರಲ್ಲ, ರಾಜ್ಯದ ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದರು.
ಚರಣ್ಜಿತ್ ಸಿಂಗ್ ಚನ್ನಿಯನ್ನು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ, ಆದರೆ ಜಾತಿ ಆಧಾರದಲ್ಲಿ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಬಾರದು.

ಸಿಎಂ ಆಗಿದ್ದ 111 ದಿನಗಳಲ್ಲಿ ಎಲ್ಲವನ್ನೂ ಮಾಡಿದ್ದೇನೆ ಎಂದು ಚನ್ನಿ ಹೇಳಿಕೊಂಡಿದ್ದಾರೆ, ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ, ಪ್ರತಿಯೊಂದು ಯೋಜನೆಯನ್ನು ಪ್ರಾರಂಭಿಸಲು ತಿಂಗಳುಗಳು ಬೇಕಾಗುತ್ತದೆ, ಈ ಕುರಿತು ಜನರು ಎಚ್ಚರವಾಗಿರಬೇಕು, ಚನ್ನಿ ಹೇಳಿರುವ ಎಲ್ಲಾ ಯೋಜನೆಗಳು ನಮ್ಮ ಸರ್ಕಾರದಿಂದ ಆರಂಭವಾಗಿತ್ತು ಎಂದರು.
ಪಂಜಾಬ್ನ ಮುಖ್ಯಮಂತ್ರಿ ಅಭ್ಯರ್ಥಿಯ ನಿರ್ಧಾರ ನನ್ನ ನಿರ್ಧಾರವಲ್ಲ ಎಂದು ಹೇಳಿದ ರಾಹುಲ್. "ನಾನು ಅದರ ಬಗ್ಗೆ ನಿರ್ಧರಿಸಿಲ್ಲ, ನಾನು ಇದನ್ನು ಪಂಜಾಬ್ನ ಜನರು, ಯುವಕರು, ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಕೇಳಿದೆ.
ನನಗೆ ಅಭಿಪ್ರಾಯವಿರಬಹುದು ಆದರೆ ನನ್ನ ಅಭಿಪ್ರಾಯಕ್ಕಿಂತ ನಿಮ್ಮ ಅಭಿಪ್ರಾಯ ಮುಖ್ಯ. ಬಡವರನ್ನು ಅರ್ಥಮಾಡಿಕೊಳ್ಳಬಲ್ಲ ವ್ಯಕ್ತಿಯೊಬ್ಬರು ನಮಗೆ ಬೇಕು ಎಂದು ಅವರು ಹೇಳಿದ್ದರು ಎಂದು ಚನ್ನಿ ಹೆಸರು ಘೋಷಣೆ ಮಾಡಿ ಭಾಷಣ ಮಾಡಿದ ರಾಹುಲ್ ಹೇಳಿದ್ದಾರೆ.
ಟೆಲಿಪೋಲ್ ಮತ್ತು ನಂತರದ ಘೋಷಣೆಯು ಮುಖ್ಯಮಂತ್ರಿ ಮತ್ತು ರಾಜ್ಯ ಪಕ್ಷದ ಮುಖ್ಯಸ್ಥ ನವಜೋತ್ ಸಿಧು ನಡುವಿನ ಜಗಳದ ಫಲಿತಾಂಶವಾಗಿದೆ. ಅವರು 2017 ರಲ್ಲಿ ರಾಜ್ಯ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯಿಂದ ಕಾಂಗ್ರೆಸ್ಗೆ ಸೇರಿದಾಗಿನಿಂದ ತಮ್ಮ ಮಹತ್ವಾಕಾಂಕ್ಷೆಗಳನ್ನು ಸ್ಪಷ್ಟಪಡಿಸಿದ್ದಾರೆ.
ಜನವರಿ 27 ರಂದು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಸಾಮಾನ್ಯವಾಗಿ, ನಾವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ ಆದರೆ ಕಾಂಗ್ರೆಸ್ ಕಾರ್ಯಕರ್ತರು ಬಯಸಿದರೆ, ನಾವು ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ. ನಾವು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಮಾಲೋಚಿಸುತ್ತೇವೆ, ಅವರು ನಿರ್ಧರಿಸುತ್ತಾರೆ ಎಂದು ಹೇಳಿದ್ದರು.
ಇದಾದ ನಂತರವೂ ಸಿಧು ಚನ್ನಿ ಮೇಲೆ ತಮ್ಮ ದಾಳಿಯನ್ನು ಮುಂದುವರೆಸಿದರು. ಶುಕ್ರವಾರ, ಮುಖ್ಯಮಂತ್ರಿಯ ಸಂಬಂಧಿಕರ ಮೇಲಿನ ದಾಳಿಗಳನ್ನು ಉಲ್ಲೇಖಿಸುವಾಗ, ಪಕ್ಷವು "ಪ್ರಾಮಾಣಿಕ ಮತ್ತು ಕ್ಲೀನ್ ಟ್ರ್ಯಾಕ್ ರೆಕಾರ್ಡ್" ಅನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು. ಯಾವುದೇ ಮುಖ್ಯಮಂತ್ರಿ ಆಯ್ಕೆಗೆ ಕನಿಷ್ಠ 60 ಶಾಸಕರ ಬೆಂಬಲ ಇರಬೇಕು ಎಂದು ಅವರು ಹೇಳಿದರು.
ಕಳೆದ ವರ್ಷ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಸಿಧು ನೇತೃತ್ವದ ಬಂಡಾಯ ಶಾಸಕರ ಗುಂಪಿನೊಂದಿಗೆ ಒಂದು ವರ್ಷದ ಜಗಳದ ನಂತರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಸಿಧು ಅವರು ತಮ್ಮ ಅಪೇಕ್ಷಿತ ಗುರಿಯನ್ನು ತಲುಪಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications