ಕಾಂಗ್ರೆಸ್ ತನ್ನ ಹಾದಿ ತೊರೆದಿದೆ ಎಂದ ಹರಿಯಾಣ ಮಾಜಿ ಸಿಎಂ ಭೂಪಿಂದರ್ ಹೂಡಾ
ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನವನ್ನು ನೀಡುವ ಪರಿಚ್ಛೇದ 370 ರದ್ದು ಮಾಡಿದ ಕೇಂದ್ರ ಸರಕಾರದ ತೀರ್ಮಾನವನ್ನು ಹರಿಯಾಣದ ಮಾಜಿ ಮುಖ್ಯಮಂತ್ರಿ- ಕಾಂಗ್ರೆಸ್ ನ ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಬೆಂಬಲಿಸಿದ್ದು, ಪಕ್ಷದ ನಿಲವಿಗೆ ವಿರುದ್ಧವಾದ ಅವರ ಮಾತುಗಳು ಇನ್ನೇನು ಚುನಾವಣೆ ಎದುರು ನೋಡುತ್ತಿರುವ ಹರಿಯಾಣದಲ್ಲಿ ಭಾರೀ ಸಂಚಲನ ಉಂಟು ಮಾಡಿದೆ.
ರೋಹ್ಟಕ್ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಹಾದಿಯಿಂದ ಕಳೆದು ಹೋಗಿದೆ. ಸರಕಾರದ ನಿರ್ಧಾರ ಸರಿಯಿದ್ದಾಗ ನಾನು ಬೆಂಬಲಿಸಿದ್ದೇನೆ. ಪರಿಚ್ಛೇದ 370 ರದ್ದು ಮಾಡಿದ ಕ್ರಮವನ್ನು ನನ್ನ ಸಹವರ್ತಿಗಳು ಹಲವರು ವಿರೋಧಿಸಿದ್ದಾರೆ. ನನ್ನ ಪಕ್ಷ ತನ್ನ ಹಾದಿ ತಪ್ಪಿದೆ. ಇದು ಹಿಂದಿನ ಕಾಂಗ್ರೆಸ್ ಅಲ್ಲ. ದೇಶಾಭಿಮಾನ, ಆತ್ಮ ಗೌರವದ ವಿಚಾರದಲ್ಲಿ ನಾನು ಯಾರ ಜತೆಗೂ ರಾಜೀ ಆಗಲ್ಲ ಎಂದಿದ್ದಾರೆ.
ಆಕ್ಟೋಬರ್ ನಲ್ಲಿ ಹರಿಯಾಣ ವಿಧಾನಸಭಾ ಚುನಾವಣೆ ನಡೆಯಬೇಕಿದೆ. ಇದೀಗ ಭಾನುವಾರದ ಸಭೆಯಲ್ಲಿ ಹೀಗೆ ಮಾತನಾಡುವ ಮೂಲಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ಆಗಬೇಕು ಎಂಬುದನ್ನು ಹೂಡಾ ಅವರು ಹೈ ಕಮಾಂಡ್ ಗಮನಕ್ಕೆ ತಂದಿದ್ದಾರೆ. ಇದರ ಜತೆಗೆ ಹೂಡಾ ಅವರೇ ಕಾಂಗ್ರೆಸ್ ತೊರೆಯಬಹುದು ಎಂಬ ಮಾತು ಕೂಡ ಕೇಳಿಬರುತ್ತಿದೆ.

ನಾನು ದೇಶಭಕ್ತರ ಕುಟುಂಬದಲ್ಲಿ ಜನಿಸಿದವನು. ರಾಷ್ಟ್ರೀಯ ಹಿತಾಸಕ್ತಿ ವಿಚಾರದಲ್ಲಿ ಎಂದೂ ರಾಜೀ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ಭೂಪಿಂದರ್ ಹೂಡಾ ಅವರು ಜಾಟ್ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ಪಕ್ಷದ ಅತಿ ಮುಖ್ಯ ನಾಯಕ. ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ಅಶೋಕ್ ತನ್ವರ್ ಜತೆಗೆ ಹಲವು ವಿಚಾರದಲ್ಲಿ ಹೂಡಾಗೆ ಅಸಮಾಧಾನ ಇದೆ. ತನ್ವರ್ ಅವರು ದಲಿತ ನಾಯಕರಾಗಿದ್ದು, ರಾಹುಲ್ ಗಾಂಧಿಗೆ ಪರಮಾಪ್ತರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications