ಏನಕ್ಕೂ ಸಾಲದ ಎಂಎಸ್ಪಿ: ಕೇಂದ್ರದ ವಿರುದ್ಧ ರೈತರ ಆಕ್ರೋಶ
ಲೂಧಿಯಾನ, ಸೆಪ್ಟೆಂಬರ್ 23: ಕೇಂದ್ರ ಸರ್ಕಾರದ ಕೃಷಿ ಸಂಬಂಧಿ ಮಸೂದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಮತ್ತಷ್ಟು ತೀವ್ರವಾಗುವ ಲಕ್ಷಣಗಳು ಕಂಡುಬಂದಿವೆ. ಮಸೂದೆಯ ವಿರುದ್ಧ ರೈತರ ಅಸಮಾಧಾನ ತಣಿಸಲು ಕೇಂದ್ರ ಸರ್ಕಾರ ಘೋಷಿಸಿದ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ತೀರಾ ಅತ್ಯಲ್ಪವಾಗಿದೆ ಎಂದು ಕಿಡಿಕಾರಿದ್ದಾರೆ.
ಗೋಧಿ ಹಾಗೂ ರಬಿ ಬೆಳೆಗಳಿಗೆ ಪ್ರತಿ ಕ್ವಿಂಟಲ್ ಮೇಲೆ 50 ರೂ. ಹೆಚ್ಚಿನ ಎಂಎಸ್ಪಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಈ ಬೆಂಬಲ ಬೆಲೆ ರೈತರ ಮೇಲಿನ ಅತ್ಯಂತ ಕ್ರೂರ ಹಾಸ್ಯ ಎಂದು ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು) ಟೀಕಿಸಿದೆ.
ಸರ್ಕಾರದಿಂದ ಆರ್ಥಿಕ ಸಹಾಯದ ಘೋಷಣೆಯನ್ನು ನಿರೀಕ್ಷಿಸಿರುವ ರೈತರು, ಕೃಷಿ ವಲಯವು ಅಧಿಕ ವೆಚ್ಚ ಹಾಗೂ ಇತರೆ ಸಮಸ್ಯೆಗಳಿಂದ ಬಳಲುತ್ತಿರುವಾಗ ಈ ಅತ್ಯಲ್ಪ ನೆರವು ಯಾವುದಕ್ಕೂ ಸಾಲುವುದಿಲ್ಲ. ಅದನ್ನು ನೀಡುವುದರ ಬದಲು ಸುಮ್ಮನಿರುವುದೇ ಒಳಿತು ಎಂದಿದ್ದಾರೆ. ಉತ್ಪಾದನೆಯ ವೆಚ್ಚಕ್ಕಿಂತ ಶೇ 50ರಷ್ಟು ಹೆಚ್ಚು ಬೆಂಬಲ ಬೆಲೆ ಹೆಚ್ಚಳ ನೀಡಬೇಕೆಂಬ ಎಂಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೆ ತರುವುದರಲ್ಲಿ ಎಲ್ಲ ಸರ್ಕಾರಗಳೂ ತಮ್ಮನ್ನು ವಂಚಿಸಿವೆ. ಆಯೋಗದ ವರದಿಯಂತೆ ಎಂಎಸ್ಪಿ ನಿಗದಿಮಾಡುವುದಾಗಿ ಚುನಾವಣೆಯಲ್ಲಿ ಭರವಸೆ ನೀಡಿದ್ದ ಬಿಜೆಪಿ ಅದನ್ನು ನೆನಪಿಸಿಕೊಳ್ಳುವಂತೆ ಬಿಕೆಯುದ ಪಂಜಾಬ್ ರಾಜ್ಯ ಕಾರ್ಯದರ್ಶಿ ಸಿಂಗಾರಾ ಸಿಂಗ್ ಮನ್ ಹೇಳಿದ್ದಾರೆ.
2022ರ ವೇಳೆಗೆ ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಸರ್ಕಾರ ಹೇಳಿತ್ತು. ಎಂಎಸ್ಪಿ ಶೇ 20ರಷ್ಟೂ ಏರಿಕೆಯಾಗದೆ ಇದನ್ನು ತಲುಪುವುದು ಹೇಗೆ ಸಾಧ್ಯ? ಸರ್ಕಾರವು ಮತ್ತೆ ತನ್ನ ರೈತ ವಿರೋಧಿ ಮುಖವನ್ನು ತೋರಿಸಿದೆ. ಕ್ವಿಂಟಲ್ ಹತ್ತಿಗೆ 5,710 ರೂ ಎಂದು ಸರ್ಕಾರ ನಿಗದಿ ಮಾಡಿದೆ. ಆದರೆ ಖಾಸಗಿ ಖರೀದಿದಾರರಿಗೆ 4,500ಕ್ಕೆ ತಮ್ಮ ಬೆಳೆಯನ್ನು ಮಾರಾಟ ಮಾಡುವ ಒತ್ತಡದ ಸ್ಥಿತಿಗೆ ರೈತರನ್ನು ದೂಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೈತರು ಕೃಷಿ ಮಸೂದೆಗಳ ವಿರುದ್ಧ ಕೋಪಗೊಂಡಿರುವಾಗ ಗೋಧಿಯ ಮೇಲಿನ 50 ರೂ ಎಂಎಸ್ಪಿ, ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತರ ಗಾಯಕ್ಕೆ ಉಪ್ಪು ಸವರಿದಂತೆ ಆಗಿದೆ ಎಂದು ಬಿಜೆಯು ಅಧ್ಯಕ್ಷ ಹರ್ಮೀತ್ ಸಿಂಗ್ ಕಾಡಿಯಾನ್ ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications