ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹರಿಯಾಣ ಸ್ಥಳೀಯ ಸಂಸ್ಥೆ ಚುನಾವಣೆ; ಬಿಜೆಪಿ ಮೇಲೆ ಪರಿಣಾಮ ಬೀರಿತೇ ರೈತರ ಪ್ರತಿಭಟನೆ?

|
Google Oneindia Kannada News

ಚಂಡೀಗಢ, ಡಿಸೆಂಬರ್ 30: ಹರಿಯಾಣ ನಗರ ಸಭೆ ಚುನಾವಣೆಯ ಮತ ಎಣಿಕೆ ಬುಧವಾರ ನಡೆಯುತ್ತಿದ್ದು, ಬಿಜೆಪಿಗೆ ಈ ಚುನಾವಣೆಯಲ್ಲಿ ಹಿನ್ನಡೆ ಸಾಧ್ಯತೆ ಇರುವುದಾಗಿ ತಿಳಿದುಬಂದಿದೆ.

ಅಂಬಾಲದಲ್ಲಿ ಜನ್ ಚೇತನಾ ಪಕ್ಷ ಮುಂಚೂಣಿಯಲ್ಲಿದ್ದು, ಸೋನಿಪತ್ ನಲ್ಲಿ ಕಾಂಗ್ರೆಸ್ ಮುಂದಿದೆ. ಪಂಚ್ ಕುಲದಲ್ಲಿ ಮೇಯರ್ ಸ್ಥಾನದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿರುವುದಾಗಿ ತಿಳಿದುಬಂದಿದೆ. ಚುನಾವಣೆಯಲ್ಲಿ ಬಿಜೆಪಿ- ಜೆಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಜಟಾಪಟಿ ಇದ್ದು, ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುವ ಸಂದರ್ಭವೇ ಚುನಾವಣೆ ಬಂದಿದ್ದು ತೊಡಕಾಗಿದೆ ಎನ್ನಲಾಗಿದೆ.

ಹರಿಯಾಣದಲ್ಲಿ 13 ರೈತರ ಮೇಲೆ ಪ್ರಕರಣ ದಾಖಲುಹರಿಯಾಣದಲ್ಲಿ 13 ರೈತರ ಮೇಲೆ ಪ್ರಕರಣ ದಾಖಲು

ರೇವಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದು, ಸಂಪ್ಲಾ, ಉಕ್ಲಾನಾ, ಧಾರುಹೆರಾದಲ್ಲಿ ಬಿಜೆಪಿ ಸ್ಥಾನ ಕಳೆದುಕೊಂಡಿದೆ. ಮೂರು ಪುರಸಭೆ ನಿಗಮ ಸ್ಥಾನಗಳಲ್ಲಿ ಸ್ವತಂತ್ರ್ಯ ಅಭ್ಯರ್ಥಿಗಳು ಗೆದ್ದಿದ್ದಾರೆ.

Farmers Protest Impacts On BJP In Haryana Local Body Polls

ಅಂಬಾಲ, ಪಂಚಕುಲ ಮತ್ತು ಸೋನಿಪತ್ ಪುರಸಭೆಯ ಎಲ್ಲಾ ವಾರ್ಡ್ ಗಳ ಮೇಯರ್ ಹಾಗೂ ಸದಸ್ಯರ ನೇಮಕಕ್ಕೆ, ರೇವಾರಿ ಪುರಸಭೆ ಅಧ್ಯಕ್ಷರು ಮತ್ತು ಸದಸ್ಯರ ಸ್ಥಾನಕ್ಕೆ, ರೋಹ್ತಕ್, ಧಾರುಹೆರಾ ಮತ್ತು ಉಕ್ಲಾನಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆದಿತ್ತು. ಒಟ್ಟು 1.8 ಲಕ್ಷ ಮತದಾರರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. 2013ರಲ್ಲಿ ನಡೆದ ಕೊನೆಯ ನಗರಸಭೆ ಚುನಾವಣೆಗೆ ಹೋಲಿಸಿದರೆ ಮತದಾನದಲ್ಲಿ ಇಳಿಕೆಯಾಗಿದ್ದು, ಈ ಬಾರಿ ಶೇ 64.01ರಷ್ಟು ಮತದಾನ ದಾಖಲಾಗಿದೆ.

English summary
There is a direct fight between the ruling BJP-JJP combine and the Congress in Haryana local body polls. The local elections come at a time when the farmers are protesting against the farm laws,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X