ಮೊದಲ ಸುತ್ತಿನ ಜನಗಣತಿ ಎಲ್ಲಿಂದ ಪ್ರಾರಂಭ: ಯಾವಾಗ?
ಚಂಡೀಗಢ, ಫೆಬ್ರವರಿ 15: ಮೊದಲನೇ ಹಂತದ ಜನಗಣತಿ ಹರ್ಯಾಣದಿಂದ ಪ್ರಾರಂಭವಾಗಲಿದೆ.
ಜನಗಣತಿ 2021 ಹರ್ಯಾಣದಿಂದ ಆರಂಭವಾಗಲಿದ್ದು, ಮೇ 1ರಿಂದ ಜೂನ್ 15ರವರೆಗೆ ನಡೆಯಲಿದೆ. ಒಟ್ಟು 58 ಸಾವಿರ ಮೇಲ್ವಿಚಾರಕರಿರಲಿದ್ದಾರೆ.
ಜನಗಣತಿ ಅಧಿಕಾರಿಗಳು ಶುಕ್ರವಾರ ನಡೆದ ರಾಜ್ಯ ಮಟ್ಟದ ಸಮಾವೇಶವೊಂದರಲ್ಲಿ ಈ ವಿಷಯ ತಿಳಿಸಿದ್ದಾರೆ.ಶುಕ್ರವಾರ ಹರಿಯಾಣದಲ್ಲಿ ಎನ್ಪಿಆರ್ ಅಪ್ಡೇಷನ್ ಕಾರ್ಯಕ್ರಮದಲ್ಲಿ ಹರ್ಯಾಣ ಮುಖ್ಯ ಕಾರ್ಯದರ್ಶಿ ಕೇಶ್ನಿ ಆನಂದ್ ಅರೋರಾ ನೇತೃತ್ವದಲ್ಲಿ ಸಭೆ ನಡೆಯಿತು. ಜನಗಣತಿ ಆಯುಕ್ತ ವಿವೇಕ್ ಜೋಶಿ ಹಾಜರಿದ್ದರು.

ಎಲ್ಲಾ ಪ್ರಕ್ರಿಯೆಗಳು ಅಣತಿಯೆಂತೇ ನಡೆಯಬೇಕು. ಮೇ 1ರಿಂದ ಜೂನ್ 15ರೊಳಗಾಗಿ ಹರಿಯಾಣದಲ್ಲಿ ಜನಗಣತಿ ಮುಗಿಯಬೇಕು ಎಂದು ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.
ಜನಗಣತಿ ಡಾಟಾವನ್ನು ವಿಶೇಷವಾಗಿ ರೂಪಿಸಿರುವ ಮೊಬೈಲ್ ಅಪ್ಲಿಕೇಷನ್ ಮೂಲಕ ಪಡೆಯಬಹುದಾಗಿದೆ.ಕಟ್ಟಡ ಸಂಖ್ಯೆ, ಸೆನ್ಸಸ್ ಹೌಸ್ ಸಂಖ್ಯೆ, ನಿವಾಸಿಗಳ ಸಂಖ್ಯೆ, ಕುಡಿಯುವ ನೀರಿನ ಮೂಲ, ಬೆಳಕಿನ ಮೂಲ, ಶೌಚಾಲಾಯ ವ್ಯವಸ್ಥೆ ಹಾಗೂ ಮಾದರಿ, ಟಿವಿ, ಲ್ಯಾಪ್ಟಾಪ್, ಇಂಟರ್ನೆಟ್, ಮೋಟಾರ್ ಸೈಕಲ್, ಕಾರು, ಮೊಬೈಲ್ ಸಂಖ್ಯೆ ಸೇರಿದಂತೆ ಒಟ್ಟು 31 ವಿಚಾರಗಳ ಬಗ್ಗೆ ಪ್ರತಿ ಮನೆಯಿಂದ ಮಾಹಿತಿ ಸಂಗ್ರಹಿಸಲಾಗುವುದು.
ಇದೇ ಮೊದಲ ಬಾರಿಗೆ ಜನಗಣತಿಯನ್ನು ಡಿಜಿಟಲ್ ಮಾದರಿಯಲ್ಲಿ ನೋಂದಣಿ ಮಾಡಲಾಗುತ್ತಿದೆ. ಎರಡನೇ ಹಂತದ ಜನಗಣತಿ ಫೆಬ್ರವರಿ 9 ರಿಂದ ಫೆಬ್ರವರಿ 28ರವರೆಗೆ ನಡೆಯಲಿದೆ.
ಜನಗಣತಿಯು 1948ರ ಜನಗಣತಿ ಕಾಯ್ದೆಯಿಂದ ಮಾನ್ಯತೆ ಪಡೆದು ನಡೆಯುತ್ತದೆ. ಎನ್ಪಿಆರ್ಅನ್ನು 1955ರ ಪೌರತ್ವ ಕಾಯ್ದೆಯಡಿ ರೂಪಿಸಲಾದ ನಿಯಮಗಳ ಆಧಾರದಲ್ಲಿ ಸಿದ್ಧಪಡಿಸಲಾಗಿದೆ. 1955ರ ಪೌರತ್ವ ಕಾಯ್ದೆಗೆ 2004ರಲ್ಲಿ ಸೆಕ್ಷನ್ 14A ಅನ್ನು ಅಡಕ ಮಾಡಲಾಗಿತ್ತು. ಇದರ ಮೂಲಕ ಭಾರತದ ಪ್ರತಿ ನಾಗರಿಕನ ಕಡ್ಡಾಯ ನೋಂದಣಿ ಮಾಡಿಕೊಳ್ಳುವುದು ಹಾಗೂ ಅವರಿಗೆ ರಾಷ್ಟ್ರೀಯ ಗುರುತಿನ ಚೀಟಿ ನೀಡುವುದಕ್ಕೆ ಚಾಲನೆ ನೀಡಲಾಗಿತ್ತು.
ಈ ಪಟ್ಟಿಯನ್ನು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ. ಸಿಎಎ-ಎನ್ಆರ್ಸಿ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಹೆಚ್ಚುತ್ತಿರುವ ಬೆನ್ನಿಗೆ ಈ ಅಧಿಸೂಚನೆ ಹೊರಬಿದ್ದಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications