ಕಳ್ಳನ ಹಿಡಿಯಲು ಬಾಲಕಿಯ ಸಾಹಸ, ಕೈ ಕೊಯ್ದರೂ ಬಿಡಲಿಲ್ಲ ಕೊರಳ್ಪಟ್ಟಿ
ಚಂಡೀಗಢ, ಸೆಪ್ಟೆಂಬರ್ 02: ಕದ್ದೋಡುತ್ತಿದ್ದ ಕಳ್ಳನಿಂದ ಮೊಬೈಲ್ ಪಡೆಯಲು ಹೋಗಿ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಂಜಾಬ್ನಲ್ಲಿ ನಡೆದಿದೆ.
ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಾಲಕಿಯ ಮೊಬೈಲ್ನ್ನು ಕದ್ದು ಬೈಕ್ನಲ್ಲಿ ಹೋಗಲು ಯತ್ನಿಸಿದ್ದಾರೆ. ಆದರೆ ಆಕೆ ಅವರನ್ನು ಅಡ್ಡಗಟ್ಟಿ ಬೈಕ್ನಲ್ಲಿ ಕುಳಿತಿದ್ದ ಹಿಂಬದಿ ಸವಾರನನ್ನು ಎಳೆದು ನೆಲಕ್ಕೆ ಹಾಕಿದ್ದಾಳೆ.
ಬಳಿಕ ಇಬ್ಬರ ಮಧ್ಯೆ ಚಕಮಕಿ ನಡೆದಿದೆ, ಕಳ್ಳ ತನ್ನ ಬಳಿ ಇದ್ದ ಹರಿತವಾದ ಆಯುಧದಿಂದ ಆಕೆಯ ಕೈ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆ ತೀವ್ರವಾಗಿ ಗಾಯಗೊಂಡಿದ್ದರೂ ಕೂಡ ಆತನನ್ನು ಎಳೆದು ನೆಲಕ್ಕೆ ಬೀಳಿಸಿದ್ದಷ್ಟೇ ಅಲ್ಲದೆ ಪೊಲೀಸರಿಗೆ ಹಿಡಿದುಕೊಡುವಲ್ಲಿ ಯಶಸ್ವಿಯಾಗಿದ್ದಾಳೆ.

ಅಂತ್ಯದಲ್ಲಿ ಅಲ್ಲಿ ಅಕ್ಕಪಕ್ಕ ಓಡಾಡುತ್ತಿದ್ದ ಜನರು ಆಕೆಯ ಸಹಾಯಕ್ಕೆ ಬಂದಿದ್ದಾರೆ, ಆತನನ್ನು ಹಿಡಿದಿದ್ದಾರೆ.ಕುಸುಮ್ ಕುಮಾರಿ ಟ್ಯೂಷನ್ನಿಂದ ಹಿಂದಿರುಗುವಾಗ ಜಲಂಧರ್-ಕುಪರ್ತಲಾ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಬಂಧಿತನನ್ನು ಅವಿನಾಶ್ ಕುಮಾರ್ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಸೆಕ್ಷನ್ 389 ಬಿ, 307(ಕೊಲೆಯತ್ನ) ಪ್ರಕರಣಗಳಗಳಲ್ಲಿ ದೂರು ದಾಖಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications