ಕೃಷಿ ಮಾಡಬೇಕು, ಪೆರೋಲ್ ನೀಡಿ ಎಂದ ಅತ್ಯಾಚಾರ ಅಪರಾಧಿ ದೇವಮಾನವ!
ರೋಹ್ಟಕ್ (ಹರಿಯಾಣ), ಜೂನ್ 21: ಅತ್ಯಾಚಾರ ಮತ್ತು ಪತ್ರಕರ್ತರೊಬ್ಬರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್, ತನ್ನ ಜಮೀನಿನಲ್ಲಿ ಕೃಷಿ ಮಾಡಲು ಪೆರೋಲ್ ನೀಡುವಂತೆ ಕೋರಿದ್ದಾನೆ.
ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್, ಜೈಲಿನಲ್ಲಿ ಮಾಲಿಯಾಗಿ ಕೆಲಸ ಮಾಡುತ್ತಿದ್ದಾನೆ. ಸಿರ್ಸಾದಲ್ಲಿರುವ ತನ್ನ ಭೂಮಿ ಪಾಳು ಬಿದ್ದಿದ್ದು, ಅದರಲ್ಲಿ ಕೃಷಿ ಮಾಡಲು ಪೆರೋಲ್ ನೀಡುವಂತೆ ಸುನಾರಿಯಾ ಜೈಲಿನ ಅಧಿಕಾರಿಗಳಿಗೆ ಕೋರಿದ್ದಾನೆ.
ಆತನ ಮನವಿಯನ್ನು ಜೈಲು ಅಧಿಕಾರಿಗಳು ಜಿಲ್ಲಾಡಳಿತಕ್ಕೆ ರವಾನಿಸಿದ್ದು, ಅದನ್ನು ಹರಿಯಾಣ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2002ರ ಅಕ್ಟೋಬರ್ನಲ್ಲಿ ಪತ್ರಕರ್ತ ರಾಮಚಂದರ್ ಛತ್ರಪತಿ ಅವರ ಕೊಲೆ ಪ್ರಕರಣದಲ್ಲಿ ಪಂಚಕುಳದ ವಿಶೇಷ ಸಿಬಿಐ ಕೋರ್ಟ್ ಜನವರಿ 17ರಂದು ರಾಮ್ ರಹೀಮ್ ಸಿಂಗ್ ಮತ್ತು ಇತರೆ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ರಾಮ್ ರಹೀಮ್ ತನ್ನ ಡೇರಾ ಸಚ್ಛಾ ಸೌಧದ ಕೇಂದ್ರದಲ್ಲಿ ಮಹಿಳೆಯರನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದಾನೆ ಎಂದು ಆರೋಪಿಸಿ ಬರೆಯಲಾಗಿದ್ದ ಅನಾಮಿಕ ಪತ್ರವನ್ನು ರಾಮಚಂದರ್ ಅವರ ಪತ್ರಿಕ ಪ್ರಕಟಿಸಿತ್ತು. ಈ ಕಾರಣಕ್ಕಾಗಿ ಸಿರ್ಸಾದಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು.
ತನ್ನ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಕ್ಕೆ 2017ರ ಆಗಸ್ಟ್ನಲ್ಲಿ ರಾಮ್ ರಹೀಮ್ಗೆ 20 ವರ್ಷ ಜೈಲುಶಿಕ್ಷೆ ವಿಧಿಸಲಾಗಿತ್ತು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications