ಬೇಸಾಯ ಮಾಡಲು ಪೆರೋಲ್ ಕೇಳಿದ ರಾಮ್ ರಹೀಂಗೆ ನಿರಾಶೆ
ಚಂಡೀಗಢ, ಜೂನ್ 25: ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸಿಯಾಗಿರುವ ದೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ ಮೀತ್ ರಾಮ್ ರಹೀಂ ಸಿಂಗ್ ಅವರಿಗೆ ಹಿನ್ನಡೆಯಾಗಿದೆ. ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಹೊರ ಹೋಗಲು ಪೆರೋಲ್ ಕೇಳಿದ್ದ ರಾಮ್ ರಹೀಂ ಅವರಿಗೆ ಪೆರೋಲ್ ಸಿಗುವುದು ಕಷ್ಟ ಎಂದು ತಿಳಿದು ಬಂದಿದೆ.
ನ್ಯೂಸ್ 18 ವರದಿಯಂತೆ ಸಿರ್ಸಾ ಆಡಳಿತ ಅಧಿಕಾರಿಗಳು, ರಾಮ್ ರಹೀಂ ಅವರ ಮನವಿ ಅರ್ಜಿಯನ್ನು ಪರಿಶೀಲಿಸಿ, ಕೋರ್ಟಿಗೆ ವರದಿ ನೀಡಿದ್ದಾರೆ. ಬೇಸಾಯ, ತೋಟಗಾರಿಕೆ ಮಾಡಲು ಅನುಮತಿ ಕೋರಿ ಪೆರೋಲ್ ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ರಾಮ್ ರಹೀಂ ಹೆಸರಲ್ಲಿ ಯಾವುದೇ ಜಮೀನು ಇಲ್ಲ ಎಂದು ದಾಖಲೆಯನ್ನು ಒದಗಿಸಿದ್ದಾರೆ.
ಒಂದು ವರ್ಷಗಳ ಕಾಲ್ ಜೈಲುವಾಸ ಅನುಭವಿಸಿದ ಮೇಲೆ ಪೆರೋಲ್ ಮೇಲೆ ಹೊರ ಬರಲು ಅವಕಾಶ ಇರುತ್ತದೆ. ಆದರಂತೆ ರಾಮ್ ರಹೀಂ ಅವರ ಮನವಿಯನ್ನು ಸಿರ್ಸಾ ಜಿಲ್ಲಾಡಳಿತಕ್ಕೆ ಕಳಿಸಲಾಗಿತ್ತು. ಜಿಲ್ಲಾಡಳಿತ ನೀಡಿದ ವರದಿ ಆಧಾರಿಸಿ ಸರ್ಕಾರ ಮುಂದಿನ ಕ್ರಮ ಜರುಗಿಸಲಿದೆ ಎಂದು ಹರ್ಯಾಣದ ಬಂದಿಖಾನೆ ಸಚಿವ ಕೆಎಲ್ ಪಾನ್ವರ್ ಹೇಳಿದ್ದಾರೆ.

ರಾಮ್ ರಹೀಂಗೆ 20 ವರ್ಷಗಳ ಜೈಲುಶಿಕ್ಷೆ
ರೋಹ್ಟಕ್ ನ ಸುನಾರಿಯಾ ಜೈಲಿನಲ್ಲಿ 51 ವರ್ಷ ವಯಸ್ಸಿನ ರಾಮ್ ರಹೀಂ ನೆಲೆಸಿದ್ದಾರೆ. ಎರಡು ಅತ್ಯಾಚಾರ ಪ್ರಕರಣ, ಪತ್ರಕರ್ತರ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿದ್ದು, ಈಗ 42 ದಿನಗಳ ಕಾಲ ಪೆರೋಲ್ ಗಾಗಿ ಮನವಿ ಮಾಡಿಕೊಂಡಿದ್ದಾರೆ. ತನ್ನ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಕ್ಕೆ 2017ರ ಆಗಸ್ಟ್ನಲ್ಲಿ ರಾಮ್ ರಹೀಮ್ಗೆ ಪಂಚಕುಲದ ಸಿಬಿಐ ನ್ಯಾಯಾಲಯವು ರಾಮ್ ರಹೀಂಗೆ 20 ವರ್ಷಗಳ ಜೈಲುಶಿಕ್ಷೆ ವಿಧಿಸಿದೆ.

ರಾಮ್ ರಹೀಮ್ ಅವರಿಗೆ ಲಕ್ಷಾಂತರ ಭಕ್ತರಿದ್ದಾರೆ ಏಕೆ?
ಅಪರಾಧ ಪ್ರಕರಣದ ತೀರ್ಪು ಪ್ರಕಟಿಸಲು ಕ್ರಿಕೆಟ್ ಸ್ಟೇಡಿಯಂನ್ನು ಜೈಲಾಗಿ ಪರಿವರ್ತಿಸಲಾಗಿತ್ತು. ರಾಮ್ ರಹೀಮ್ ಸಿಂಗ್ ಅತ್ಯಾಚಾರ ಪ್ರಕರಣದ ತೀರ್ಪಿನ ಪ್ರಭಾವ ಪಂಜಾಬ್, ಹರ್ಯಾಣ ಅಲ್ಲದೆ ರಾಜಸ್ಥಾನಕ್ಕೂ ವ್ಯಾಪಿಸಿದೆ. ಜಾತಿ ವ್ಯವಸ್ಥೆಯಲ್ಲಿ ಮುಳುಗಿರುವ ಪಂಜಾಬ್ ಹಾಗೂ ಹರ್ಯಾಣದಲ್ಲಿ ಡೇರಾ ಸಚ್ಚಾ ಸೌಧಾ ಸಂಸ್ಥೆ ಮೂಲಕ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರು ಹೊಸ ಬೆಳಕು ಮೂಡಿಸಿದ್ದರು. ಜಾತಿ ರಹಿತ ವ್ಯವಸ್ಥೆ ತರಲು ಯತ್ನಿಸಿದರು.
ಇದಕ್ಕೆ ಸಾರ್ವಜನಿಕರಿಂದ ಭರಪೂರ ವ್ಯಕ್ತವಾಗಿತ್ತು. ಸಮಾಜದಲ್ಲಿ ಹಿಂದುಳಿದ ವರ್ಗದವರು ರಾಮ್ ರಹೀಮ್ ಬೆನ್ನಹಿಂದೆ ನಿಂತರು. ಸಬ್ಸಿಡಿ ದರದಲ್ಲಿ ಆಹಾರ ವಿತರಣೆ, ಔಷಧಿ ಪೂರೈಕೆ ಮಾಡುವ ಮೂಲಕ ಜನಪ್ರಿಯತೆ ಗಳಿಸಿದರು. ಸರಿ ಸುಮಾರು 104ಕ್ಕೂ ಅಧಿಕ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿರುವ ರಾಮ್ ರಹೀಮ್ ಅವರು ಪಂಜಾಬಿನ ಬಹುಮುಖ್ಯ ಸಮಸ್ಯೆಯ ವಿರುದ್ಧ ಹೋರಾಟ ನಡೆಸಿದರು.

ರಹೀಮ್ ಒಬ್ಬ ರಾಕ್ ಸಂಗೀತಗಾರ
ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ರಾಮ್ ರಹೀಮ್ ಒಬ್ಬ ರಾಕ್ ಸಂಗೀತಗಾರ! ಅವನ ಹೈ ವೇ ಲವ್ ಚಾರ್ಜರ್ ಎಂಬ ಆಲ್ಬಮ್ ಬಿಡುಗಡೆಯಾದ ಮೂರೇ ದಿನಗಳಲ್ಲಿ ಮೂರು ಮಿಲಿಯನ್ ಗಿಂತ ಹೆಚ್ಚು ಪ್ರತಿ ಮಾರಾಟವಾಗಿ ದಾಖಲೆ ಬರೆದಿತ್ತು! ನೆಟ್ ವರ್ಕ್ ತೆರೆ ಲವ್ ಕಾ, ಲವ್ ರಬ್ ಸೆ ಮುಂತಾದ ಆಲ್ಬಂ ಅನ್ನು ಬಿಡುಗಡೆ ಮಾಡಿದ್ದಾರೆ. ಸಂಗೀತದ ಮೂಲಕ ಯುವಕರಿಗೆ ಧನಾತ್ಮಕ ಸಂದೇಶಗಳನ್ನು ನೀಡಿ ಅವರನ್ನು ಮದ್ಯಪಾನ, ಮಾದಕ ವ್ಯಸನದಂಥ ಚಟಗಳಿಂದ ಮುಕ್ತಗೊಳಿಸುತ್ತಿದ್ದನಂತೆ. ಅಷ್ಟೇ ಅಲ್ಲ, ಸಂತಾನಹೀನತೆಗೂ ಚಿಕಿತ್ಸೆ ನೀಡುತ್ತಿದ್ದನಂತೆ.

ಬಹುಮುಖ ಪ್ರತಿಭೆ ಎಂದು ಹೊಗಳಲಾಗಿದೆ
ಡೇರಾ ವೆಬ್ ಸೈಟ್ ನಲ್ಲಿ ರಾಮ್ ರಹೀಮ್ ನನ್ನು ಲೇಖಕ, ಸಂಶೋಧಕ, ಕೃಷಿಕ, ವಿಜ್ಞಾನಿ, ಕ್ರೀಡಾಪಟು, ಬಹು ಭಾಷಾ ತಜ್ಞ, ವಿದ್ವಾಂಸ, ನಿರ್ದೇಶಕ, ಸಂಗೀತಗಾರ, ಡಿ ಅಡಿಕ್ಷನ್ ಸ್ಪೆಶಲಿಸ್ಟ್ ಎಂದು ಉಲ್ಲೇಖಿಸಲಾಗಿದೆ! 2014 ಡೇರಾ ಮುಖ್ಯಸ್ಥರೇ ಹೇಳಿದ್ದ ಪ್ರಕಾರ ದೇಶದಲ್ಲಿ 5 ಕೋಟಿಗೂ ಹೆಚ್ಚು ಜನ ಡೇರಾ ಅನುಯಾಯಿಗಳಿದ್ದಾರೆ. ಅದರಲ್ಲಿ 25 ಲಕ್ಷಕ್ಕೂ ಹೆಚ್ಚು ಜನ ಹರ್ಯಾಣದಲ್ಲಿದ್ದಾರೆ! 2015 ರಲ್ಲಿ ಬಿಡುಗಡೆಯಾದ MSG: The Messenger ಎಂಬ ಸಿನೆಮಾದಲ್ಲೂ ನಟಿಸಿದ್ದ ರಾಮ್ ರಹೀಮ್, ಈ ಚಿತ್ರದ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಕೀರ್ತಿ ಸಂಪಾದಿಸಲು ಉತ್ಸುಕನಾಗಿದ್ದನಂತೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications