Get Updates
Get notified of breaking news, exclusive insights, and must-see stories!

ಮುಖ್ಯಮಂತ್ರಿ ವಿರುದ್ಧ ಅಮಿತ್ ಶಾ ಅಸಮಾಧಾನ: ದೆಹಲಿಗೆ ಬುಲಾವ್

ಚಂಡೀಗಡ, ಅಕ್ಟೋಬರ್ 24: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಭಾರಿ ಆಘಾತ ಎದುರಾಗಿದೆ. ಮತ್ತೆ ಅಧಿಕಾರಕ್ಕೆ ಹಿಡಿಯುವ ಹುಮ್ಮಸ್ಸಿನಲ್ಲಿದ್ದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ಗೆ ಹಿನ್ನಡೆಯಾಗಿದೆ.

ಬಿಜೆಪಿ ಸ್ಪಷ್ಟ ಬಹುಮತ ಪಡೆಯದೆ ಅತಂತ್ರ ವಿಧಾನಸಭೆ ಫಲಿತಾಂಶ ಬರುವುದು ಖಚಿತವಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಖಟ್ಟರ್ ಅವರಿಗೆ ದೆಹಲಿಯಿಂದ ಬುಲಾವ್ ಬಂದಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಲಾಬಿ ಮಾಡಿ ತಮ್ಮ ಆಯ್ಕೆಯ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸಿದ್ದ ಖಟ್ಟರ್ ವಿರುದ್ಧ ಅಮಿತ್ ಶಾ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.

ಟಿಕೆಟ್ ಹಂಚಿಕೆ ವಿಚಾರದಲ್ಲಿ ಉಂಟಾದ ಲೋಪದ ಬಗ್ಗೆ ಅಮಿತ್ ಶಾ ಸಿಟ್ಟಿಗೆದ್ದಿದ್ದು, ಕೂಡಲೇ ದೆಹಲಿಗೆ ಬರುವಂತೆ ಖಟ್ಟರ್ ಅವರಿಗೆ ಕರೆ ನೀಡಿದ್ದಾರೆ ಎನ್ನಲಾಗಿದೆ.

Recommended Video

      Siddaramaiah Met Sonia Gandhi in New Delhi | Oneindia Kannada
      Haryana Assembly elections 2019 Amit Shah Unhappy With Haryana Manohar Lal Khattar

      ಈ ನಡುವೆ ಹರಿಯಾಣದಲ್ಲಿ ಸರ್ಕಾರ ರಚಿಸುವ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇರಿಸಲು ಬಿಜೆಪಿ ತೀರ್ಮಾನಿಸಿದೆ. ವಿರೋಧಪಕ್ಷಗಳ ವಿರುದ್ಧವಾಗಲೀ ಅಥವಾ ಪಕ್ಷದ ನಾಯಕರ ವಿರುದ್ಧವಾಗಲೀ ಹೇಳಿಕೆ ನೀಡದಂತೆ ಮುಖಂಡರಿಗೆ ಸೂಚನೆ ನೀಡಿದೆ.

      ಹರಿಯಾಣದಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶದ ಸೂಚನೆ ದೊರೆತ ಹಿನ್ನೆಲೆಯಲ್ಲಿ ಕಿಂಗ್ ಮೇಕರ್ ಜೆಜೆಪಿಯತ್ತ ಕಾಂಗ್ರೆಸ್ ಮತ್ತು ಬಿಜೆಪಿಯ ಗಮನ ಹರಿದಿದೆ. ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ ಅವರಿಗೆ ಮುಖ್ಯಮಂತ್ರಿ ಸ್ಥಾನದ ಆಫರ್ ನೀಡುವ ಮೂಲಕ ಸರ್ಕಾರ ರಚಿಸಲು ಕಾಂಗ್ರೆಸ್ ಮುಂದಾಗಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+