ಹರ್ಯಾಣ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ
ಚಂಡೀಗಡ, ಮಾರ್ಚ್ 10: ಹರ್ಯಾಣದ ಬಿಜೆಪಿ-ಜೆಜೆಪಿ ಸರ್ಕಾರಕ್ಕೆ ಕಂಟಕ ಎದುರಾಗಿದೆ. ಸರ್ಕಾರದ ವಿರುದ್ಧ ಕಾಂಗ್ರೆಸ್ ಬುಧವಾರ ಅವಿಶ್ವಾಸ ಗೊತ್ತುವಳಿ ಮಂಡಿಸಿದೆ. ಅವಿಶ್ವಾಸ ನಿಲುವಳಿ ಮಂಡನೆಗೆ ಮತ ಹಾಕುವ ಮುನ್ನ ಎರಡು ಗಂಟೆ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ಸ್ಪೀಕರ್ ಸಿಸಿ ಗುಪ್ತಾ ತಿಳಿಸಿದ್ದರು.
ಹರ್ಯಾಣ ವಿರೋಧಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರು ಮನೋಹರ್ ಲಾಲ್ ಖಟ್ಟರ್ ನೇತೃತ್ವದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದರು. 'ಗಡಿಯಲ್ಲಿ ಸುಮಾರು 250 ರೈತರು ಮೃತಪಟ್ಟಿದ್ದಾರೆ. ನಾನು ಅವರ ಹೆಸರನ್ನು ಉಲ್ಲೇಖಿಸಿದ್ದೆ. ಆದರೆ ಪತ್ರಿಕೆಗಳಲ್ಲಿ ಅದು ಕಾಣಿಸಲಿಲ್ಲ' ಎಂದು ಹೇಳಿದರು.
ಬಿಜೆಪಿ, ಜೆಜೆಪಿ, ಕಾಂಗ್ರೆಸ್ ಸೇರಿದಂತೆ ರಾಜ್ಯದಲ್ಲಿನ ಎಲ್ಲ ರಾಜಕೀಯ ಪಕ್ಷಗಳೂ ಬುಧವಾರದಂದು ಅವಿಶ್ವಾಸ ಗೊತ್ತುವಳಿ ನಿರ್ಣಯದ ವೇಳೆ ಸದನದಲ್ಲಿ ತಪ್ಪದೆ ಹಾಜರಿರುವಂತೆ ಶಾಸಕರಿಗೆ ವಿಪ್ ಜಾರಿ ಮಾಡಿದ್ದವು.

'ಇದು ಬಹುಮತದ ಸರ್ಕಾರವಲ್ಲ. ಆದರೆ ಜೆಜೆಪಿಯನ್ನು ಅವಲಂಬಿಸಿದೆ. ಈ ಸರ್ಕಾರಕ್ಕೆ ಬಹುಮತವಿಲ್ಲ' ಎಂದು ಹೂಡಾ ಹೇಳಿದರು.
90 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 40 ಸೀಟುಗಳನ್ನು ಹೊಂದಿದ್ದರೆ, ಅದರ ಮಿತ್ರಪಕ್ಷ ಜೆಜೆಪಿ 10 ಸೀಟುಗಳನ್ನು ಹೊಂದಿದೆ. ಅವರ ಜತೆಗೆ ಐವರು ಪಕ್ಷೇತರ ಶಾಸಕರ ಬೆಂಬಲವಿದೆ. ಕಾಂಗ್ರೆಸ್ 31 ಶಾಸಕರನ್ನು ಹೊಂದಿದೆ. ಎರಡು ಕ್ಷೇತ್ರಗಳು ಖಾಲಿ ಇರುವುದರಿಂದ, ಬಹುಮತ ಪಡೆಯಲು 45 ಸೀಟುಗಳ ಅಗತ್ಯವಿದೆ.
ಕೃಷಿ ಕಾಯ್ದೆಗಳ ವಿರುದ್ಧದ ರೈತರ ಪ್ರತಿಭಟನೆ ನಡುವೆ ಹರ್ಯಾಣ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್ ಈ ನಡೆ ಅನುಸರಿಸಿದೆ. ತಮ್ಮ ಕುರ್ಚಿಯ ಮೇಲೆ 250 ರೈತರ ರಕ್ತದ ಕಲೆಗಳು ಕಂಡರೆ ಮುಖ್ಯಮಂತ್ರಿ ರಾಜೀನಾಮೆ ನೀಡಲಿ ಎಂದು ಮಾಜಿ ಸ್ಪೀಕರ್, ಶಾಸಕ ರಘುಬೀರ್ ಸಿಂಗ್ ಕಡಿಯಾನ್ ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications