ಹರ್ಯಾಣದ ಅತಂತ್ರ ಸ್ಥಿತಿ: ಜೆಜೆಪಿ ಕಿಂಗ್ ಮೇಕರ್, ಸಿಎಂ ಕುರ್ಚಿ ಮೇಲೆ ದುಷ್ಯಂತ್ ಕಣ್ಣು
ಚಂದೀಗಢ, ಅಕ್ಟೋಬರ್ 24: ಚುನಾವಣಾ ಪೂರ್ವ ಹಾಗೂ ಮತದಾನೋತ್ತರ ಸಮೀಕ್ಷೆಗಳ ಲೆಕ್ಕಾಚಾರವನ್ನು ಉಲ್ಪಾ ಪಲ್ಪಾ ಆಗುತ್ತಿದೆ. ಭಾರಿ ಬಹುಮತದ ನಿರೀಕ್ಷೆಯಲ್ಲಿದ್ದ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಈಗ ಮಿತ್ರ ಪಕ್ಷಗಳ ಹುಡುಕಾಟದಲ್ಲಿದೆ. ಈ ನಡುವೆ ಜನ ನಾಯಕ್ ಜನತಾ ಪಾರ್ಟಿ(ಜೆಜೆಪಿ) ಕಿಂಗ್ ಮೇಕರ್ ಆಗುವ ಎಲ್ಲಾ ಲಕ್ಷಣಗಳು ಕಂಡು ಬಂದಿವೆ. ಅಕ್ಟೋಬರ್ 21ರಂದು ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಲ್ಲಿ ಶೇ 61.92ರಷ್ಟು ಮತದಾನ ನಡೆದಿತ್ತು. ಅಕ್ಟೋಬರ್ 24ರಂದು ಫಲಿತಾಂಶ ಭಾರಿ ಕುತೂಹಲ ಕೆರಳಿಸಿದೆ.
ಬಹುಜನ ಸಮಾಜ ಪಕ್ಷ(ಬಿಎಸ್ ಪಿ), ಇಂಡಿಯನ್ ನ್ಯಾಷನಲ್ ಲೋಕದಳ(ಐಎನ್ ಎಲ್ ಡಿ) ಜೊತೆಗೆ ಜನ ನಾಯಕ್ ಜನತಾ ಪಾರ್ಟಿ( ಜೆಜೆಪಿ) ಮೈತ್ರಿ ಸಾಧಿಸುವ ಮುನ್ನವೇ ಮಾತುಕತೆ ಮುರಿದು ಬಿದ್ದಿದೆ. ಚುನಾವಣೆಗೂ ಮುನ್ನ ಈ ಪಕ್ಷಗಳ ನಡುವೆ ವೈಮನಸ್ಯ ಹೆಚ್ಚಾಗಿದ್ದರಿಂದ ಬಿಜೆಪಿಗೆ ವರವಾಗಿ ಪರಿಣಮಿಸುವ ಸಾಧ್ಯತೆ ಕಂದು ಬಂದಿತ್ತು. ಬಿಜೆಪಿ ವಿರುದ್ಧ ಒಗ್ಗೂಡಬೇಕಿದ್ದ ವಿಪಕ್ಷಗಳಲ್ಲಿನ ಒಡಕು ಬಿಜೆಪಿಗೆ ಜಯ ತರಲಿದೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ, ಮತದಾನದ ಬಳಿಕ ಎಲ್ಲವೂ ಬದಲಾಗಿದೆ. 2014ರ ವಿಧಾನಸಭೆ ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ 47 ಸ್ಥಾನಗಳನ್ನು ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದರೆ, ಕಾಂಗ್ರೆಸ್ 15 ಸ್ಥಾನ ಮಾತ್ರ ಗಳಿಸಲು ಸಾಧ್ಯವಾಗಿತ್ತು.

ಮಾಜಿ ಉಪ ಪ್ರಧಾನಿ ದೇವಿಲಾಲ್ ಅವರ ಮರಿ ಮೊಮ್ಮಗ ದುಷ್ಯಂತ್ ಚೌಟಲ ಅವರ ಜನ ನಾಯಕ್ ಜನತಾ ಪಾರ್ಟಿ ಕಿಂಗ್ ಮೇಕರ್ ಆಗಿ ಪರಿಣಮಿಸಿದೆ. ಕಾಂಗ್ರೆಸ್ ಜತೆ ಜೆಜೆಪಿ ಆರಂಭಿಕ ಹಂತದ ಮಾತುಕತೆ ನಡೆಸಿದೆ. ಮುಖ್ಯಮಂತ್ರಿ ಸ್ಥಾನ ನೀಡಿದರೆ ಬೆಂಬಲ ನೀಡುವುದಾಗಿ ದುಷ್ಯಂತ್ ಘೋಷಿಸಿದ್ದಾರೆ. ಅದರೆ ದುಷ್ಯಂತ್ ಡಿಸಿಎಂ ಸ್ಥಾನ ನೀಡುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಫಲಿತಾಂಶದ ಟ್ರೆಂಡ್: 90 ರಲ್ಲಿ ಬಿಜೆಪಿ 42 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ 32 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಐಎನ್ಎಲ್ಡಿ 2 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ ಉಳಿದ ಕ್ಷೇತ್ರಗಳಲ್ಲಿ ಜನನಾಯಕ ಜನತಾ ಪಕ್ಷ ಮುನ್ನಡೆಯಲ್ಲಿವೆ. ಟ್ರೆಂಡ್ ಪ್ರಕಾರ ಹರಿಯಾಣದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಬಹುಮತಕ್ಕೆ 46 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕಿದೆ. ಜೆಜೆಪಿಯ ದುಷ್ಯಂತ್ ಅವರ ಮನ ಓಲೈಸಲು ಪ್ರಕಾಶ್ ಸಿಂಗ್ ಬಾದಲ್ ಹಾಗೂ ಸುಖ್ ಬೀರ್ ಬಾದಲ್ ಅವರ ನೆರವನ್ನು ಬಿಜೆಪಿ ಕೋರಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications