ಹರಿಯಾಣ: ಅಕ್ರಮ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ: 960ಕ್ಕೂ ಹೆಚ್ಚು ಬಂಧನ
ಚಂಡಿಗಢ, ಸೆಪ್ಟೆಂಬರ್ 7: ಅಕ್ರಮ ಚಟುವಟಿಕೆಗಳ ವಿರುದ್ಧ ಒಂದು ದಿನದ ಕಾರ್ಯಾಚರಣೆಯಲ್ಲಿ ಹರಿಯಾಣ ಪೊಲೀಸರು 960 ಕ್ಕೂ ಹೆಚ್ಚು ಜನರನ್ನು ಬಂಧಿಸಿ, 710 ಎಫ್ಐಆರ್ಗಳನ್ನು ದಾಖಲಿಸಿದ್ದಾರೆ.
ಹರಿಯಾಣ ಪೊಲೀಸರು ಮಂಗಳವಾರ ರಾಜ್ಯದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ದಿನವಿಡೀ ನಡೆಸುತ್ತಿರುವ ಕಾರ್ಯಾಚರಣೆಯ ಭಾಗವಾಗಿ ಒಟ್ಟು 964 ಜನರನ್ನು ಬಂಧಿಸಿದ್ದಾರೆ ಮತ್ತು ಭಾರತೀಯ ದಂಡ ಸಂಹಿತೆ, ಶಸ್ತ್ರಾಸ್ತ್ರ ಮತ್ತು ಅಬಕಾರಿ ಕಾಯ್ದೆಯಡಿ 710 ಎಫ್ಐಆರ್ಗಳನ್ನು ದಾಖಲಿಸಿದ್ದಾರೆ. ರಾಜ್ಯದಲ್ಲಿ ಸರಣಿ ಸಂಘಟಿತ ದಾಳಿಗಳ ನಂತರ ಬಂಧನಗಳು ಮತ್ತು ಎಫ್ಐಆರ್ಗಳು ದಾಖಲಾಗಿವೆ.
ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪಿಕೆ ಅಗರವಾಲ್ ಮಾತನಾಡಿ, ಕ್ರಿಮಿನಲ್ ಅಂಶಗಳ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲು, ಬೀದಿ ಅಪರಾಧ, ಅಕ್ರಮ ಶಸ್ತ್ರಾಸ್ತ್ರಗಳ ಮೇಲೆ ನಿಯಂತ್ರಣ, ಮದ್ಯ ಮತ್ತು ಮಾದಕ ವಸ್ತುಗಳನ್ನು ಪತ್ತೆಹಚ್ಚುವ ಕಾರ್ಯ ನಡೆಸಲಾಗುತ್ತಿದೆ. ಇದರ ಭಾಗವಾಗಿ ಎಫ್ಐಆರ್ಗಳು ದಾಖಲಾಗಿದ್ದು ಹಲವರನ್ನು ಬಂಧಿಸಲಾಗಿದೆ ಎಂದಿದ್ದಾರೆ.

"ಪ್ರತಿ ಜಿಲ್ಲೆಯ ಅಪರಾಧಿಗಳು ಮತ್ತು ಸಮಾಜ ವಿರೋಧಿ ಶಕ್ತಿಗಳು ತಪ್ಪಿಸಿಕೊಳ್ಳಲು ಅವಕಾಶವನ್ನು ಬಿಡದೆ ಅವರ ಬೀದಿಗಳು ಅಥವಾ ಮನೆಗಳ ಮೇಲೆ ದಾಳಿ ಮಾಡುವ ಮೂಲಕ ಅವರ ಹೃದಯದಲ್ಲಿ ಕಾನೂನಿನ ಭಯವನ್ನು ಉಂಟುಮಾಡಲು ನಾವು ಬಯಸುತ್ತೇವೆ" ಎಂದು ಡಿಜಿಪಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕ್ಷೇತ್ರ ಘಟಕಗಳಿಂದ ಪಡೆದ ವರದಿಗಳ ಪ್ರಕಾರ, 645 ತಂಡಗಳಲ್ಲಿ ಸುಮಾರು 3,500 ಪೊಲೀಸ್ ಸಿಬ್ಬಂದಿ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಗಳ ಸಮಯದಲ್ಲಿ, ತಂಡಗಳು 45 ಘೋಷಿತ ಅಪರಾಧಿಗಳು ಮತ್ತು 34 ಜಾಮೀನು ಸಂಬಂದಿತ ಅಪರಾಧಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿ ವೇಳೆ ಪಾಣಿಪತ್ ಜಿಲ್ಲೆಯಲ್ಲಿ 116, ಗುರುಗ್ರಾಮ್ನಲ್ಲಿ 108 ಮತ್ತು ಅಂಬಾಲಾದಲ್ಲಿ 102 ಆರೋಪಿಗಳನ್ನು ಬಂಧಿಸಲಾಗಿದೆ.

ಅಂತೆಯೇ, ಸೋನಿಪತ್ ಜಿಲ್ಲೆಯಲ್ಲಿ ಗರಿಷ್ಠ ಸಂಖ್ಯೆಯ ಘೋಷಿತ ಅಪರಾಧಿಗಳು ಬಂಧಿಸಲಾಗಿದೆ. ನಂತರ ಪಾಣಿಪತ್ನಲ್ಲಿ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. ಅಂತೆಯೇ, ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿತ ಆರೋಪಿಗಳಿಂದ 67 ಅಕ್ರಮ ಬಂದೂಕುಗಳು ಮತ್ತು 36 ಕಾಟ್ರಿಡ್ಜ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಈ ದಾಳಿಗಳಲ್ಲಿ ಭಾಗವಹಿಸಿದ್ದರು ಮತ್ತು ಕ್ರಿಮಿನಲ್ ಅಂಶಗಳ ಸಂಪೂರ್ಣ ನಿಗ್ರಹವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications