ಜೈಲಿನಿಂದ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದ ಸಿಧು
ಪಟಿಯಾಲ ಮೇ 23: ರಸ್ತೆ ರಂಪಾಟ ಪ್ರಕರಣದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಜೈಲು ಪಲಾಗಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುರನ್ನು ಬಿಗಿ ಭದ್ರತೆಯಲ್ಲಿ ಸೋಮವಾರ ಪಟಿಯಾಲದ ರಾಜೇಂದ್ರ ಆಸ್ಪತ್ರೆಗೆ ಕರೆತಂದು ಆರೋಗ್ಯ ತಪಾಸಣೆಗೆ ಒಳಪಡಿಸಲಾಯಿತು.
ಭಾರತ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದ ಸಿಧು, 1988ರ ಡಿ.27ರಂದು ಪಂಜಾಬ್ನ ಪಟಿಯಾಲದ ರಸ್ತೆ ರಂಪಾಟದಲ್ಲಿ ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಚಿಕಿತ್ಸೆ ಫಲಿಸದೇ 65 ವರ್ಷದ ಗುರ್ನಾಮ್ ಸಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. 34 ವರ್ಷಗಳ ನಂತರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 19ರಂದು ಸಿಧುಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತು.
ಮೇ 20ರಂದು ಸಿಧು ಅವರು ಪಟಿಯಾಲ ನ್ಯಾಯಾಲಯಕ್ಕೆ ಶರಣಾದರು. ಅಲ್ಲಿಂದ ಅವರನ್ನು ಪಟಿಯಾಲ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.

"ಅನಾರೋಗ್ಯದ ಹಿನ್ನಲೆಯಲ್ಲಿ ನವಜೋತ್ ಸಿಂಗ್ ಸಿಧು ತಮಗೆ ಜೈಲಿನಲ್ಲಿ ವಿಶೇಷ ಆಹಾರ ಬೇಕೆಂದು ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ವೈದ್ಯರ ತಂಡವು ಸಿಧು ಆರೋಗ್ಯದ ಸಂಪೂರ್ಣ ತಪಾಸಣೆ ನಡೆಸಲಿದೆ'' ಎಂದು ಸಿಧು ಪರ ವಕೀಲ ಎಚ್ಪಿಎಸ್ ವರ್ಮಾ ತಿಳಿಸಿದರು.
"ಸಿಧು ಅವರು ಯಾವ ರೀತಿಯ ಆಹಾರ ಸೇವಿಸಿದರೆ ಉತ್ತಮ ಎಂಬುದನ್ನು ವೈದ್ಯರ ತಂಡ ನಿರ್ಧರಿಸಲಿದೆ ಹಾಗೂ ಈ ಸಂಬಂಧ ಪಟಿಯಾಲ ನ್ಯಾಯಾಲಕ್ಕೆ ವರದಿಯನ್ನು ಸಲ್ಲಿಸಲಿದೆ'' ಎಂದರು.
"ಸಿಧು ಅವರು ಗೋಧಿ, ಸಕ್ಕರೆ, ಮೈದಾ ಹಾಗೂ ಇತರೆ ಆಹಾರ ಪದಾರ್ಥಗಳನ್ನು ಸೇವಿಸುವಂತಿಲ್ಲ. ಅವರು ಹಣ್ಣುಗಳು, ಪಪ್ಪಾಯ, ಪೇರಲೆ, ಡಬಲ್ ಟೋನ್ಡ್ ಹಾಲು ಹಾಗೂ ಫೈಬರ್ ಮತ್ತು ಕಾರ್ಬೋಹೈಡ್ರೇಟ್ ಗಳು ಹೊಂದಿರದ ಪದಾರ್ಥಗಳನ್ನು ಸೇವಿಸಬಹುದು'' ಎಂದು ವರ್ಮಾ ತಿಳಿಸಿದರು.

ಸಿಧು ಅವರು ಎಂಬಾಲಿಸಮ್ ಹಾಗೂ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದಾರೆ. 2015ರಲ್ಲಿ ಅವರು ದೆಹಲಿಯ ಆಸ್ಪತ್ರೆಯಲ್ಲಿ ಅಕ್ಯೂಟ್ ಡೀಪ್ ವೀನ್ ಥ್ರಂಬೋಸಿಸ್(ಡಿವಿಟಿ) ಚಿಕಿತ್ಸೆಗೆ ಒಳಗಾಗಿದ್ದರು.
ನವಜೋತ್ ಸಿಂಗ್ ಸಿಧು ಅವರನ್ನು ಪಟಿಯಾಲದ ರಾಜೇಂದ್ರ ಆಸ್ಪತ್ರೆಗೆ ಕರೆತಂದ ಸಂದರ್ಭದಲ್ಲಿ ಹಲವು ಕಾಂಗ್ರೆಸ್ ಬೆಂಬಲಿಗರು ಅವರನ್ನು ನೋಡಲು ಆಸ್ಪತ್ರೆಗೆ ಆಗಮಿಸಿದ್ದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications