ಕಾಂಗ್ರೆಸ್ ಸೋಲಿಗೆ ಸಿಧು ಕಾರಣ: ಸಂಪುಟದಿಂದ ಕಿತ್ತೊಗೆಯಲು ಅಮರಿಂದರ್ ಬಯಕೆ
ಚಂಡೀಗಡ, ಮೇ 24: ಅತಿಯಾದ ಭಂಡತನದ ನಡೆಗಳು, ಪಾಕಿಸ್ತಾನದ ಪರವಾದ ಹೇಳಿಕೆಗಳಿಂದ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರೇ ಕಾಂಗ್ರೆಸ್ ಸೋಲಿಗೆ ಕಾರಣ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಿಡಿಕಾರಿದ್ದಾರೆ. ಜತೆಗೆ, ಸಿಧು ಅವರನ್ನು ಸಂಪುಟದಿಂದ ಕಿತ್ತೊಗೆಯಲು ಅವರು ಮುಂದಾಗಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ತಮ್ಮ ಸಂಪುಟದ ಸಹೋದ್ಯೋಗಿ ಸಿಧು ಅವರ ಪಾಕಿಸ್ತಾನ ಪರ ನಿಲುವುಗಳೇ ಕಾರಣ ಎಂದು ಅವರು ಆರೋಪಿಸಿದ್ದಾರೆ. ಪಾಕಿಸ್ತಾನದ ಸೇನಾ ಮುಖ್ಯಸ್ಥರನ್ನು ಆಲಂಗಿಸಿಕೊಳ್ಳುವುದನ್ನು ಭಾರತೀಯರು ಸಹಿಸುವುದಿಲ್ಲ ಎಂದಿದ್ದಾರೆ.
'ಪಾಕಿಸ್ತಾನದ ಸೇನಾ ಮುಖ್ಯಸ್ಥರನ್ನು ಆಲಂಗಿಸಿದ್ದನ್ನು ಭಾರತೀಯರು, ಮುಖ್ಯವಾಗಿ ಸೇನಾ ಯೋಧರು ಸಹಿಸಿಕೊಳ್ಳುವುದಿಲ್ಲ ಎಂದು ಮೊದಲ ದಿನದಿಂದಲೂ ಹೇಳುತ್ತಿದ್ದೇನೆ. ಪ್ರತಿದಿನವೂ ಅಲ್ಲಿ ಕದನ ವಿರಾಮ ಉಲ್ಲಂಘನೆಯಾಗುತ್ತದೆ, ನಮ್ಮ ಸೈನಿಕರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇವುಗಳಿಗೆ ಆದೇಶ ನೀಡುವುದೇ ಪಾಕಿಸ್ತಾನದ ಜನರಲ್. ಹೀಗಾಗಿ ನೀವು ಅಲ್ಲಿಗೆ ಹೋಗಿ ಅವರನ್ನು ಆಲಂಗಿಸಿಕೊಳ್ಳುವುದು ಸರಿಯಲ್ಲ' ಎಂದು ಸಿಂಗ್, ಸಿಧು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಧು ಅವರು ಅಮರಿಂದರ್ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷವು ನಗರ ಕ್ಷೇತ್ರಗಳಾದ ಭಟಿಂಡಾ ಮತ್ತು ಗುರುದಾಸ್ಪುರಗಳಲ್ಲಿ ಸೋಲು ಅನುಭವಿಸಿದೆ. ಸಿಧು ಅವರ ಅತಿರೇಕದ ನಡೆಗಳೇ ಇಲ್ಲಿನ ಸೋಲುಗಳಿಗೆ ಕಾರಣ ಎಂದು ಸಿಂಗ್ ಆರೋಪಿಸಿದ್ದಾರೆ.
ಅಲ್ಲದೆ, ಸಿಧು ಅವರು ಸಚಿವರಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ ವಿಫಲರಾಗಿದ್ದಾರೆ. ಪಂಜಾಬ್ನಲ್ಲಿ ನಗರಗಳಲ್ಲಿನ ಮತ ಬ್ಯಾಂಕ್ಗಳೇ ಕಾಂಗ್ರೆಸ್ನ ಬೆನ್ನೆಲುಬು. ಸಿಧು ಆ ಬೆನ್ನೆಲುಬನ್ನೇ ಮುರಿದಿದ್ದಾರೆ ಎಂದು ಕಿಡಿಕಾರಿದ್ದಾರೆ.
Captain Amarinder Singh on Navjot Singh Sidhu: Indians especially servicemen will not tolerate hugging the Pakistani Army Chief. pic.twitter.com/AVZFgIraR2
— ANI (@ANI) 23 May 2019
ಚಂಡೀಗಡ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪತ್ನಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಇದಕ್ಕೆ ಅಮರಿಂದರ್ ಸಿಂಗ್ ಅವರೇ ಕಾರಣ ಎಂದು ಸಿಧು ಆರೋಪಿಸಿದ್ದರು. ಈ ಎಲ್ಲ ಸಂಗತಿಗಳನ್ನು ಕಾಂಗ್ರೆಸ್ ಹೈಕಮಾಂಡ್ ಮುಂದಿರಿಸಿ ಚರ್ಚಿಸಲು ಅಮರಿಂದರ್ ತೀರ್ಮಾನಿಸಿದ್ದಾರೆ. ಸಿಧು ಅವರನ್ನು ಸಂಪುಟದಿಂದ ಹೊರಹಾಕುವುದು ಒಳಿತು ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications