ಮೊಹಾಲಿ ಸ್ಫೋಟ; ದುಷ್ಕರ್ಮಿಗಳನ್ನು ಬಿಡಲ್ಲ ಎಂದ ಪಂಜಾಬ್ ಸಿಎಂ
ಚಂಡೀಗಢ, ಮೇ 10: ಪಂಜಾಬ್ನ ಮೊಹಾಲಿಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಕಾರಣರಾದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಮಂಗಳವಾರ ಹೇಳಿದ್ದಾರೆ. ಪ್ರಕರಣದ ಸಂಬಂಧ 11 ಜನರನ್ನು ಬಂಧಿಸಲಾಗಿದೆ.
ಮುಖ್ಯಮಂತ್ರಿಗಳು ತಮ್ಮ ನಿವಾಸದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಡಿಜಿಪಿ ಹಾಗು ಇತರ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದ್ದು, ಪ್ರಕರಣದ ಬಗ್ಗೆ ಮಾಹಿತಿ ಪಡೆದರು.
"ಮೊಹಾಲಿ ಸ್ಫೋಟ ಘಟನೆಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಂಜಾಬ್ ರಾಜ್ಯದ ವಾತಾವರಣ ಹಾಳು ಮಾಡಲು ಯತ್ನಿಸಿದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ" ಎಂದು ಪಂಜಾಬ್ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.

ಮೊಹಾಲಿಯ ಪಂಜಾಬ್ ಪೊಲೀಸ್ ಗುಪ್ತಚರ ಮುಖ್ಯಕಚೇರಿಯ ಹೊರಗೆ ಸೋಮವಾರ ರಾತ್ರಿ ಲಘು ಬಾಂಬ್ ಸ್ಫೋಟ ಸಂಭವಿಸಿದೆ. ರಾಕೆಟ್ ಚಾಲಿತ ಗ್ರೆನೇಡ್ (ಆರ್ಪಿಜಿ- Rocket-Propelled Grenade) ಸ್ಫೋಟ ಇದೆಂದು ಅಂದಾಜಿಸಲಾಗಿದೆ. ಸ್ಫೋಟದಿಂದ ಯಾರಿಗೂ ಪ್ರಾಣಾಪಾಯ, ಗಾಯವಾಗಿಲ್ಲ ಪೊಲೀಸರು ಇದನ್ನು ಗಂಭೀರ ಭಯೋತ್ಪಾದನೆಯ ಕೃತ್ಯ ಎಂಬ ದೃಷ್ಟಿಯಿಂದಲೇ ತನಿಖೆ ನಡೆಸುತ್ತಿದ್ಧಾರೆ.
"ಎಸ್ಎಎಸ್ ನಗರ್ನ ಸೆಕ್ಟರ್ 77ರಲ್ಲಿರುವ ಪಂಜಾಬ್ ಪೊಲೀಸ್ ಗುಪ್ತಚರ ವಿಭಾಗದ ಮುಖ್ಯಕಚೇರಿಯಲ್ಲಿ ಸಣ್ಣ ಸ್ಫೋಟವಾಗಿದ್ದು ವರದಿಯಾಗಿದೆ. ಯಾವ ಹಾನಿ ಆಗಿಲ್ಲದಿರುವುದು ತಿಳಿದುಬಂದಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ತನಿಖೆ ನಡೆಸಲಾಗುತ್ತಿದೆ" ಎಂದು ಮೊಹಾಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದೊಂದು ಭಯೋತ್ಪಾದನಾ ಕೃತ್ಯವಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮೊಹಾಲಿ ಎಸ್ಪಿ ರವೀಂದರ್ ಪಾಲ್ ಸಿಂಗ್, "ಈ ಘಟನೆಯನ್ನು ಕಡೆಗಣಿಸಲಾಗುವುದಿಲ್ಲ. ಭಯೋತ್ಪಾದನಾ ಕೃತ್ಯ ಅಲ್ಲ ಎಂದು ಹೇಳಲು ಆಗಲ್ಲ. ತನಿಖೆ ನಡೆಸುತ್ತಿದ್ದೇವೆ" ಎಂದು ಹೇಳಿದ್ದಾರೆ.

ಏನಿದು ಆರ್ಪಿಜಿ?; ಆರ್ಪಿಜಿ ಎಂದರೆ ರಾಕೆಟ್ ಪ್ರೊಪೆಲ್ಡ್ ಗ್ರೆನೇಡ್. ಇದು ಮೂಲತಃ ಸೋವಿಯತ್ ರಷ್ಯಾ ಕಾಲದಲ್ಲಿ ರೂಪಿಸಲಾಗಿದ್ದ ತಂತ್ರಜ್ಞಾನದ ಶಸ್ತ್ರವಾಗಿದೆ. ಹೆಗಲ ಮೇಲಿಟ್ಟುಕೊಂಡು ಕ್ಷಿಪಣಿ ಹಾರಿಸುವಂಥದ್ದು. ಒಬ್ಬ ವ್ಯಕ್ತಿ ಇದನ್ನು ಹೊತ್ತೊಯ್ಯಬಲ್ಲಷ್ಟು ಹಗುರವಾಗಿರುತ್ತದೆ. ಇದನ್ನು ಆ್ಯಂಟಿ-ಟ್ಯಾಂಕ್ ಶಸ್ತ್ರವಾಗಿ ಸಾಮಾನ್ಯವಾಗಿ ಇದನ್ನು ಬಳಸಲಾಗುತ್ತದೆ.
(ಒನ್ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications