ಸಾಂಸ್ಥಿಕ ವಿಚಾರದ ಬಗ್ಗೆ ಚರ್ಚೆ: ಸಿಧು-ವೇಣುಗೋಪಾಲ್ ಗುರುವಾರ ಭೇಟಿ
ನವದೆಹಲಿ, ಅಕ್ಟೋಬರ್ 12: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ಕಾಂಗ್ರೆಸ್ ಪಂಜಾಬ್ ಉಸ್ತುವಾರಿ ಹರೀಶ್ ರಾವತ್ರನ್ನು ಗುರುವಾರ ದೆಹಲಿಯಲ್ಲಿ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಭೇಟೆಯಾಗಲಿದ್ದಾರೆ.
ಈ ಸಭೆಯು ಪಂಜಾಬ್ನ ನೂತನ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ಹಾಗೂ ನವಜೋತ್ ಸಿಂಗ್ ಸಿಧು ನಡುವೆ ಮಾತುಕತೆ ನಡೆದು ಒಪ್ಪಂದ ಆದ ಬಳಿಕದ ಬೆಳವಣಿಗೆ ಆಗಿದೆ. ಈ ಸಭೆಯ ಬಗ್ಗೆ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, "ಇದು ಸಾಂಸ್ಥಿಕ ವಿಚಾರದಲ್ಲಿ ನಡೆಯುವ ಸಭೆ," ಎಂದು ಉಲ್ಲೇಖ ಮಾಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದರು. ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ನಡೆದಿದ್ದು, ಈ ಹಿನ್ನೆಲೆ ಪಂಜಾಬ್ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿತ್ತು. ಇನ್ನು ನವಜೋತ್ ಸಿಂಗ್ ಸಿಧು ಪಂಜಾಬ್ನ ನೂತನ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ಮಾಡಿದ ರಾಜ್ಯದ ಪೊಲೀಸ್ ಮುಖ್ಯಸ್ಥರು ಹಾಗೂ ಸರ್ಕಾರದ ವಕೀಲರ ನೇಮಕದ ವಿಚಾರದಲ್ಲಿ ವೈಮನಸ್ಸು ಹೊಂದಿದ್ದು ಈ ಕಾರಣದಿಂದಲೇ ರಾಜೀನಾಮೆ ನೀಡಿದ್ದರು ಎಂದು ಹೇಳಲಾಗಿದೆ.

ಆದರೆ ನವಜೋತ್ ಸಿಂಗ್ ಸಿಧು ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ತಿರಸ್ಕಾರ ಮಾಡಿತ್ತು. ಅಷ್ಟೇ ಅಲ್ಲದೆ ಹಲವಾರು ನಾಯಕರು ನವಜೋತ್ ಸಿಂಗ್ ಸಿಧು ಮನವೊಲಿಕೆ ಮಾಡುವ ಪ್ರಯತ್ನವನ್ನು ಮಾಡಿದ್ದರು. ಈ ನಡುವೆ ನವಜೋತ್ ಸಿಂಗ್ ಸಿಧು ಜೊತೆ ಕೆಲವೊಂದು ವಿಚಾರದಲ್ಲಿ ಮನಸ್ತಾಪ ಹೊಂದಿರುವ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ನವಜೋತ್ ಸಿಂಗ್ ಸಿಧು ನಂಬಿಕಾಸ್ತ ವ್ಯಕ್ತಿ ಅಲ್ಲ ಎಂದು ನಾನು ಮೊದಲೆ ಹೇಳಿದ್ದೆ ಎಂದಿದ್ದರು.
ನವಜೋತ್ ಸಿಂಗ್ ಸಿಧು ಮನವೊಲಿಕೆ ಮಾಡುವ ಎಲ್ಲಾ ನಾಯಕರುಗಳ ಪ್ರಯತ್ನದ ನಂತರ ಪಂಜಾಬ್ನ ನೂತನ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ಜೊತೆ ನವಜೋತ್ ಸಿಂಗ್ ಸಿಧು ಮಾತುಕತೆಯು ಸಫಲವಾಗಿದೆ. ನವಜೋತ್ ಸಿಂಗ್ ಸಿಧು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನದಲ್ಲೇ ಉಳಿದಿದ್ದಾರೆ. ಈ ಸಂದರ್ಭದಲ್ಲಿ ಕೆಲವೊಂದು ಒಪ್ಪಂದಗಳು ನಡೆದಿದೆ ಎಂದು ಹೇಳಲಾಗಿದೆ. ಇನ್ನು ನವಜೋತ್ ಸಿಂಗ್ ಸಿಧು ತನ್ನ ರಾಜೀನಾಮೆಯನ್ನು ಅಧಿಕೃತವಾಗಿ ಇನ್ನಷ್ಟೇ ಹಿಂದಕ್ಕೆ ಪಡೆಯಬೇಕಾಗಿದೆ.
ನವಜೋತ್ ಸಿಂಗ್ ಸಿಧು, ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ಪುತ್ರನ ವಿವಾಹ ಸಮಾರಂಭದಲ್ಲಿ ಭಾಗಿಯಾಗದಿರುವುದು ಇಬ್ಬರ ನಡುವೆ ಇನ್ನೂ ಕೂಡಾ ಗೊಂದಲಗಳು, ಮನಸ್ತಾಪಗಳು ಇದೆ ಎಂಬುವುದನ್ನು ಸ್ಪಷ್ಟಪಡಿಸಿದೆ. ಇನ್ನು ತಾನು ಚನ್ನಿ ಪುತ್ರನ ವಿವಾಹ ಸಮಾರಂಭದಲ್ಲಿ ಭಾಗಿಯಾಗದಿರುವುದರ ಬಗ್ಗೆ ನವಜೋತ್ ಸಿಂಗ್ ಸಿಧು ಯಾವುದೇ ಹೇಳಿಕೆಯನ್ನು ಅಥವಾ ಕಾರಣವನ್ನು ನೀಡಿಲ್ಲ. ಇದಕ್ಕೂ ಎರಡು ದಿನಗಳ ಹಿಂದೆ ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕೆಯನ್ನು ಮಾಡಿದ್ದರು. ಕಾಂಗ್ರೆಸ್ ಪಕ್ಷವು ಸಾಯುವ ಹಂತದಲ್ಲಿದೆ ಎಂದು ಹೇಳಿದ್ದರು.
ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಸಾವನ್ನಪ್ಪಿರುವ ವಿಚಾರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತಿದ್ದಾಗ, ಸಿಧು ಮೆರವಣಿಗೆ ಹೇಗೆ ಯಶಸ್ವಿಯಾಗುತ್ತದೆ ಎಂದು ಪ್ರಶ್ನಿಸಿದ್ದರು. "ಭಗ್ವಂತ್ ಸಿಧುರ (ನವಜೋತ್ ಸಿಂಗ್ ಸಿಧು ತಂದೆ) ಪುತ್ರ ಈ ಪ್ರತಿಭಟನೆಯ ಮುತುವರ್ಜಿ ವಹಿಸಲು ಅವಕಾಶ ನೀಡಿದ್ದರೆ, ನೀವು ಮುಂದೆ ಹೇಗಿರುತ್ತಿತ್ತು ಎಂದು ನೋಡಬಹುದಿತ್ತು. ಕಾಂಗ್ರೆಸ್ ಈಗ ಸಾಯುವ ಹಂತದಲ್ಲಿದೆ," ಎಂದು ನವಜೋತ್ ಸಿಂಗ್ ಸಿಧು ಟೀಕೆ ಮಾಡುತ್ತಾ ಹೇಳಿದ್ದರು.
(ಒನ್ಇಂಡಿಯಾ ಸುದ್ದಿ)
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications