Get Updates
Get notified of breaking news, exclusive insights, and must-see stories!

ನವಜೋತ್ ಸಿಂಗ್ ಸಿಧು ರಾಜೀನಾಮೆ ವಾಪಸ್; ಹೈಡ್ರಾಮಕ್ಕೆ ತೆರೆ!

ಚಂಡೀಗಢ್, ಅಕ್ಟೋಬರ್ 15; ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿನ ಗೊಂದಲಗಳಿಗೆ ತೆರೆ ಬಿದ್ದಂತೆ ಕಾಣುತ್ತಿದೆ. ನವಜೋತ್ ಸಿಂಗ್ ಸಿಧು ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ವಾಪಸ್ ಪಡೆಯಲಿದ್ದಾರೆ.

ಶುಕ್ರವಾರ ನವದೆಹಲಿಯಲ್ಲಿ ನವಜೋತ್ ಸಿಂಗ್ ಸಿಧು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭೇಟಿಯಾದರು. ರಾಜ್ಯ ಕಾಂಗ್ರೆಸ್‌ನಲ್ಲಿನ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿದರು. ನವಜೋತ್ ಸಿಂಗ್ ಸಿಧು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮುಂದುವರೆಯಲಿದ್ದು, ಪಕ್ಷದಲ್ಲಿ ಗೊಂದಲಗಳು ಬಗೆಹರಿಯಲಿವೆ.

ನವದೆಹಲಿಯಲ್ಲಿ ರಾಹುಲ್‌ ಗಾಂಧಿ ಭೇಟಿ ಬಳಿಕ ಮಾತನಾಡಿದ ನವಜೋತ್ ಸಿಂಗ್ ಸಿಧು, "ನಾನು ನನ್ನ ಕಾಳಜಿಯನ್ನು ರಾಹುಲ್ ಗಾಂಧಿ ಜೊತೆ ಹಂಚಿಕೊಂಡಿದ್ದೇನೆ. ಎಲ್ಲವೂ ಬಗೆಹರಿಯಲಿವೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

 Navjot Singh Sidhu To Continue As President Of Punjab Congress

ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಮಾತನಾಡಿ, "ನವಜೋತ್ ಸಿಂಗ್ ಸಿಧು ತಮ್ಮ ಕಾಳಜಿಗಳನ್ನು ರಾಹುಲ್ ಗಾಂಧಿ ಜೊತೆ ಹಂಚಿಕೊಂಡಿದ್ದಾರೆ. ರಾಜೀನಾಮೆಯನ್ನು ವಾಪಸ್ ಪಡೆದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾಗಿ ಮುಂದುವರೆಯಲಿದ್ದೇನೆ ಎಂದು ಅವರು ರಾಹುಲ್ ಗಾಂಧಿಗೆ ಭರವಸೆ ನೀಡಿದ್ದಾರೆ" ಎಂದು ಹೇಳಿದರು.

ನವಜೋತ್ ಸಿಂಗ್ ಸಿಧು ಈ ವರ್ಷದ ಜುಲೈನಲ್ಲಿ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾಗಿ ಅಧಿಕಾರವಹಿಸಿಕೊಂಡಿದ್ದರು. ಬಳಿಕ ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಜೊತೆ ಅಸಮಾಧಾನ ಉಂಟಾಗಿತ್ತು.

ಪಂಜಾಬ್ ಕಾಂಗ್ರೆಸ್‌ನಲ್ಲಿನ ಬೆಳವಣಿಗೆ ಹೈಕಮಾಂಡ್ ನಾಯಕರಿಗೆ ಸಂಕಷ್ಟ ತಂದಿತ್ತು. ವರಿಷ್ಠರು ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ಪಡೆದಿದ್ದರು. ಪಂಜಾಬ್‌ನ 16ನೇ ಮುಖ್ಯಮಂತ್ರಿಯಾಗಿ ಚರಣ್‌ಜಿತ್ ಸಿಂಗ್ ಚನ್ನಿ ಅಧಿಕಾರ ಸ್ವೀಕಾರ ಮಾಡಿದ್ದರು.

ಸೆಪ್ಟೆಂಬರ್ 28ರಂದು ನವಜೋತ್ ಸಿಂಗ್ ಸಿಧು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರವನ್ನು ಬರೆದು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಮುಂದುವರೆಯುತ್ತೇನೆ ಎಂದು ಹೇಳಿದ್ದರು.

ರಾಜೀನಾಮೆ ಪತ್ರದಲ್ಲಿ ಅವರು ಹಲವು ವಿಚಾರದಲ್ಲಿ ರಾಜಿಯಾಗಿದ್ದು, ಇದೇ ಕಾರಣಕ್ಕೆ ವ್ಯಕ್ತಿತ್ವದಲ್ಲಿ ಕುಸಿತ ಉಂಟಾಗುತ್ತಿದೆ. ಪಂಜಾಬ್ ರಾಜ್ಯದ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣದಲ್ಲಿ ಯಾವುದೇ ಕಾರಣಕ್ಕೂ ರಾಜಿ ಯಾಗುವುದಿಲ್ಲ ಎಂದು ಬರೆದಿದ್ದರು.

ಗುರುವಾರ ನವಜೋತ್ ಸಿಂಗ್ ಸಿಧು ಮಾಧ್ಯಮಗಳ ಜೊತೆ ಮಾತನಾಡಿ, "ಪಕ್ಷದ ಅಧ್ಯಕ್ಷರು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಅವರು ಕೈಗೊಳ್ಳುವ ತೀರ್ಮಾನ ಪಂಜಾಬ್ ಒಳಿತಿಗಾಗಿಯೇ ಆಗಿರುತ್ತದೆ" ಎಂದು ಹೇಳಿದ್ದರು.

ನವಜೋತ್ ಸಿಂಗ್ ಸಿಧು ಗುರುವಾರವೇ ದೆಹಲಿಗೆ ತೆರಳಿದ್ದು, ಎಐಸಿಸಿ ಪ್ರಧಾನ ಕಾರ್ಯರ್ಶಿಗಳಾದ ಕೆ. ಸಿ. ವೇಣುಗೋಪಾಲ್, ಹರೀಶ್‌ ರಾವತ್ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆಗಲೇ ರಾಜ್ಯ ಕಾಂಗ್ರೆಸ್‌ನ ಬಿಕ್ಕಟ್ಟು ಶಮನಗೊಳ್ಳುವ ಸೂಚನೆ ಸಿಕ್ಕಿತ್ತು.

ಸೆಪ್ಟೆಂಬರ್ 28ರಂದು ಸಿಧು ರಾಜೀನಾಮೆ ನೀಡಿದರೂ ಕಾಂಗ್ರೆಸ್ ಹೈಕಮಾಂಡ್ ನಾಯಕರು ಅದನ್ನು ಒಪ್ಪಿರಲಿಲ್ಲ. ಸಿಧು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿರಲೂ ಇಲ್ಲ. ಶುಕ್ರವಾರ ಅವರು ರಾಹುಲ್ ಗಾಂಧಿ ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದಾರೆ.

ಪ್ರಸ್ತುತ ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರವಿದೆ. 2022ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪಕ್ಷದಲ್ಲಿನ ಗೊಂದಲ ಬಗೆಹರಿಸದಿದ್ದರೆ ಚುನಾವಣೆಯಲ್ಲಿ ಕಷ್ಟವಾಗಲಿದೆ ಎಂಬುದು ಹೈಕಮಾಂಡ್ ನಾಯಕರಿಗೂ ತಿಳಿದಿತ್ತು. ಅಂತಿಮವಾಗಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ವರಿಷ್ಠರು ಮುಂದಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+