ಪಂಜಾಬ್ ನಲ್ಲಿ ಮತ್ತೆ ರಾತ್ರಿ ಕರ್ಫ್ಯೂ ವಿಸ್ತರಣೆ
ಚಂಡೀಗಢ, ಡಿಸೆಂಬರ್ 11: ಪಂಜಾಬ್ ನಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯು ನಿರಂತರವಾಗಿ ಏರುತ್ತಿರುವ ಕಾರಣ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ರಾತ್ರಿ ಕರ್ಫ್ಯೂವನ್ನು ವಿಸ್ತರಿಸಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಜನವರಿ 1, 2021ವರೆಗೂ ರಾತ್ರಿ ಕರ್ಫ್ಯೂ ವಿಸ್ತರಿಸಿದ್ದು, ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಈ ಮುನ್ನ ಡಿಸೆಂಬರ್ 1ರಿಂದ ಡಿ.15ರವರೆಗೂ ಕರ್ಫ್ಯೂ ವಿಧಿಸಲಾಗಿದ್ದು, ಈ ತಿಂಗಳ ಕೊನೆಯವರೆಗೆ ನಿಷೇಧ ಮುಂದುವರೆದಿದೆ. ಜೊತೆಗೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಜನರ ಓಡಾಟದ ಮೇಲೂ ನಿಗಾ ಇಡಲಾಗಿದೆ.
ಈ ಕುರಿತು ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಲು ರಾಜ್ಯದ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಅದರಲ್ಲೂ ಮದುವೆ ಮನೆಗಳಲ್ಲಿ ನಿಯಮಗಳ ಉಲ್ಲಂಘನೆ ಕುರಿತು ನಿಗಾ ಇಡಲು ಸೂಚಿಸಲಾಗಿದೆ. ರಾಜ್ಯದಲ್ಲಿ ಕೋವಿಡ್ ನಿಯಮಗಳ ಉಲ್ಲಂಘನೆಯ ಪ್ರಕರಣಗಳು ಮಿತಿ ಮೀರಿದ್ದು, ಸಿಎಂ ಅಮರಿಂದರ್ ಸಿಂಗ್, ಡಿಜಿಪಿ ದಿನಕರ್ ಗುಪ್ತಾ ಅವರಿಗೆ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಿಳಿಸಿದ್ದಾರೆ.

ಸದ್ಯಕ್ಕೆ ಮದುವೆ ಸಮಾರಂಭಕ್ಕೆ ಒಳಾಂಗಣದಲ್ಲಿ 100 ಮಂದಿಗೆ ಹಾಗೂ ಹೊರಾಂಗಣದಲ್ಲಿ 250 ಮಂದಿಗೆ ಅವಕಾಶ ಕಲ್ಪಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದರೆ ದಂಡವನ್ನೂ ಹಾಕಲಾಗುತ್ತಿದೆ.
ಶುಕ್ರವಾರ ಉನ್ನತ ಮಟ್ಟದ ಕೋವಿಡ್ ವಿಶ್ಲೇಷಣಾ ಸಭೆಯನ್ನು ಹಮ್ಮಿಕೊಂಡಿದ್ದು, ಹೋಂ ಐಸೊಲೇಷನ್ ನಲ್ಲಿರುವ ವ್ಯಕ್ತಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿರುವುದಾಗಿ ಆರೋಗ್ಯ ಕಾರ್ಯದರ್ಶಿ ಹುಸಾನ್ ಲಾಲ್ ತಿಳಿಸಿದ್ದಾರೆ. ಕಳೆದ ಮೂರು ವಾರಗಳಿಂದ ಪಂಜಾಬ್ ನಲ್ಲಿ ಕೊರೊನಾ ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಆದರೂ ಮರಣ ಪ್ರಮಾಣ ಆತಂಕ ತಂದಿದೆ ಎಂದು ಹೇಳಿದ್ದಾರೆ.
ಪ್ರತಿನಿತ್ಯ 30000 ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲು ಸಿಎಂ ಸೂಚಿಸಿದ್ದು, ದೆಹಲಿಯ ಪ್ರತಿಭಟನೆ ಮುಗಿಸಿ ವಾಪಸ್ಸಾಗುತ್ತಿರುವ ರೈತರನ್ನೂ ಪರೀಕ್ಷೆಗೆ ಒಳಪಡಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications